<p><strong>ಸಿಂದಗಿ</strong>: ‘ಮತಕ್ಷೇತ್ರದ ಆಲಮೇಲ, ಸಿಂದಗಿ ಅವಳಿ ತಾಲ್ಲೂಕುಗಳಲ್ಲಿನ ಐದಾರು ಹಳ್ಳಿ ಹೊರತುಪಡಿಸಿದರೆ ಉಳಿದೆಡೆ ಜಲಜೀವನ ಯೋಜನೆಯ ಬಗ್ಗೆ ವ್ಯಾಪಕ ದೂರು ಕೇಳಿ ಬಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಯೋಜನೆಗೆ ಅಪಾರ ಪ್ರಮಾಣದಲ್ಲಿ ಹಣ ನೀಡಿದ್ದರೂ ಎಳ್ಳಷ್ಟೂ ಪ್ರಗತಿ ಕಂಡಿಲ್ಲ’ ಎಂದು ಶಾಸಕ ಅಶೋಕ ಮನಗೂಳಿ ಬೇಸರ ವ್ಯಕ್ತಪಡಿಸಿದರು. </p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ಜರುಗಿದ 2025–26ನನೇ ಸಾಲಿನ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಇದು ನಮ್ಮ ಮತಕ್ಷೇತ್ರದ ಸಮಸ್ಯೆ ಮಾತ್ರವಲ್ಲದೆ, ಇಡೀ ರಾಜ್ಯದ ಸಮಸ್ಯೆಯಾಗಿದೆ. ಬೆಳಗಾವಿ ಅಧಿವೇಶನದಲ್ಲೂ ಈ ಬಗ್ಗೆ ಚರ್ಚೆ ನಡೆದಿದೆ. ಜೆಜೆಎಂ ಅತ್ಯುತ್ತಮ ಯೋಜನೆಯಾಗಿದೆ. ಕುಡಿಯುವ ನೀರಿನ ಪೂರೈಕೆಗಾಗಿ ಸರ್ಕಾರವು ಪ್ರತ್ಯೇಕವಾಗಿ ಕರ್ನಾಟಕ ಗ್ರಾಮೀಣ ನೀರು ಸರಬರಾಜು ಇಲಾಖೆಯನ್ನೂ ರಚಿಸಿದೆ. ಈ ಇಲಾಖೆಯ ಅಧಿಕಾರಿಗಳ ಕೆಲಸವಾದರೂ ಏನು? ಜೆಜೆಎಂ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡದಿದ್ದರೆ ಹೇಗೆ’ ಎಂದು ಇಲಾಖೆಯ ಎಇಇ ತಾರಾನಾಥ ಅವರನ್ನು ಪ್ರಶ್ನಿಸಿದರು.</p>.<p>‘ಗ್ರಾಮ ಪಂಚಾಯಿತಿಯಿಂದ ಸರಿಯಾಗಿ ಸಹಕಾರ ಸಿಗುತ್ತಿಲ್ಲ. ಮನೆ ಮನೆಗೆ ನಳ ಕೊಡುವುದು ನಮ್ಮ ಕೆಲಸ. ಅದಕ್ಕೆ ನೀರಿನ ವ್ಯವಸ್ಥೆಯ ನಿರ್ವಹಣೆ ಗ್ರಾಮ ಪಂಚಾಯಿತಿಯಿಂದಲೇ ಆಗಬೇಕು’ ಎಂದು ತಾರಾನಾಥ ಪ್ರತಿಕ್ರಿಯಿಸಿದರು.</p>.<p>‘ಇಲಾಖೆಯ ಇಇ ಮತ್ತು ಎಇಇ ಪ್ರತಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಅಲ್ಲಿನ ಗ್ರಾಮಸ್ಥರಿಂದ ಜೆಜೆಎಂ ಕುರಿತು ಅಭಿಪ್ರಾಯ ಸಂಗ್ರಹಿಸಿ ವರದಿ ಸಲ್ಲಿಸಬೇಕು. ಜಿಲ್ಲಾಮಟ್ಟದ ಕೆಡಿಪಿ ಸಭೆಯಲ್ಲಿ ಈ ಬಗ್ಗೆ ಧ್ವನಿ ಎತ್ತುವೆ. ಸದ್ಯ ಠರಾವು ಪಾಸು ಮಾಡಿ’ ಎಂದು ತಾಲ್ಲೂಕು ಪಂಚಾಯಿತಿ ಇಒಗೆ ಸೂಚಿಸಿದರು.