<p><strong>ವಿಜಯಪುರ:</strong> ‘ಕನೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ ಖಂಡಿಸಿ ಹೋರಾಟ ರೂಪುರೇಷೆ ಚರ್ಚಿಸಲು ಬೆಳಗಾವಿಯಲ್ಲಿ ಅ.29ರಂದು ಸಭೆ ನಡೆಸಲಾಗುವುದು’ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭಾನುವಾರ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಹಿಂದೂ ಧರ್ಮ, ವೀರಶೈವ, ಲಿಂಗಾಯತ ಸಮಾಜದವರಿಗೆ ತೊಂದರೆ ಕೊಡುತ್ತಿದೆ. ವೀರಶೈವ ಸಮಾಜವನ್ನು ವಿಭಜನೆ ಮಾಡುತ್ತಿದೆ. ಹಿಂದೂ ಧರ್ಮದ ಸಾಧು ಸಂತರನ್ನೂ ಬಿಡುತ್ತಿಲ್ಲ’ ಎಂದು ಆರೋಪಿಸಿದರು.</p>.<p>‘ಸಭೆಗೆ ಬರುವಂತೆ ಕನೇರಿ ಶ್ರೀಗಳಿಗೂ ಮನವಿ ಮಾಡಿದ್ದೇವೆ’ ಎಂದು ತಿಳಿಸಿದರು. </p>.<p>‘ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಏನೂ ಗೊತ್ತಿಲ್ಲ. ನಿರ್ಬಂಧ ವಾಪಸ್ ಪಡೆಯಲು ಇವರು ಯಾರು? ನಿರ್ಬಂಧ ವಾಪಸ್ ತೆಗೆದುಕೊಳ್ಳಲು ಸಚಿವ ಸಂಪುಟ ಸಂಪೂರ್ಣ ಅಧಿಕಾರ ನೀಡಿದೆ ಎಂದು ಹೇಳಲಿ ನೋಡೋಣ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ‘ಕನೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ ಖಂಡಿಸಿ ಹೋರಾಟ ರೂಪುರೇಷೆ ಚರ್ಚಿಸಲು ಬೆಳಗಾವಿಯಲ್ಲಿ ಅ.29ರಂದು ಸಭೆ ನಡೆಸಲಾಗುವುದು’ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭಾನುವಾರ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಹಿಂದೂ ಧರ್ಮ, ವೀರಶೈವ, ಲಿಂಗಾಯತ ಸಮಾಜದವರಿಗೆ ತೊಂದರೆ ಕೊಡುತ್ತಿದೆ. ವೀರಶೈವ ಸಮಾಜವನ್ನು ವಿಭಜನೆ ಮಾಡುತ್ತಿದೆ. ಹಿಂದೂ ಧರ್ಮದ ಸಾಧು ಸಂತರನ್ನೂ ಬಿಡುತ್ತಿಲ್ಲ’ ಎಂದು ಆರೋಪಿಸಿದರು.</p>.<p>‘ಸಭೆಗೆ ಬರುವಂತೆ ಕನೇರಿ ಶ್ರೀಗಳಿಗೂ ಮನವಿ ಮಾಡಿದ್ದೇವೆ’ ಎಂದು ತಿಳಿಸಿದರು. </p>.<p>‘ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಏನೂ ಗೊತ್ತಿಲ್ಲ. ನಿರ್ಬಂಧ ವಾಪಸ್ ಪಡೆಯಲು ಇವರು ಯಾರು? ನಿರ್ಬಂಧ ವಾಪಸ್ ತೆಗೆದುಕೊಳ್ಳಲು ಸಚಿವ ಸಂಪುಟ ಸಂಪೂರ್ಣ ಅಧಿಕಾರ ನೀಡಿದೆ ಎಂದು ಹೇಳಲಿ ನೋಡೋಣ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>