<p><strong>ವಿಜಯಪುರ: </strong>ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀ ಆದರ್ಶ ಜೀವನದ ಕುರಿತು 500 ಕವಿಗಳಿಂದ ಏಕಕಾಲದಲ್ಲಿ ಕವನ ರಚಿಸಿ, ವಿಶ್ವ ದಾಖಲೆ ಮಾಡಲು ನಿರ್ಧರಿಸಲಾಗಿದೆ ಎಂದು ಧಾರವಾಡದ ಕನ್ನಡ ಬುಕ್ ಆಫ್ ರೆಕಾರ್ಡ್ಸ್ನ ಸಂಸ್ಥಾಪಕ ಅಧ್ಯಕ್ಷ ಮಂಜುನಾಥ ಬಾರಗೇರ ತಿಳಿಸಿದ್ದಾರೆ.</p>.<p>ಚೆನ್ನೈನ ಯೂನಿರ್ವಸಲ್ ಅಚಿವರ್ಸ್ ಬುಕ್ ಆಫ್ ರೆಕಾಡ್ಸ್ ಸಹಯೋಗದಲ್ಲಿ ಮಾರ್ಚ್ 19ರಂದು ವಿಜಯಪುರದ ಜ್ಞಾನ ಯೋಗಾಶ್ರಮದ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.</p>.<p>ರಾಜ್ಯದ 500 ಕವಿಗಳಿಂದ ಏಕಕಾಲದಲ್ಲಿ ಸಿದ್ಧೇಶ್ವರ ಶ್ರೀಗಳ ಕುರಿತು 20 ನಿಮಿಷ 23 ಸೆಕೆಂಡ್ ಗಳಲ್ಲಿ ಕವನ, ಪ್ರಬಂಧ ಬರೆಯುವ ಮೂಲಕ ವಿಶ್ವದಾಖಲೆ ಬರೆಯಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.</p>.<p>ಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಮಾಡುವ ಈ ವಿಶ್ವ ದಾಖಲೆಯ ಕಾರ್ಯಕ್ರಮಕ್ಕೆ ಸಾಹಿತಿಗಳು ಮತ್ತು ಯುವ ಕವಿಗಳು ಭಾಗವಹಿಸಬಹುದಾಗಿದೆ ಎಂದು ಹೇಳಿದರು.</p>.<p>ಅಂದು ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕವಿಗಳು, ಸಾಹಿತಿಗಳಿಗೆ ಜ್ಞಾನಯೋಗಾಶ್ರಮದ ಅಧ್ಯಕ್ಷರಾದ ಬಸವಲಿಂಗ ಸ್ವಾಮೀಜಿ ಅವರು ವಸತಿ ಮತ್ತು ಪ್ರಸಾದದ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ ಎಂದರು.</p>.<p>ಈ ಕಾರ್ಯಕ್ರಮದಲ್ಲಿ ದಾಖಲಾಗುವ ಕವನಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.</p>.<p>ಭಾಗವಹಿಸುವ ಎಲ್ಲ ಕವಿಗಳಿಗೆ ವಿಶ್ವ ದಾಖಲೆಯ ಪ್ರಮಾಣಪತ್ರ ಮತ್ತು ಕನ್ನಡ ಬುಕ್ ಆಫ್ ರೆಕಾರ್ಡ್ಸ್ ಪ್ರಮಾಣಪತ್ರ ದೊರೆಯಲಿದೆ ಎಂದು ತಿಳಿಸಿದರು.</p>.<p>ಈ ವಿಶ್ವ ದಾಖಲೆ ಕಾರ್ಯಕ್ರಮ ಮಾರ್ಚ್ 19ರಂದು ಬೆಳಿಗ್ಗೆ10ಕ್ಕೆ ವಿಜಯಪುರ ಜ್ಞಾನ ಯೋಗಾಶ್ರಮದಲ್ಲಿ ಆಯೋಜಿಸಲಾಗಿದೆ. ಭಾಗವಹಿಸುವ ಕವಿಗಳು ಮಾರ್ಚ್ 8ರ ಒಳಗೆ ನೋಂದಣಿ ಮಾಡಿಕೊಳ್ಳಲು ತಿಳಿಸಲಾಗಿದೆ.</p>.<p>ಮಾಹಿತಿ ಮತ್ತು ಹೆಸರು ನೋಂದಾಣಿಗಾಗಿ ಮಂಜುನಾಥ ಬಾರಗೇರ ಅವರ ಮೊಬೈಲ್ ಸಂಖ್ಯೆ 9886262204/8904174406 ಅಥವಾ ಬಾಗಲಕೋಟೆಯ ಸದಾನಂದ ಏಳಗಂಟಿ ಅವರ ಮೊ.ನಂ. 9945102011 ಅಥವಾ ವಿಜಯಪುರದ ಶಂಕರ ಬೈಜಬಾಳ ಅವರ ಮೊ.ನಂ. 