ವಿಜಯಪುರ: ಜಿಲ್ಲೆಯ ವಿಜಯಪುರ, ಬಸವನ ಬಾಗೇವಾಡಿ, ಇಂಡಿ ತಾಲ್ಲೂಕಿನ ಗ್ರಾಮೀಣ ಜನ ವಸತಿಗಳು ಹಾಗೂ ಇಂಡಿ ಪಟ್ಟಣ, ಚಡಚಣ, ಮನಗೂಳಿ, ನಿಡಗುಂದಿ ಮತ್ತು ಕೊಲ್ಹಾರ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯನ್ನು ಜಲ ಜೀವನ್ ಮಿಷನ್ ಯೋಜನೆಯಡಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.