<p><strong>ವಿಜಯಪುರ:</strong> ಜೆ.ಡಿ.ಎಸ್ ಮತ್ತು ಆಪಕ್ಷದ ಶಾಸಕರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ದಾಬಾಗಳು ಇದ್ದಂತೆ. ಅವರು ಇದ್ದ ಸ್ಥಳದಲ್ಲಿ ವ್ಯಾಪಾರ ಸರಿಯಾಗಿ ನಡೆದರೆ ಅಲ್ಲಿಯೇ ಇರುತ್ತಾರೆ, ವ್ಯಾಪಾರ ಸರಿ ಇಲ್ಲದಿದ್ದರೆ ಬೇರೊಂದು ಕಡೆ ಸ್ಥಳಾಂತರಗೊಳ್ಳುತ್ತಾರೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಆಲಗೂರ ಲೇವಡಿ ಮಾಡಿದ್ದಾರೆ.</p>.<p>ನಾಗಠಾಣ ಶಾಸಕರಾದ ದೇವಾನಂದ ಚವ್ಹಾಣ ಅವರು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬುದು ಊಹಾಪೂಹ. ಅಲ್ಲದೇ, ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎನ್ನುವುದು ಕೂಡಾ ಶುದ್ಧ ಸುಳ್ಳು.ಮತಕ್ಷೇತ್ರದ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು ಎಂದು ಅವರು ತಿಳಿಸಿದ್ದಾರೆ.</p>.<p>ಈಗಾಗಲೇ ನಾಗಠಾಣ ವಿಧಾನಸಭೆ ಚುನಾವಣೆಗೆನಾನು ತಯಾರಿ ನಡೆಸುತ್ತಿದ್ದೇನೆ. ಶಾಸಕರಾದ ದೇವಾನಂದ ಚವ್ಹಾಣ ಅವರನ್ನು ಕಾಂಗ್ರೆಸ್ ಪಕ್ಷದಿಂದ ಆಹ್ವಾನಿಸಿರುವುದಿಲ್ಲ. ಆದರೂ ಕೆಲವೊಬ್ಬರು ಕಾಂಗ್ರೆಸ್ ಸೇರ್ಪಡೆ ಖಚಿತ ಎನ್ನುವ ರೀತಿಯಲ್ಲಿ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಜೆ.ಡಿ.ಎಸ್ ಮತ್ತು ಆಪಕ್ಷದ ಶಾಸಕರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ದಾಬಾಗಳು ಇದ್ದಂತೆ. ಅವರು ಇದ್ದ ಸ್ಥಳದಲ್ಲಿ ವ್ಯಾಪಾರ ಸರಿಯಾಗಿ ನಡೆದರೆ ಅಲ್ಲಿಯೇ ಇರುತ್ತಾರೆ, ವ್ಯಾಪಾರ ಸರಿ ಇಲ್ಲದಿದ್ದರೆ ಬೇರೊಂದು ಕಡೆ ಸ್ಥಳಾಂತರಗೊಳ್ಳುತ್ತಾರೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಆಲಗೂರ ಲೇವಡಿ ಮಾಡಿದ್ದಾರೆ.</p>.<p>ನಾಗಠಾಣ ಶಾಸಕರಾದ ದೇವಾನಂದ ಚವ್ಹಾಣ ಅವರು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬುದು ಊಹಾಪೂಹ. ಅಲ್ಲದೇ, ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎನ್ನುವುದು ಕೂಡಾ ಶುದ್ಧ ಸುಳ್ಳು.ಮತಕ್ಷೇತ್ರದ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು ಎಂದು ಅವರು ತಿಳಿಸಿದ್ದಾರೆ.</p>.<p>ಈಗಾಗಲೇ ನಾಗಠಾಣ ವಿಧಾನಸಭೆ ಚುನಾವಣೆಗೆನಾನು ತಯಾರಿ ನಡೆಸುತ್ತಿದ್ದೇನೆ. ಶಾಸಕರಾದ ದೇವಾನಂದ ಚವ್ಹಾಣ ಅವರನ್ನು ಕಾಂಗ್ರೆಸ್ ಪಕ್ಷದಿಂದ ಆಹ್ವಾನಿಸಿರುವುದಿಲ್ಲ. ಆದರೂ ಕೆಲವೊಬ್ಬರು ಕಾಂಗ್ರೆಸ್ ಸೇರ್ಪಡೆ ಖಚಿತ ಎನ್ನುವ ರೀತಿಯಲ್ಲಿ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>