9448751980 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀ ಆದರ್ಶ ಜೀವನದ ಕುರಿತು 500 ಕವಿಗಳಿಂದ ಏಕಕಾಲದಲ್ಲಿ ಕವನ ರಚಿಸಿ, ವಿಶ್ವ ದಾಖಲೆ ಮಾಡಲು ನಿರ್ಧರಿಸಲಾಗಿದೆ ಎಂದು ಧಾರವಾಡದ ಕನ್ನಡ ಬುಕ್ ಆಫ್ ರೆಕಾರ್ಡ್ಸ್ನ ಸಂಸ್ಥಾಪಕ ಅಧ್ಯಕ್ಷ ಮಂಜುನಾಥ ಬಾರಗೇರ ತಿಳಿಸಿದ್ದಾರೆ.</p>.<p>ಚೆನ್ನೈನ ಯೂನಿರ್ವಸಲ್ ಅಚಿವರ್ಸ್ ಬುಕ್ ಆಫ್ ರೆಕಾಡ್ಸ್ ಸಹಯೋಗದಲ್ಲಿ ಮಾರ್ಚ್ 19ರಂದು ವಿಜಯಪುರದ ಜ್ಞಾನ ಯೋಗಾಶ್ರಮದ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.</p>.<p>ರಾಜ್ಯದ 500 ಕವಿಗಳಿಂದ ಏಕಕಾಲದಲ್ಲಿ ಸಿದ್ಧೇಶ್ವರ ಶ್ರೀಗಳ ಕುರಿತು 20 ನಿಮಿಷ 23 ಸೆಕೆಂಡ್ ಗಳಲ್ಲಿ ಕವನ, ಪ್ರಬಂಧ ಬರೆಯುವ ಮೂಲಕ ವಿಶ್ವದಾಖಲೆ ಬರೆಯಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.</p>.<p>ಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಮಾಡುವ ಈ ವಿಶ್ವ ದಾಖಲೆಯ ಕಾರ್ಯಕ್ರಮಕ್ಕೆ ಸಾಹಿತಿಗಳು ಮತ್ತು ಯುವ ಕವಿಗಳು ಭಾಗವಹಿಸಬಹುದಾಗಿದೆ ಎಂದು ಹೇಳಿದರು.</p>.<p>ಅಂದು ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕವಿಗಳು, ಸಾಹಿತಿಗಳಿಗೆ ಜ್ಞಾನಯೋಗಾಶ್ರಮದ ಅಧ್ಯಕ್ಷರಾದ ಬಸವಲಿಂಗ ಸ್ವಾಮೀಜಿ ಅವರು ವಸತಿ ಮತ್ತು ಪ್ರಸಾದದ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ ಎಂದರು.</p>.<p>ಈ ಕಾರ್ಯಕ್ರಮದಲ್ಲಿ ದಾಖಲಾಗುವ ಕವನಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.</p>.<p>ಭಾಗವಹಿಸುವ ಎಲ್ಲ ಕವಿಗಳಿಗೆ ವಿಶ್ವ ದಾಖಲೆಯ ಪ್ರಮಾಣಪತ್ರ ಮತ್ತು ಕನ್ನಡ ಬುಕ್ ಆಫ್ ರೆಕಾರ್ಡ್ಸ್ ಪ್ರಮಾಣಪತ್ರ ದೊರೆಯಲಿದೆ ಎಂದು ತಿಳಿಸಿದರು.</p>.<p>ಈ ವಿಶ್ವ ದಾಖಲೆ ಕಾರ್ಯಕ್ರಮ ಮಾರ್ಚ್ 19ರಂದು ಬೆಳಿಗ್ಗೆ10ಕ್ಕೆ ವಿಜಯಪುರ ಜ್ಞಾನ ಯೋಗಾಶ್ರಮದಲ್ಲಿ ಆಯೋಜಿಸಲಾಗಿದೆ. ಭಾಗವಹಿಸುವ ಕವಿಗಳು ಮಾರ್ಚ್ 8ರ ಒಳಗೆ ನೋಂದಣಿ ಮಾಡಿಕೊಳ್ಳಲು ತಿಳಿಸಲಾಗಿದೆ.</p>.<p>ಮಾಹಿತಿ ಮತ್ತು ಹೆಸರು ನೋಂದಾಣಿಗಾಗಿ ಮಂಜುನಾಥ ಬಾರಗೇರ ಅವರ ಮೊಬೈಲ್ ಸಂಖ್ಯೆ 9886262204/8904174406 ಅಥವಾ ಬಾಗಲಕೋಟೆಯ ಸದಾನಂದ ಏಳಗಂಟಿ ಅವರ ಮೊ.ನಂ. 9945102011 ಅಥವಾ ವಿಜಯಪುರದ ಶಂಕರ ಬೈಜಬಾಳ ಅವರ ಮೊ.ನಂ. 9448751980 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>