</p>.<p>ಜಿಲ್ಲಾ ಕೆಡಿಪಿ ಸದಸ್ಯ ಶಿವಾನಂದ ಕೊಟಾರಗಸ್ತಿ, ಆಲಮೇಲ ತಾಲ್ಲೂಕು ಪಂಚಾಯಿತಿ ಇಒ ಫರೀದಾ ಪಠಾಣ, ಆಡಳಿತಾಧಿಕಾರಿ ಮಹೇಶ ಪೋತದಾರ, ತಹಶೀಲ್ದಾರ್ ಎಂ.ಎಸ್.ಅರಕೇರಿ, ಸಿಂದಗಿ ತಾಪಂ ಇಒ ರಾಮು ಅಗ್ನಿ, ಆಡಳಿತಾಧಿಕಾರಿ ಸಿ.ಬಿ.ಕುಂಬಾರ, ತಹಶೀಲ್ದಾರ್ ಕರೆಪ್ಪ ಬೆಳ್ಳಿ ಇದ್ದರು. </p>.<p><strong>‘ಓವರ್ ಹೆಡ್ ಟ್ಯಾಂಕ್ ಸೋರಿಕೆ’</strong></p><p> ‘ಕುಮಸಗಿ ಗ್ರಾಮದಲ್ಲಿ ಜೆಜೆಎಂ ಯೋಜನೆಯಡಿ ಹೊಸದಾಗಿ ನಿರ್ಮಾಣಗೊಂಡ 50 ಸಾವಿರ ಲೀಟರ್ ಸಾಮರ್ಥ್ಯದ ಓವರ್ ಹೆಡ್ ಟ್ಯಾಂಕ್ ಸೋರುತ್ತಿದೆ. ಒಂದು ಗಂಟೆಯಲ್ಲೇ ನೀರು ಖಾಲಿಯಾಗುವ ಕಾರಣ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ’ ಎಂದು ಕೆಡಿಪಿ ಸದಸ್ಯ ಅನೀಲ ಉಡಚಾಣ ತಿಳಿಸಿದರು.</p><p> ‘ಶಾಸಕರ ನಿಧಿಯ ₹1 ಕೋಟಿ ವೆಚ್ಚದಲ್ಲಿ ಬಳಗಾನೂರ ಕೆರೆಯಿಂದ ಚಾಂದಕವಠೆ ಗ್ರಾಮಕ್ಕೆ ಕುಡಿಯುವ ನೀರಿನ ಪೈಪ್ಲೈನ್ ಮಾಡಿಸಿದ್ದರೂ ನೀರಿನ ತೊಂದರೆ ಉಂಟಾಗಲು ಕಾರಣವೇನು’ ಎಂದು ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಪ್ರಕಾಶ ಪ್ರಶ್ನಿಸಿದರು. </p><p>‘ಮಾರ್ಗ ಮಧ್ಯೆ ರೈತರು ಪೈಪ್ಗಳನ್ನು ಕತ್ತರಿಸಿ ಹೊಲಗಳಿಗೆ ನೀರು ಹರಿಸುತ್ತಿದ್ದಾರೆ’ ಎಂದು ಜಿಲ್ಲಾ ಕೆಡಿಪಿ ಸದಸ್ಯ ನೂರಅಹ್ಮದ ಅತ್ತಾರ ತಿಳಿಸಿದರು. ‘ಹೊಲಗಳಿಗೆ ಅಕ್ರಮವಾಗಿ ನೀರು ಹರಿಸುವುದನ್ನು ಪೊಲೀಸರ ಭದ್ರತೆಯಲ್ಲಿ ಕಡಿತಗೊಳಿಸಬೇಕು’ ಎಂದು ಶಾಸಕರು ಸೂಚಿಸಿದರು.</p>.<div><blockquote>ಸರ್ಕಾರದ ಯೋಜನೆಗಳು ಸಮಪರ್ಕವಾಗಿ ಅನುಷ್ಠಾನಗೊಳ್ಳಲು ಅಧಿಕಾರಿಗಳ ಪ್ರಾಮಾಣಿಕ ಪ್ರಯತ್ನ ಅವಶ್ಯ. ಎಲ್ಲ ಇಲಾಖೆಗಳ ಅಧಿಕಾರಿಗಳು ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಬೇಕು</blockquote><span class="attribution">–ಅಶೋಕ ಮನಗೂಳಿ, ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ</strong>: ‘ಮತಕ್ಷೇತ್ರದ ಆಲಮೇಲ, ಸಿಂದಗಿ ಅವಳಿ ತಾಲ್ಲೂಕುಗಳಲ್ಲಿನ ಐದಾರು ಹಳ್ಳಿ ಹೊರತುಪಡಿಸಿದರೆ ಉಳಿದೆಡೆ ಜಲಜೀವನ ಯೋಜನೆಯ ಬಗ್ಗೆ ವ್ಯಾಪಕ ದೂರು ಕೇಳಿ ಬಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಯೋಜನೆಗೆ ಅಪಾರ ಪ್ರಮಾಣದಲ್ಲಿ ಹಣ ನೀಡಿದ್ದರೂ ಎಳ್ಳಷ್ಟೂ ಪ್ರಗತಿ ಕಂಡಿಲ್ಲ’ ಎಂದು ಶಾಸಕ ಅಶೋಕ ಮನಗೂಳಿ ಬೇಸರ ವ್ಯಕ್ತಪಡಿಸಿದರು. </p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ಜರುಗಿದ 2025–26ನನೇ ಸಾಲಿನ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಇದು ನಮ್ಮ ಮತಕ್ಷೇತ್ರದ ಸಮಸ್ಯೆ ಮಾತ್ರವಲ್ಲದೆ, ಇಡೀ ರಾಜ್ಯದ ಸಮಸ್ಯೆಯಾಗಿದೆ. ಬೆಳಗಾವಿ ಅಧಿವೇಶನದಲ್ಲೂ ಈ ಬಗ್ಗೆ ಚರ್ಚೆ ನಡೆದಿದೆ. ಜೆಜೆಎಂ ಅತ್ಯುತ್ತಮ ಯೋಜನೆಯಾಗಿದೆ. ಕುಡಿಯುವ ನೀರಿನ ಪೂರೈಕೆಗಾಗಿ ಸರ್ಕಾರವು ಪ್ರತ್ಯೇಕವಾಗಿ ಕರ್ನಾಟಕ ಗ್ರಾಮೀಣ ನೀರು ಸರಬರಾಜು ಇಲಾಖೆಯನ್ನೂ ರಚಿಸಿದೆ. ಈ ಇಲಾಖೆಯ ಅಧಿಕಾರಿಗಳ ಕೆಲಸವಾದರೂ ಏನು? ಜೆಜೆಎಂ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡದಿದ್ದರೆ ಹೇಗೆ’ ಎಂದು ಇಲಾಖೆಯ ಎಇಇ ತಾರಾನಾಥ ಅವರನ್ನು ಪ್ರಶ್ನಿಸಿದರು.</p>.<p>‘ಗ್ರಾಮ ಪಂಚಾಯಿತಿಯಿಂದ ಸರಿಯಾಗಿ ಸಹಕಾರ ಸಿಗುತ್ತಿಲ್ಲ. ಮನೆ ಮನೆಗೆ ನಳ ಕೊಡುವುದು ನಮ್ಮ ಕೆಲಸ. ಅದಕ್ಕೆ ನೀರಿನ ವ್ಯವಸ್ಥೆಯ ನಿರ್ವಹಣೆ ಗ್ರಾಮ ಪಂಚಾಯಿತಿಯಿಂದಲೇ ಆಗಬೇಕು’ ಎಂದು ತಾರಾನಾಥ ಪ್ರತಿಕ್ರಿಯಿಸಿದರು.</p>.<p>‘ಇಲಾಖೆಯ ಇಇ ಮತ್ತು ಎಇಇ ಪ್ರತಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಅಲ್ಲಿನ ಗ್ರಾಮಸ್ಥರಿಂದ ಜೆಜೆಎಂ ಕುರಿತು ಅಭಿಪ್ರಾಯ ಸಂಗ್ರಹಿಸಿ ವರದಿ ಸಲ್ಲಿಸಬೇಕು. ಜಿಲ್ಲಾಮಟ್ಟದ ಕೆಡಿಪಿ ಸಭೆಯಲ್ಲಿ ಈ ಬಗ್ಗೆ ಧ್ವನಿ ಎತ್ತುವೆ. ಸದ್ಯ ಠರಾವು ಪಾಸು ಮಾಡಿ’ ಎಂದು ತಾಲ್ಲೂಕು ಪಂಚಾಯಿತಿ ಇಒಗೆ ಸೂಚಿಸಿದರು.