<p><strong>ಮುದ್ದೇಬಿಹಾಳ</strong>: ಪಟ್ಟಣದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಮಂಗಳವಾರ ಪಿವಿಆರ್ ಇವೆಂಟ್ಸ್ ಹಮ್ಮಿಕೊಂಡಿದ್ದ ಸಂಗೀತ ರಸಸಂಜೆ ಕಾರ್ಯಕ್ರಮದಲ್ಲಿ ಹಿನ್ನೆಲೆ ಗಾಯಕಿ ಅನುರಾಧಾ ಭಟ್, ಜಸ್ಕರಣ್ ಸಿಂಗ್ ಸೇರಿದಂತೆ ಹಲವು ಗಾಯಕರು ತಮ್ಮ ಸುಮಧುರ ಕಂಠದಿಂದ ನೆರೆದ ಜನಸಮೂಹವನ್ನು ಸಂಗೀತ ಲೋಕದಲ್ಲಿ ತೇಲಾಡಿಸಿದರು.</p>.<p>ಜೇನ ದನಿಯೋಳೆ, ಮೀನ ಕಣ್ಣೋಳೆ... ಸೇರಿದಂತ ಹಲವು ಚಲನಚಿತ್ರ ಗೀತೆಗಳನ್ನು ಹಾಡಿ ರಂಜಿಸಿದರು.</p>.<p>ಮಿಮಿಕ್ರಿ ಗೋಪಿ, ಸಂದೇಶ ನಿರ್ಮಾರ್ಗ, ಪೃಥ್ವಿ ಭಟ್, ವಿಜೆ ಹೇಮಲತಾ, ಪುರುಷೋತ್ತಮ, ರಿಷು ಪುರುಷೋತ್ತಮ, ಶ್ರಾವ್ಯಾ, ಹಮೀಶ ಕುಮಾರ ವಿವಿಧ ಚಲನಚಿತ್ರ ಗೀತೆಗಳಿಗೆ ದನಿಯಾದರು.</p>.<p>ಕಾರ್ಯಕ್ರಮದಲ್ಲಿ ಅನ್ನದಾಸೋಹಕ್ಕೆ ದೇಣಿಗೆ ನೀಡಿದ ದಾನಿಗಳನ್ನು ಕಮಿಟಿ ಪರವಾಗಿ ಹಾಗೂ ಜಾತ್ರಾ ಕಮಿಟಿಗೆ ವಿಬಿಸಿ ಮೈದಾನವನ್ನು ಉಚಿತವಾಗಿ ನೀಡಿದ ವೀರಶೈವ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.</p>.<p>ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟೀಮನಿ, ಶಾಸಕ ಸಿ.ಎಸ್.ನಾಡಗೌಡ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದ್ದೇಬಿಹಾಳ</strong>: ಪಟ್ಟಣದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಮಂಗಳವಾರ ಪಿವಿಆರ್ ಇವೆಂಟ್ಸ್ ಹಮ್ಮಿಕೊಂಡಿದ್ದ ಸಂಗೀತ ರಸಸಂಜೆ ಕಾರ್ಯಕ್ರಮದಲ್ಲಿ ಹಿನ್ನೆಲೆ ಗಾಯಕಿ ಅನುರಾಧಾ ಭಟ್, ಜಸ್ಕರಣ್ ಸಿಂಗ್ ಸೇರಿದಂತೆ ಹಲವು ಗಾಯಕರು ತಮ್ಮ ಸುಮಧುರ ಕಂಠದಿಂದ ನೆರೆದ ಜನಸಮೂಹವನ್ನು ಸಂಗೀತ ಲೋಕದಲ್ಲಿ ತೇಲಾಡಿಸಿದರು.</p>.<p>ಜೇನ ದನಿಯೋಳೆ, ಮೀನ ಕಣ್ಣೋಳೆ... ಸೇರಿದಂತ ಹಲವು ಚಲನಚಿತ್ರ ಗೀತೆಗಳನ್ನು ಹಾಡಿ ರಂಜಿಸಿದರು.</p>.<p>ಮಿಮಿಕ್ರಿ ಗೋಪಿ, ಸಂದೇಶ ನಿರ್ಮಾರ್ಗ, ಪೃಥ್ವಿ ಭಟ್, ವಿಜೆ ಹೇಮಲತಾ, ಪುರುಷೋತ್ತಮ, ರಿಷು ಪುರುಷೋತ್ತಮ, ಶ್ರಾವ್ಯಾ, ಹಮೀಶ ಕುಮಾರ ವಿವಿಧ ಚಲನಚಿತ್ರ ಗೀತೆಗಳಿಗೆ ದನಿಯಾದರು.</p>.<p>ಕಾರ್ಯಕ್ರಮದಲ್ಲಿ ಅನ್ನದಾಸೋಹಕ್ಕೆ ದೇಣಿಗೆ ನೀಡಿದ ದಾನಿಗಳನ್ನು ಕಮಿಟಿ ಪರವಾಗಿ ಹಾಗೂ ಜಾತ್ರಾ ಕಮಿಟಿಗೆ ವಿಬಿಸಿ ಮೈದಾನವನ್ನು ಉಚಿತವಾಗಿ ನೀಡಿದ ವೀರಶೈವ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.</p>.<p>ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟೀಮನಿ, ಶಾಸಕ ಸಿ.ಎಸ್.ನಾಡಗೌಡ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>