ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವರಾಜ್‌ಗೆ ‘ಕನ್ನಡ ಕಣ್ಮಣಿ’ ಪ್ರಶಸ್ತಿ

Last Updated 3 ಡಿಸೆಂಬರ್ 2022, 14:48 IST
ಅಕ್ಷರ ಗಾತ್ರ

ವಿಜಯಪುರ: ಬೆಂಗಳೂರಿನ ನವಭಾರತ ಉದಯ ಪ್ರತಿಷ್ಠಾನ ಕೊಡಮಾಡುವ ‘ಕನ್ನಡ ಕಣ್ಮಣಿ’ ಪ್ರಶಸ್ತಿಯನ್ನು ವಿಜಯಪುರ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಿವರಾಜ್ ಬಿರಾದಾರ ಅವರಿಗೆ ನೀಡಿ ಗೌರವಿಸಲಾಗಿದೆ.

ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಅ. ದೇವೆಗೌಡ, ಸಮಾಜ ಸೇವಕ ಮೆಟ್ರೋ ರಮೇಶ, ಚಿಂತಕ ಗೋವಿಂದಹಳ್ಳಿ ಕೃಷ್ಣೇಗೌಡ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಸಮಗ್ರ ಕರ್ನಾಟಕ ಇತಿಹಾಸ ಕೃತಿ ರಚನೆ, ಪ್ರೌಢಶಾಲಾ ಶಿಕ್ಷಕರ ಸಂಘದ ಕ್ರೀಯಾಶೀಲ ಸಂಘಟನೆ, ಸ್ಪರ್ಧಾತ್ಮಕ ವಿದ್ಯಾರ್ಥಿಗಳಿಗೆ ತರಬೇತಿ ಹೀಗೆ ಶಿಕ್ಷಣ ಹಾಗೂ ಕನ್ನಡಪರ ಕಾರ್ಯಚಟುವಟಿಕೆಗಳಲ್ಲಿ ಸೇವೆ ಸಲ್ಲಿಸುತ್ತಿರುವುದನ್ನು ಪರಿಗಣಿಸಿ ಬಿರಾದಾರ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT