<p><strong>ವಿಜಯಪುರ</strong>:ರಾಜ್ಯ ಸರ್ಕಾರ ಜಾರಿಗೆ ತಂದಿರುವಮೂರು ಕೃಷಿ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿಸಮಾನ ಮನಸ್ಕ ಸಂಘಟನೆಗಳೊಂದಿಗೆ ಜನಜಾಗೃತಿ ಜಾಥಾ ನಡೆಸಲಾಗುವುದು ಎಂದು ಸಾಮಾಜಿಕ ಹೋರಾಟಗಾರರ ಎಸ್.ಆರ್. ಹಿರೇಮಠ ಒತ್ತಾಯಿಸಿದರು.</p>.<p>ರಾಜ್ಯ ಸರ್ಕಾರ ಜಾರಿಗೊಳಿಸಿರುವ ಜನವಿರೋಧಿ ಕಾಯ್ದೆಗಳ ವಿರುದ್ಧ ಜನಾಂದೋಲನ ಮಹಾಮೈತ್ರಿ ಹಾಗೂ ಪ್ರಗತಿಪರ ಸಂಘಟನೆಗಳ ವೇದಿಕೆಯಿಂದ ಫೆಬ್ರುವರಿ ಕೊನೆಯ ವಾರದಲ್ಲಿ ಬೀದರ್ನ ಬಸವಕಲ್ಯಾಣದಿಂದ ಬೆಂಗಳೂರಿನವರೆಗೆ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗುವುದು ಎಂದರು.</p>.<p>ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ ಜಾನುವಾರು ಹತ್ಯೆ ನಿಷೇಧ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಗಳು ರೈತರ ಪಾಲಿಗೆ ಕರಾಳವಾಗಿವೆ. ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುವ ಈ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಸಮಾಜ ಸುಧಾರಕರ ಸ್ತಬ್ಧಚಿತ್ರಗಳನ್ನೊಳಗೊಂಡ ವಾಹನದಲ್ಲಿ ಜನ ಜಾಗೃತಿ ಜಾಥಾ ನಡೆಯಲಿದೆ. ಮಾರ್ಗದುದ್ದಕ್ಕೂ ಸ್ಥಳೀಯರ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬೆಂಗಳೂರು ತಲುಪಿ, ಧರಣಿ ನಡೆಸಲಾಗುವುದು. ನಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸದಿದ್ದರೆ, ಮುಖ್ಯಮಂತ್ರಿ ನಿವಾಸದ ಎದುರು ಮೌನ ಪ್ರತಿಭಟನೆ ನಡೆಸಲಾಗುವುದು ಎಂದರು.</p>.<p>ಇಂದಿನ ಸರ್ಕಾರಗಳು ನಿರಂತರವಾಗಿ ಜನವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿವೆ ಮತ್ತು ವ್ಯವಸ್ಥಿತವಾಗಿ ಭ್ರಷ್ಟಾಚಾರ ಮಾಡುತ್ತಿದ್ದಾರೆ. ಇವುಗಳ ವಿರುದ್ಧ ಪ್ರತಿ ಜಿಲ್ಲೆಯಲ್ಲಿ ನಾಗರಿಕರ ವೇದಿಕೆಗಳನ್ನು ಮಾಡಿಕೊಂಡು ಪ್ರತಿಭಟನೆ ಮತ್ತು ಚಳವಳಿಗಳನ್ನು ಬಲಿಷ್ಠಗೊಳಿಸಬೇಕು ಎಂದು ಹೇಳಿದರು.</p>.<p>ಪ್ರಗತಿಪರ ಸಂಘಟನೆಯ ಮುಖಂಡರಾದ ಶ್ರೀನಾಥ ಪೂಜಾರಿ, ಅಕ್ರಂ ಮಾಶ್ಯಾಳಕರ್, ಸದಾನಂದ ಮೋದಿ, ಸಿದ್ಧಲಿಂಗ ಬಾಗೇವಾಡಿ, ಇರ್ಫಾನ್ ಶೇಖ್, ನಿರ್ಮಲಾ ಹೊಸಮನಿ, ರಿಜ್ವಾನ್, ಅಕ್ಷಯಕುಮಾರ, ಅಬೂಬಕರ್, ಅಬ್ದುಲ್ ಹಮೀದ್ ಇನಾಂಮದಾರ ಮುಂತಾದವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>:ರಾಜ್ಯ ಸರ್ಕಾರ ಜಾರಿಗೆ ತಂದಿರುವಮೂರು ಕೃಷಿ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿಸಮಾನ ಮನಸ್ಕ ಸಂಘಟನೆಗಳೊಂದಿಗೆ ಜನಜಾಗೃತಿ ಜಾಥಾ ನಡೆಸಲಾಗುವುದು ಎಂದು ಸಾಮಾಜಿಕ ಹೋರಾಟಗಾರರ ಎಸ್.