<p><strong>ವಿಜಯಪುರ</strong>: ನಮ್ಮ ಮಾತೃಭಾಷೆ ಕನ್ನಡ ನಮ್ಮ ಕರುಳಿನ ಭಾಷೆಯಾಗಿದೆ. ಕನ್ನಡ ನಾಡು-ನುಡಿಯ ಪ್ರಾಚೀನತೆ ಹಾಗೂ ಕನ್ನಡ ಪ್ರಜ್ಞೆಯನ್ನು ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಜಾಗರೂಕರಾಗಬೇಕು. ಕನ್ನಡ ಭಾಷೆಯ ಮಹತ್ವವನ್ನು ಎತ್ತಿ ಹಿಡಿಯಬೇಕು ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರೊ.ವಿರೇಶ ಬಡಿಗೇರ ಹೇಳಿದರು.</p>.<p>ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದಿಂದ ಹಮ್ಮಿಕೊಂಡಿದ್ದ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ‘ಕನ್ನಡ ಮತ್ತು ಕರ್ನಾಟಕ: ಅಸ್ಮಿತೆಯ ಪ್ರಶ್ನೆಗಳು’ ಎಂಬ ವಿಷಯದ ಕುರಿತು ಮಾತನಾಡಿದರು.</p>.<p>ಕ್ರಿ.ಶ.450ಕ್ಕಿಂತ ಹಿಂದಿನಿಂದಲೂ ಕನ್ನಡವು ಆಡಳಿತ ಭಾಷೆಯಾಗಿತ್ತು. ಕರ್ನಾಟಕವನ್ನು ಆಳಿದ ಕದಂಬರು, ರಾಷ್ಟ್ರಕೂಟರು ಬಾದಾಮಿ ಚಾಲುಕ್ಯರು, ವಿಜಯನಗರ ಅರಸರು, ಮೈಸೂರು ಒಡೆಯರ ವರೆಗೆ ಕನ್ನಡ ಭಾಷೆ ಆಡಳಿತದಲ್ಲಿತ್ತು. ಅನೇಕ ರಾಜಮನೆತನಗಳು ಕನ್ನಡ ಸಾಹಿತ್ಯಕ್ಕೆ ಪೋಷಣೆ ನೀಡಿ, ಕನ್ನಡ ಭಾಷೆಗೆ ಮಹತ್ವ ನೀಡಿದ್ದಾರೆ ಎಂದರು.</p>.<p>ಮಹಿಳಾ ವಿವಿಯ ಕುಲಸಚಿವೆ ಪ್ರೊ.ಆರ್.ಸುನಂದಮ್ಮ ಮಾತನಾಡಿ, ಭಾಷಾವಾರು ಪ್ರಾಂತಗಳು ಮತ್ತು ಏಕೀಕರಣ ಚಳುವಳಿ ಕುರಿತು ಮಾಹಿತಿ ನೀಡಿ, ಕನ್ನಡ - ಕರ್ನಾಟಕ- ಕನ್ನಡಿಗ ಇವುಗಳ ಕುರಿತು ವಿಶ್ಲೇಷಣೆ ನೀಡಿದರು.</p>.<p>ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಮಾತೃಭಾಷೆಯಲ್ಲಿ ಮಾತನಾಡುವುದು ವ್ಯವಹರಿಸುವುದು ಮಾನವನ ಹಕ್ಕು. ಕನ್ನಡವು ಆಡಳಿತ ಭಾಷೆ, ವ್ಯವಹಾರದ ಭಾಷೆ ಹಾಗೂ ಉದ್ಯೋಗದ ಭಾಷೆಯಾಗಬೇಕು ಎಂದು ಹೇಳಿದರು.</p>.<p>ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿಯೂ ಕನ್ನಡದ ಬಳಕೆಯ ಅವಶ್ಯಕತೆಯನ್ನು ತಿಳಿಸಿದ ಅವರು, ರಾಜ್ಯ-ರಾಷ್ಟ್ರಮಟ್ಟದಲ್ಲಿ ಹಾಗೂ ಜಾಗತಿಕ ಮಟ್ಟದಲ್ಲಿ ಕನ್ನಡ ಭಾಷೆಯ ಸ್ಥಾನಮಾನಗಳ ಬಗ್ಗೆ ವಿವರಿಸಿದರು.</p>.<p>ವಿವಿಯ ಆವರಣದಲ್ಲಿ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಧ್ವಜಾರೋಹಣ ನೆರವೇರಿಸಿದ್ದರು. ಕುಲಸಚಿವೆ ಪ್ರೊ.ಆರ್.ಸುನಂದಮ್ಮ, ಮೌಲ್ಯಮಾಪನ ಕುಲಸಚಿವ ಪ್ರೊ.ರಮೇಶ್ ಕೆ. ಇದ್ದರು.</p>.<p>66ನೇ ರಾಜ್ಯೋತ್ಸವ ವಿಶೇಷ ಆಚರಣೆಯ ಪ್ರಯುಕ್ತ ವಿದ್ಯಾರ್ಥಿನಿಯರಿಗಾಗಿ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆ ಮತ್ತು ಹಾಡುಗಾರಿಕೆಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.</p>.<p>ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು.</p>.<p>ಕಾರ್ಯಕ್ರಮ ಸಂಚಾಲಕ ಡಾ.