<p><strong>ಸಿಂದಗಿ: ‘</strong>ನ್ಯಾ.ನಾಗಮೋಹನ್ ದಾಸ್ ಅವರ ಒಳಮೀಸಲಾತಿ ವರದಿಯಲ್ಲಿ ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ’ ಎಂದು ಖಂಡಿಸಿ ದಲಿತ ಸೇನೆ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಸೋಮವಾರ ಪಟ್ಟಣದ ತಾಲ್ಲೂಕು ಪ್ರಜಾಸೌಧದ ಎದುರು ಪ್ರತಿಭಟನೆ ನಡೆಸಿದರು.</p>.<p>ದಲಿತ ಸೇನೆ ತಾಲ್ಲೂಕು ಸಮಿತಿ ಅಧ್ಯಕ್ಷ ಮಹೇಶ ಜಾಬಾನೂರ ಮಾತನಾಡಿ, ‘ನ್ಯಾ.ನಾಗಮೋಹನ್ ದಾಸ್ ಅವರ ಏಕಸದಸ್ಯ ಆಯೋಗವು ಒಳಮೀಸಲಾತಿ ಕುರಿತು ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಪರಿಶಿಷ್ಟ ಜಾತಿಗೆ ಸಂಬಂಧಪಟ್ಟ ಛಲವಾದಿ, ಆದಿದ್ರಾವಿಡ, ಪರಿಯನ್-ಪರೆಯ, ಆದಿಚಂದ್ರ, ಆದಿ ಕರ್ನಾಟಕ ಇನ್ನೂ ಹಲವಾರು ಜಾತಿಗೆ ಸಂಬಂಧಪಟ್ಟ ಜಾತಿಗಳನ್ನು ಬೇರೆ, ಬೇರೆ ಗುಂಪಿಗೆ ಸೇರಿಸಿ ಹೊಲೆಯ ಸಮುದಾಯದ ಜನಸಂಖ್ಯೆಯನ್ನು ಕುಗ್ಗಿಸಲಾಗಿದೆ. ರಾಜಕೀಯವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹೊಲೆಯ ಜಾತಿಯನ್ನು ಮುಗಿಸುವ ಹುನ್ನಾರ ಈ ವರದಿಯಿಂದ ಕಂಡು ಬಂದಿದೆ’ ಎಂದು ಟೀಕಿಸಿದರು.</p>.<p>‘ರಾಜ್ಯ ಸರ್ಕಾರ ಆ.19ರಂದು ನಡೆಯುವ ವಿಶೇಷ ಸಚಿವ ಸಂಪುಟದಲ್ಲಿ ವರದಿ ಕುರಿತಾಗಿ ವಿಸ್ತೃತವಾಗಿ ಚರ್ಚಿಸಿ ಆಗಿರುವ ಪ್ರಮಾದವನ್ನು ಸರಿಪಡಿಸಿ ಇನ್ನೊಮ್ಮೆ ಸಮೀಕ್ಷೆ ನಡೆಸಿ ಬಲಗೈ ಸಮುದಾಯಕ್ಕೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p>ಗೊಲ್ಲಾಳಪ್ಪಗೌಡ ಪಾಟೀಲ ಗೋಲಗೇರಿ, ಹುಯೋಗಿ ತಳ್ಳೊಳ್ಳಿ, ಎಸ್.ಬಿ.ಖಾನಾಪೂರ ವಕೀಲ, ರಮೇಶ ನಡುವಿನಕೇರಿ ಮಾತನಾಡಿದರು.</p>.<p>ಪ್ರತಿಭಟನಕಾರರು ತಹಶೀಲ್ದಾರ್ ಕರೆಪ್ಪ ಬೆಳ್ಳಿ ಅವರಿಗೆ ಮನವಿ ಸಲ್ಲಿಸಿದರು. ಬಸವರಾಜ ತಳಕೇರಿ, ಹನುಮಂತ ಯಂಟಮಾನ, ಉಮೇಶ ಹಜೇನವರ, ಅರ್ಜುನ ಜಾಬಾನೂರ, ದೇವೀಂದ್ರ ಪೂಜಾರಿ, ತಿರುಪತಿ ಬಂಡಿವಡ್ಡರ ಹಾಗೂ ಪ್ರಕಾಶ ಹಾಲಹಳ್ಳಿ, ಶರಣು ಮಾಡಬಾಳ, ಶಿವೂ ಸುಲ್ಪಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ: ‘</strong>ನ್ಯಾ.