<p><strong>ವಿಜಯಪುರ: </strong>ಜಿಲ್ಲೆಯ ಕೊಲ್ಹಾರ ಪಟ್ಟಣದ ದಿಗಂಬರೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಕಲ್ಲಿನಾಥ ಸ್ವಾಮೀಜಿ ದವನದ ಹುಣ್ಣಿಮೆ ಅಂಗವಾಗಿ ಬುಧವಾರ ಪಲ್ಲಕ್ಕಿಯಲ್ಲಿ ಕುಳಿತು ಭಕ್ತರಿಂದ ಮೆರವಣಿಗೆ ಮಾಡಿಸಿಕೊಂಡಿದ್ದಾರೆ.</p>.<p>ತಹಶೀಲ್ದಾರ್ ಹಾಗೂ ಪೊಲೀಸರು ಪಲ್ಲಕ್ಕಿ ಮೆರವಣಿಗೆ, ಜಾತ್ರೆ ನಡೆಸದಂತೆ ಸೂಚಿಸಿದ್ದರೂ ಸಹ ಲಾಕ್ಡೌನ್ ನಿಯಮಗಳನ್ನು ಗಾಳಿಗೆ ತೂರಿ ಪಲ್ಲಕ್ಕಿ ಮೆರವಣಿಗೆ ಮಾಡಿಸಿಕೊಂಡಿದ್ದಾರೆ.</p>.<p>‘ಕಲ್ಲಿನಾಥ ಸ್ವಾಮೀಜಿಗೆ ಪಲ್ಲಕ್ಕಿ ಉತ್ಸವ, ಮೆರವಣಿಗೆ ನಡೆಸದಂತೆ ಸೂಚಿಸಲಾಗಿತ್ತು. ನಿಯಮ ಮೀರಿ ಪಲ್ಲಕ್ಕಿ ಮೆರವಣಿಗೆ ನಡೆಸಿರುವುದು ಗಮನಕ್ಕೆ ಬಂದಿದೆ. ಸ್ವಾಮೀಜಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಕೊಲ್ಹಾರ ತಹಶೀಲ್ದಾರ್ ಎಸ್.ಡಿ.ಮುರಾಳ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>