ನಾರಾಯಣ, ಸಂಶೋಧನಾ ವಿದ್ಯಾರ್ಥಿನಿಯರಾದ ತ್ರಿವೇಣಿ ಬನಸೋಡೆ, ಲಕ್ಷ್ಮೀ ಅಂಗಡಿ, ಕರಿಷ್ಮಾ ಕಪೂರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ನಮ್ಮ ಮಾತೃಭಾಷೆ ಕನ್ನಡ ನಮ್ಮ ಕರುಳಿನ ಭಾಷೆಯಾಗಿದೆ. ಕನ್ನಡ ನಾಡು-ನುಡಿಯ ಪ್ರಾಚೀನತೆ ಹಾಗೂ ಕನ್ನಡ ಪ್ರಜ್ಞೆಯನ್ನು ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಜಾಗರೂಕರಾಗಬೇಕು. ಕನ್ನಡ ಭಾಷೆಯ ಮಹತ್ವವನ್ನು ಎತ್ತಿ ಹಿಡಿಯಬೇಕು ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರೊ.ವಿರೇಶ ಬಡಿಗೇರ ಹೇಳಿದರು.</p>.<p>ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದಿಂದ ಹಮ್ಮಿಕೊಂಡಿದ್ದ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ‘ಕನ್ನಡ ಮತ್ತು ಕರ್ನಾಟಕ: ಅಸ್ಮಿತೆಯ ಪ್ರಶ್ನೆಗಳು’ ಎಂಬ ವಿಷಯದ ಕುರಿತು ಮಾತನಾಡಿದರು.</p>.<p>ಕ್ರಿ.ಶ.450ಕ್ಕಿಂತ ಹಿಂದಿನಿಂದಲೂ ಕನ್ನಡವು ಆಡಳಿತ ಭಾಷೆಯಾಗಿತ್ತು. ಕರ್ನಾಟಕವನ್ನು ಆಳಿದ ಕದಂಬರು, ರಾಷ್ಟ್ರಕೂಟರು ಬಾದಾಮಿ ಚಾಲುಕ್ಯರು, ವಿಜಯನಗರ ಅರಸರು, ಮೈಸೂರು ಒಡೆಯರ ವರೆಗೆ ಕನ್ನಡ ಭಾಷೆ ಆಡಳಿತದಲ್ಲಿತ್ತು. ಅನೇಕ ರಾಜಮನೆತನಗಳು ಕನ್ನಡ ಸಾಹಿತ್ಯಕ್ಕೆ ಪೋಷಣೆ ನೀಡಿ, ಕನ್ನಡ ಭಾಷೆಗೆ ಮಹತ್ವ ನೀಡಿದ್ದಾರೆ ಎಂದರು.</p>.<p>ಮಹಿಳಾ ವಿವಿಯ ಕುಲಸಚಿವೆ ಪ್ರೊ.ಆರ್.ಸುನಂದಮ್ಮ ಮಾತನಾಡಿ, ಭಾಷಾವಾರು ಪ್ರಾಂತಗಳು ಮತ್ತು ಏಕೀಕರಣ ಚಳುವಳಿ ಕುರಿತು ಮಾಹಿತಿ ನೀಡಿ, ಕನ್ನಡ - ಕರ್ನಾಟಕ- ಕನ್ನಡಿಗ ಇವುಗಳ ಕುರಿತು ವಿಶ್ಲೇಷಣೆ ನೀಡಿದರು.</p>.<p>ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಮಾತೃಭಾಷೆಯಲ್ಲಿ ಮಾತನಾಡುವುದು ವ್ಯವಹರಿಸುವುದು ಮಾನವನ ಹಕ್ಕು. ಕನ್ನಡವು ಆಡಳಿತ ಭಾಷೆ, ವ್ಯವಹಾರದ ಭಾಷೆ ಹಾಗೂ ಉದ್ಯೋಗದ ಭಾಷೆಯಾಗಬೇಕು ಎಂದು ಹೇಳಿದರು.</p>.<p>ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿಯೂ ಕನ್ನಡದ ಬಳಕೆಯ ಅವಶ್ಯಕತೆಯನ್ನು ತಿಳಿಸಿದ ಅವರು, ರಾಜ್ಯ-ರಾಷ್ಟ್ರಮಟ್ಟದಲ್ಲಿ ಹಾಗೂ ಜಾಗತಿಕ ಮಟ್ಟದಲ್ಲಿ ಕನ್ನಡ ಭಾಷೆಯ ಸ್ಥಾನಮಾನಗಳ ಬಗ್ಗೆ ವಿವರಿಸಿದರು.</p>.<p>ವಿವಿಯ ಆವರಣದಲ್ಲಿ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಧ್ವಜಾರೋಹಣ ನೆರವೇರಿಸಿದ್ದರು. ಕುಲಸಚಿವೆ ಪ್ರೊ.ಆರ್.ಸುನಂದಮ್ಮ, ಮೌಲ್ಯಮಾಪನ ಕುಲಸಚಿವ ಪ್ರೊ.ರಮೇಶ್ ಕೆ. ಇದ್ದರು.</p>.<p>66ನೇ ರಾಜ್ಯೋತ್ಸವ ವಿಶೇಷ ಆಚರಣೆಯ ಪ್ರಯುಕ್ತ ವಿದ್ಯಾರ್ಥಿನಿಯರಿಗಾಗಿ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆ ಮತ್ತು ಹಾಡುಗಾರಿಕೆಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.</p>.<p>ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು.</p>.<p>ಕಾರ್ಯಕ್ರಮ ಸಂಚಾಲಕ ಡಾ.ನಾರಾಯಣ, ಸಂಶೋಧನಾ ವಿದ್ಯಾರ್ಥಿನಿಯರಾದ ತ್ರಿವೇಣಿ ಬನಸೋಡೆ, ಲಕ್ಷ್ಮೀ ಅಂಗಡಿ, ಕರಿಷ್ಮಾ ಕಪೂರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>