ನಾಗಮೋಹನ್ ದಾಸ್ ಅವರ ಒಳಮೀಸಲಾತಿ ವರದಿಯಲ್ಲಿ ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ’ ಎಂದು ಖಂಡಿಸಿ ದಲಿತ ಸೇನೆ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಸೋಮವಾರ ಪಟ್ಟಣದ ತಾಲ್ಲೂಕು ಪ್ರಜಾಸೌಧದ ಎದುರು ಪ್ರತಿಭಟನೆ ನಡೆಸಿದರು.</p>.<p>ದಲಿತ ಸೇನೆ ತಾಲ್ಲೂಕು ಸಮಿತಿ ಅಧ್ಯಕ್ಷ ಮಹೇಶ ಜಾಬಾನೂರ ಮಾತನಾಡಿ, ‘ನ್ಯಾ.ನಾಗಮೋಹನ್ ದಾಸ್ ಅವರ ಏಕಸದಸ್ಯ ಆಯೋಗವು ಒಳಮೀಸಲಾತಿ ಕುರಿತು ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಪರಿಶಿಷ್ಟ ಜಾತಿಗೆ ಸಂಬಂಧಪಟ್ಟ ಛಲವಾದಿ, ಆದಿದ್ರಾವಿಡ, ಪರಿಯನ್-ಪರೆಯ, ಆದಿಚಂದ್ರ, ಆದಿ ಕರ್ನಾಟಕ ಇನ್ನೂ ಹಲವಾರು ಜಾತಿಗೆ ಸಂಬಂಧಪಟ್ಟ ಜಾತಿಗಳನ್ನು ಬೇರೆ, ಬೇರೆ ಗುಂಪಿಗೆ ಸೇರಿಸಿ ಹೊಲೆಯ ಸಮುದಾಯದ ಜನಸಂಖ್ಯೆಯನ್ನು ಕುಗ್ಗಿಸಲಾಗಿದೆ. ರಾಜಕೀಯವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹೊಲೆಯ ಜಾತಿಯನ್ನು ಮುಗಿಸುವ ಹುನ್ನಾರ ಈ ವರದಿಯಿಂದ ಕಂಡು ಬಂದಿದೆ’ ಎಂದು ಟೀಕಿಸಿದರು.</p>.<p>‘ರಾಜ್ಯ ಸರ್ಕಾರ ಆ.19ರಂದು ನಡೆಯುವ ವಿಶೇಷ ಸಚಿವ ಸಂಪುಟದಲ್ಲಿ ವರದಿ ಕುರಿತಾಗಿ ವಿಸ್ತೃತವಾಗಿ ಚರ್ಚಿಸಿ ಆಗಿರುವ ಪ್ರಮಾದವನ್ನು ಸರಿಪಡಿಸಿ ಇನ್ನೊಮ್ಮೆ ಸಮೀಕ್ಷೆ ನಡೆಸಿ ಬಲಗೈ ಸಮುದಾಯಕ್ಕೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p>ಗೊಲ್ಲಾಳಪ್ಪಗೌಡ ಪಾಟೀಲ ಗೋಲಗೇರಿ, ಹುಯೋಗಿ ತಳ್ಳೊಳ್ಳಿ, ಎಸ್.ಬಿ.ಖಾನಾಪೂರ ವಕೀಲ, ರಮೇಶ ನಡುವಿನಕೇರಿ ಮಾತನಾಡಿದರು.</p>.<p>ಪ್ರತಿಭಟನಕಾರರು ತಹಶೀಲ್ದಾರ್ ಕರೆಪ್ಪ ಬೆಳ್ಳಿ ಅವರಿಗೆ ಮನವಿ ಸಲ್ಲಿಸಿದರು. ಬಸವರಾಜ ತಳಕೇರಿ, ಹನುಮಂತ ಯಂಟಮಾನ, ಉಮೇಶ ಹಜೇನವರ, ಅರ್ಜುನ ಜಾಬಾನೂರ, ದೇವೀಂದ್ರ ಪೂಜಾರಿ, ತಿರುಪತಿ ಬಂಡಿವಡ್ಡರ ಹಾಗೂ ಪ್ರಕಾಶ ಹಾಲಹಳ್ಳಿ, ಶರಣು ಮಾಡಬಾಳ, ಶಿವೂ ಸುಲ್ಪಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>