ಆರ್. ಹಿರೇಮಠ ಒತ್ತಾಯಿಸಿದರು.</p>.<p>ರಾಜ್ಯ ಸರ್ಕಾರ ಜಾರಿಗೊಳಿಸಿರುವ ಜನವಿರೋಧಿ ಕಾಯ್ದೆಗಳ ವಿರುದ್ಧ ಜನಾಂದೋಲನ ಮಹಾಮೈತ್ರಿ ಹಾಗೂ ಪ್ರಗತಿಪರ ಸಂಘಟನೆಗಳ ವೇದಿಕೆಯಿಂದ ಫೆಬ್ರುವರಿ ಕೊನೆಯ ವಾರದಲ್ಲಿ ಬೀದರ್ನ ಬಸವಕಲ್ಯಾಣದಿಂದ ಬೆಂಗಳೂರಿನವರೆಗೆ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗುವುದು ಎಂದರು.</p>.<p>ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ ಜಾನುವಾರು ಹತ್ಯೆ ನಿಷೇಧ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಗಳು ರೈತರ ಪಾಲಿಗೆ ಕರಾಳವಾಗಿವೆ. ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುವ ಈ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಸಮಾಜ ಸುಧಾರಕರ ಸ್ತಬ್ಧಚಿತ್ರಗಳನ್ನೊಳಗೊಂಡ ವಾಹನದಲ್ಲಿ ಜನ ಜಾಗೃತಿ ಜಾಥಾ ನಡೆಯಲಿದೆ. ಮಾರ್ಗದುದ್ದಕ್ಕೂ ಸ್ಥಳೀಯರ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬೆಂಗಳೂರು ತಲುಪಿ, ಧರಣಿ ನಡೆಸಲಾಗುವುದು. ನಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸದಿದ್ದರೆ, ಮುಖ್ಯಮಂತ್ರಿ ನಿವಾಸದ ಎದುರು ಮೌನ ಪ್ರತಿಭಟನೆ ನಡೆಸಲಾಗುವುದು ಎಂದರು.</p>.<p>ಇಂದಿನ ಸರ್ಕಾರಗಳು ನಿರಂತರವಾಗಿ ಜನವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿವೆ ಮತ್ತು ವ್ಯವಸ್ಥಿತವಾಗಿ ಭ್ರಷ್ಟಾಚಾರ ಮಾಡುತ್ತಿದ್ದಾರೆ. ಇವುಗಳ ವಿರುದ್ಧ ಪ್ರತಿ ಜಿಲ್ಲೆಯಲ್ಲಿ ನಾಗರಿಕರ ವೇದಿಕೆಗಳನ್ನು ಮಾಡಿಕೊಂಡು ಪ್ರತಿಭಟನೆ ಮತ್ತು ಚಳವಳಿಗಳನ್ನು ಬಲಿಷ್ಠಗೊಳಿಸಬೇಕು ಎಂದು ಹೇಳಿದರು.</p>.<p>ಪ್ರಗತಿಪರ ಸಂಘಟನೆಯ ಮುಖಂಡರಾದ ಶ್ರೀನಾಥ ಪೂಜಾರಿ, ಅಕ್ರಂ ಮಾಶ್ಯಾಳಕರ್, ಸದಾನಂದ ಮೋದಿ, ಸಿದ್ಧಲಿಂಗ ಬಾಗೇವಾಡಿ, ಇರ್ಫಾನ್ ಶೇಖ್, ನಿರ್ಮಲಾ ಹೊಸಮನಿ, ರಿಜ್ವಾನ್, ಅಕ್ಷಯಕುಮಾರ, ಅಬೂಬಕರ್, ಅಬ್ದುಲ್ ಹಮೀದ್ ಇನಾಂಮದಾರ ಮುಂತಾದವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>