<p><strong>ವಿಜಯಪುರ</strong>: ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸಿದ್ದಣ್ಣ ಅವರು ಕೈಗಾರಿಕೋದ್ಯಮಿಯೊಬ್ಬರಿಂದ ಲಂಚ ತೆಗೆದುಕೊಳ್ಳುತ್ತಿದ್ದಾಗ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು, ಲಂಚ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ.</p>.<p>ವಿಜಯಕುಮಾರ ಮನ್ನೂರ ಎಂಬುವವರು ತಮ್ಮ ಪತ್ನಿ ಭಾಗ್ಯಶ್ರೀ ಎಂಬುವವರ ಹೆಸರಿನಲ್ಲಿ ಕೆಐಡಿಬಿ ವ್ಯಾಪ್ತಿಯಲ್ಲಿರುವ ನಂದಿ ಅಗ್ರೋ ಫುಡ್ ಇಂಡಸ್ಟ್ರೀಸ್(ಶುದ್ಧ ಕುಡಿಯುವ ನೀರಿನ ಘಟಕ) ಅನ್ನು ಸಂಗನಗೌಡ ಪಾಟೀಲ ಎಂಬುವವರಿಂದ ಖರೀದಿ ಮಾಡಿದ್ದಾರೆ. ಇದರ ಮೇಲೆ ₹ 20.87 ಲಕ್ಷ ಸರ್ಕಾರದಿಂದ ಸಹಾಯಧನ ಮಂಜೂರಾಗಿದೆ. ಈ ಹಣವನ್ನು ನೀಡದೆ ತಡೆಹಿಡಿಯಬೇಕು ಎಂದು ಸಿದ್ದಣ್ಣಸಂಬಂಧಿಸಿದ ಬ್ಯಾಂಕಿಗೆ ಪತ್ರ ಬರೆದಿದ್ದಾರೆ. </p>.<p>ಅಲ್ಲದೇ, ಈ ಹಣ ಬಿಡುಗಡೆ ಮಾಡಿಸಲು ತಮಗೆ ₹ 1.46 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಸಂಬಂಧ ವಿಜಯಕುಮಾರ್ ಮನ್ನೂರ ಅವರು ಎಸಿಬಿಗೆ ದೂರು ನೀಡಿದ್ದರು.</p>.<p>ಎಸಿಬಿ ಪೊಲೀಸ್ ಉಪಾಧೀಕ್ಷಕ ಎಂ.ಕೆ.ಗಂಗಲ್ ನೇತೃತ್ವದ ತಂಡವು, ಸಿದ್ದಣ್ಣ ಅವರು ಲಂಚ ತೆಗೆದುಕೊಳ್ಳುತ್ತಿದ್ದ ವೇಳೆದಾಳಿ ನಡೆಸಿ ಸಾಕ್ಷಿ ಸಮೇತ ಬಂಧಿಸಿದ್ದಾರೆ.</p>.<p>ಎಸಿಬಿ ಸಿಬ್ಬಂದಿಗಳಾದ ಹರಿಶ್ಚಂದ, ಪರಮೇಶ್ವರ, ಜಿ.ಕವಟಗಿ, ಮಹೇಶ ಪೂಜಾರಿ, ಅಶೋಕ ಸಿಂಧೂರ, ಸುರೇಶ ಜಾಲಗೇರಿ, ಸದಾಶಿವ ಕೊಟ್ಯಾಳ, ಮಾಳಪ್ಪ ಸಲಗೊಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸಿದ್ದಣ್ಣ ಅವರು ಕೈಗಾರಿಕೋದ್ಯಮಿಯೊಬ್ಬರಿಂದ ಲಂಚ ತೆಗೆದುಕೊಳ್ಳುತ್ತಿದ್ದಾಗ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು, ಲಂಚ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ.</p>.<p>ವಿಜಯಕುಮಾರ ಮನ್ನೂರ ಎಂಬುವವರು ತಮ್ಮ ಪತ್ನಿ ಭಾಗ್ಯಶ್ರೀ ಎಂಬುವವರ ಹೆಸರಿನಲ್ಲಿ ಕೆಐಡಿಬಿ ವ್ಯಾಪ್ತಿಯಲ್ಲಿರುವ ನಂದಿ ಅಗ್ರೋ ಫುಡ್ ಇಂಡಸ್ಟ್ರೀಸ್(ಶುದ್ಧ ಕುಡಿಯುವ ನೀರಿನ ಘಟಕ) ಅನ್ನು ಸಂಗನಗೌಡ ಪಾಟೀಲ ಎಂಬುವವರಿಂದ ಖರೀದಿ ಮಾಡಿದ್ದಾರೆ. ಇದರ ಮೇಲೆ ₹ 20.87 ಲಕ್ಷ ಸರ್ಕಾರದಿಂದ ಸಹಾಯಧನ ಮಂಜೂರಾಗಿದೆ. ಈ ಹಣವನ್ನು ನೀಡದೆ ತಡೆಹಿಡಿಯಬೇಕು ಎಂದು ಸಿದ್ದಣ್ಣಸಂಬಂಧಿಸಿದ ಬ್ಯಾಂಕಿಗೆ ಪತ್ರ ಬರೆದಿದ್ದಾರೆ. </p>.<p>ಅಲ್ಲದೇ, ಈ ಹಣ ಬಿಡುಗಡೆ ಮಾಡಿಸಲು ತಮಗೆ ₹ 1.46 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಸಂಬಂಧ ವಿಜಯಕುಮಾರ್ ಮನ್ನೂರ ಅವರು ಎಸಿಬಿಗೆ ದೂರು ನೀಡಿದ್ದರು.</p>.<p>ಎಸಿಬಿ ಪೊಲೀಸ್ ಉಪಾಧೀಕ್ಷಕ ಎಂ.ಕೆ.ಗಂಗಲ್ ನೇತೃತ್ವದ ತಂಡವು, ಸಿದ್ದಣ್ಣ ಅವರು ಲಂಚ ತೆಗೆದುಕೊಳ್ಳುತ್ತಿದ್ದ ವೇಳೆದಾಳಿ ನಡೆಸಿ ಸಾಕ್ಷಿ ಸಮೇತ ಬಂಧಿಸಿದ್ದಾರೆ.</p>.<p>ಎಸಿಬಿ ಸಿಬ್ಬಂದಿಗಳಾದ ಹರಿಶ್ಚಂದ, ಪರಮೇಶ್ವರ, ಜಿ.ಕವಟಗಿ, ಮಹೇಶ ಪೂಜಾರಿ, ಅಶೋಕ ಸಿಂಧೂರ, ಸುರೇಶ ಜಾಲಗೇರಿ, ಸದಾಶಿವ ಕೊಟ್ಯಾಳ, ಮಾಳಪ್ಪ ಸಲಗೊಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>