<p><strong>ವಿಜಯಪುರ:</strong> ‘ಕನ್ನಡ ಭಾಷೆಗೆ 2 ಸಾವಿರ ವರ್ಷಗಳ ದೀರ್ಘ ಮತ್ತು ಶ್ರೀಮಂತ ಇತಿಹಾಸವಿದ್ದು, ಪಂಪನಿಂದ ಬಾನು ಮುಷ್ತಾಕ್ವರೆಗೆ ಅನೇಕ ಸಾಹಿತಿಗಳು ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ’ ಎಂದು ಮಹಿಳಾ ವಿ.ವಿ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.</p>.<p>ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕ ವಿಭಾಗದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕುಲಸಚಿವರು ವಿದ್ಯಾರ್ಥಿನಿಯರಿಗಾಗಿ ‘ಕನ್ನಡ ಮತ್ತು ಕರ್ನಾಟಕ’ ಕುರಿತ ರಸಪ್ರಶ್ನೆ ಸ್ಪರ್ಧೆ ನಡೆಸಿದರು.</p>.<p>ಮೌಲ್ಯಮಾಪನ ಕುಲಸಚಿವ ಪ್ರೊ.ಬಸವರಾಜ ಎಲ್. ಲಕ್ಕಣ್ಣವರ ಮಾತನಾಡಿ, ‘ಕರ್ನಾಟಕದ ಪ್ರತಿಯೊಬ್ಬ ಕನ್ನಡಿಗರೂ ಕನ್ನಡದಲ್ಲಿ ಮಾತನಾಡುವುದು, ಕನ್ನಡದಲ್ಲಿ ಬರೆಯುವುದು ಮತ್ತು ಕನ್ನಡ ಗ್ರಂಥಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಓದುವ ಅಭ್ಯಾಸ ರೂಢಿಸಿಕೊಂಡಾಗ ಮಾತ್ರ ನಾಡು–ನುಡಿ–ಭಾಷೆ ನಿಜವಾಗಿಯೂ ಬೆಳೆಯಲು ಸಾಧ್ಯ’ ಎಂದು ಹೇಳಿದರು.</p>.<p>ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ನಾರಾಯಣ ಬಿ. ಪವಾರ ಮಾತನಾಡಿ, ಹಳೆಗನ್ನಡದ ಹಲವು ಪದ್ಯಗಳನ್ನು ಉದಾಹರಣೆಯಾಗಿ ವಾಚಿಸಿ, ವಿವಿಧ ಕಾಲಘಟ್ಟಗಳ ಕವಿಗಳು ಮತ್ತು ಕೃತಿಗಳನ್ನು ಪರಿಚಯಿಸುವ ಮೂಲಕ ಸಂಪೂರ್ಣ ಕನ್ನಡ ಸಾಹಿತ್ಯದ ಅವಲೋಕನದ ಬಗ್ಗೆ ಹೇಳಿದರು.</p>.<p>ಸ್ನಾತಕ ವಿಭಾಗದ ವಿಶೇಷಾಧಿಕಾರಿ ಪ್ರೊ.ಸಕ್ಪಾಲ ಹೂವಣ್ಣ ಮಾತನಾಡಿ, ಕನ್ನಡವನ್ನು ಕೇವಲ ವಿಷಯವಷ್ಟೆ ಎಂದುಕೊಳ್ಳದೆ ಉಸಿರಿನಂತೆ ಬದುಕಿನಲ್ಲಿ ಬಳಸಿದಾಗ ಮಾತ್ರ ನಮ್ಮ ಕನ್ನಡ ಭಾಷೆ ಉಳಿದು ಬೆಳೆಯುತ್ತದೆ ಎಂದು ಹೇಳಿದರು.</p>.<p>ರಾಜ್ಯೋತ್ಸವದ ಅಂಗವಾಗಿ ವಿಭಾಗದ ವಿದ್ಯಾರ್ಥಿನಿಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಜೇತರಾದ ವಿದ್ಯಾರ್ಥಿನಿಯರಿಗೆ ನಗದು ಬಹುಮಾನಗಳನ್ನು ವಿತರಿಸಲಾಯಿತು. ಜೊತೆಗೆ 19ನೇ ಅಂತರ್ ಮಹಿಳಾ ಮಹಾವಿದ್ಯಾಲಯಗಳ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.</p>.<p>ವಿಭಾಗದ ಉಪನ್ಯಾಸಕ ಡಾ. ಚಲುವರಾಜು, ಡಾ.ವಿದ್ಯಾ ಪಾಟನಕರ, ಡಾ.ರೂಪಾ ಇಂಗಳೆ ಇದ್ದರು. <br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ‘ಕನ್ನಡ ಭಾಷೆಗೆ 2 ಸಾವಿರ ವರ್ಷಗಳ ದೀರ್ಘ ಮತ್ತು ಶ್ರೀಮಂತ ಇತಿಹಾಸವಿದ್ದು, ಪಂಪನಿಂದ ಬಾನು ಮುಷ್ತಾಕ್ವರೆಗೆ ಅನೇಕ ಸಾಹಿತಿಗಳು ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ’ ಎಂದು ಮಹಿಳಾ ವಿ.ವಿ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.</p>.<p>ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕ ವಿಭಾಗದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕುಲಸಚಿವರು ವಿದ್ಯಾರ್ಥಿನಿಯರಿಗಾಗಿ ‘ಕನ್ನಡ ಮತ್ತು ಕರ್ನಾಟಕ’ ಕುರಿತ ರಸಪ್ರಶ್ನೆ ಸ್ಪರ್ಧೆ ನಡೆಸಿದರು.</p>.<p>ಮೌಲ್ಯಮಾಪನ ಕುಲಸಚಿವ ಪ್ರೊ.ಬಸವರಾಜ ಎಲ್. ಲಕ್ಕಣ್ಣವರ ಮಾತನಾಡಿ, ‘ಕರ್ನಾಟಕದ ಪ್ರತಿಯೊಬ್ಬ ಕನ್ನಡಿಗರೂ ಕನ್ನಡದಲ್ಲಿ ಮಾತನಾಡುವುದು, ಕನ್ನಡದಲ್ಲಿ ಬರೆಯುವುದು ಮತ್ತು ಕನ್ನಡ ಗ್ರಂಥಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಓದುವ ಅಭ್ಯಾಸ ರೂಢಿಸಿಕೊಂಡಾಗ ಮಾತ್ರ ನಾಡು–ನುಡಿ–ಭಾಷೆ ನಿಜವಾಗಿಯೂ ಬೆಳೆಯಲು ಸಾಧ್ಯ’ ಎಂದು ಹೇಳಿದರು.</p>.<p>ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ನಾರಾಯಣ ಬಿ. ಪವಾರ ಮಾತನಾಡಿ, ಹಳೆಗನ್ನಡದ ಹಲವು ಪದ್ಯಗಳನ್ನು ಉದಾಹರಣೆಯಾಗಿ ವಾಚಿಸಿ, ವಿವಿಧ ಕಾಲಘಟ್ಟಗಳ ಕವಿಗಳು ಮತ್ತು ಕೃತಿಗಳನ್ನು ಪರಿಚಯಿಸುವ ಮೂಲಕ ಸಂಪೂರ್ಣ ಕನ್ನಡ ಸಾಹಿತ್ಯದ ಅವಲೋಕನದ ಬಗ್ಗೆ ಹೇಳಿದರು.</p>.<p>ಸ್ನಾತಕ ವಿಭಾಗದ ವಿಶೇಷಾಧಿಕಾರಿ ಪ್ರೊ.ಸಕ್ಪಾಲ ಹೂವಣ್ಣ ಮಾತನಾಡಿ, ಕನ್ನಡವನ್ನು ಕೇವಲ ವಿಷಯವಷ್ಟೆ ಎಂದುಕೊಳ್ಳದೆ ಉಸಿರಿನಂತೆ ಬದುಕಿನಲ್ಲಿ ಬಳಸಿದಾಗ ಮಾತ್ರ ನಮ್ಮ ಕನ್ನಡ ಭಾಷೆ ಉಳಿದು ಬೆಳೆಯುತ್ತದೆ ಎಂದು ಹೇಳಿದರು.</p>.<p>ರಾಜ್ಯೋತ್ಸವದ ಅಂಗವಾಗಿ ವಿಭಾಗದ ವಿದ್ಯಾರ್ಥಿನಿಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಜೇತರಾದ ವಿದ್ಯಾರ್ಥಿನಿಯರಿಗೆ ನಗದು ಬಹುಮಾನಗಳನ್ನು ವಿತರಿಸಲಾಯಿತು. ಜೊತೆಗೆ 19ನೇ ಅಂತರ್ ಮಹಿಳಾ ಮಹಾವಿದ್ಯಾಲಯಗಳ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.</p>.<p>ವಿಭಾಗದ ಉಪನ್ಯಾಸಕ ಡಾ. ಚಲುವರಾಜು, ಡಾ.ವಿದ್ಯಾ ಪಾಟನಕರ, ಡಾ.ರೂಪಾ ಇಂಗಳೆ ಇದ್ದರು. <br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>