</p>.<p>ಜಿಲ್ಲಾ ಕೆಡಿಪಿ ಸದಸ್ಯ ಶಿವಾನಂದ ಕೊಟಾರಗಸ್ತಿ, ಆಲಮೇಲ ತಾಲ್ಲೂಕು ಪಂಚಾಯಿತಿ ಇಒ ಫರೀದಾ ಪಠಾಣ, ಆಡಳಿತಾಧಿಕಾರಿ ಮಹೇಶ ಪೋತದಾರ, ತಹಶೀಲ್ದಾರ್ ಎಂ.ಎಸ್.ಅರಕೇರಿ, ಸಿಂದಗಿ ತಾಪಂ ಇಒ ರಾಮು ಅಗ್ನಿ, ಆಡಳಿತಾಧಿಕಾರಿ ಸಿ.ಬಿ.ಕುಂಬಾರ, ತಹಶೀಲ್ದಾರ್ ಕರೆಪ್ಪ ಬೆಳ್ಳಿ ಇದ್ದರು. </p>.<p><strong>‘ಓವರ್ ಹೆಡ್ ಟ್ಯಾಂಕ್ ಸೋರಿಕೆ’</strong></p><p> ‘ಕುಮಸಗಿ ಗ್ರಾಮದಲ್ಲಿ ಜೆಜೆಎಂ ಯೋಜನೆಯಡಿ ಹೊಸದಾಗಿ ನಿರ್ಮಾಣಗೊಂಡ 50 ಸಾವಿರ ಲೀಟರ್ ಸಾಮರ್ಥ್ಯದ ಓವರ್ ಹೆಡ್ ಟ್ಯಾಂಕ್ ಸೋರುತ್ತಿದೆ. ಒಂದು ಗಂಟೆಯಲ್ಲೇ ನೀರು ಖಾಲಿಯಾಗುವ ಕಾರಣ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ’ ಎಂದು ಕೆಡಿಪಿ ಸದಸ್ಯ ಅನೀಲ ಉಡಚಾಣ ತಿಳಿಸಿದರು.</p><p> ‘ಶಾಸಕರ ನಿಧಿಯ ₹1 ಕೋಟಿ ವೆಚ್ಚದಲ್ಲಿ ಬಳಗಾನೂರ ಕೆರೆಯಿಂದ ಚಾಂದಕವಠೆ ಗ್ರಾಮಕ್ಕೆ ಕುಡಿಯುವ ನೀರಿನ ಪೈಪ್ಲೈನ್ ಮಾಡಿಸಿದ್ದರೂ ನೀರಿನ ತೊಂದರೆ ಉಂಟಾಗಲು ಕಾರಣವೇನು’ ಎಂದು ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಪ್ರಕಾಶ ಪ್ರಶ್ನಿಸಿದರು. </p><p>‘ಮಾರ್ಗ ಮಧ್ಯೆ ರೈತರು ಪೈಪ್ಗಳನ್ನು ಕತ್ತರಿಸಿ ಹೊಲಗಳಿಗೆ ನೀರು ಹರಿಸುತ್ತಿದ್ದಾರೆ’ ಎಂದು ಜಿಲ್ಲಾ ಕೆಡಿಪಿ ಸದಸ್ಯ ನೂರಅಹ್ಮದ ಅತ್ತಾರ ತಿಳಿಸಿದರು. ‘ಹೊಲಗಳಿಗೆ ಅಕ್ರಮವಾಗಿ ನೀರು ಹರಿಸುವುದನ್ನು ಪೊಲೀಸರ ಭದ್ರತೆಯಲ್ಲಿ ಕಡಿತಗೊಳಿಸಬೇಕು’ ಎಂದು ಶಾಸಕರು ಸೂಚಿಸಿದರು.</p>.<div><blockquote>ಸರ್ಕಾರದ ಯೋಜನೆಗಳು ಸಮಪರ್ಕವಾಗಿ ಅನುಷ್ಠಾನಗೊಳ್ಳಲು ಅಧಿಕಾರಿಗಳ ಪ್ರಾಮಾಣಿಕ ಪ್ರಯತ್ನ ಅವಶ್ಯ. ಎಲ್ಲ ಇಲಾಖೆಗಳ ಅಧಿಕಾರಿಗಳು ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಬೇಕು</blockquote><span class="attribution">–ಅಶೋಕ ಮನಗೂಳಿ, ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>