ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಆದಾಯದ ಭಾಷೆಯಾಗಬೇಕಿದೆ ಕನ್ನಡ

ಹೆಗ್ಗೋಡಿನ ಹಿರಿಯ ಚಿಂತಕ ಪ್ರಸನ್ನ ಅಭಿಮತ
Last Updated 25 ಸೆಪ್ಟೆಂಬರ್ 2021, 13:16 IST
ಅಕ್ಷರ ಗಾತ್ರ

ವಿಜಯಪುರ: ಕನ್ನಡ ಆದಾಯದ ಭಾಷೆಯಾದರೆ ರಾಜ್ಯದಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ನಿರ್ಲಕ್ಷಿತ ಕ್ಷೇತ್ರಗಳಿಗೆ ಆದ್ಯತೆ ನೀಡಿ, ಅಭಿವೃದ್ಧಿ ಪಡಿಸುವುದು ಸಧ್ಯದ ಅಗತ್ಯವಾಗಿದೆ ಎಂದು ಹೆಗ್ಗೋಡಿನ ಹಿರಿಯ ಚಿಂತಕ ಪ್ರಸನ್ನ ಹೇಳಿದರು.

ನಗರದಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಸಂಶೋಧನ ಕೇಂದ್ರ ಮತ್ತು ಚಿಂತನ ಸಾಂಸ್ಕೃತಿಕ ಬಳಗದ ವತಿಯಿಂದನಡೆದ ಗ್ರಾಮೋದ್ಯೋಗ ಮತ್ತು ಆರ್ಥಿಕತೆ ಕುರಿತು ಉಪನ್ಯಾಸಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಿಳೆಯರು ಸೇರಿದಂತೆ ನಿರ್ಲಕ್ಷಿತರಾಗಿರುವ ಗ್ರಾಮೋದ್ಯೋಗಗಳಿಗೆಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ತಾವು ಅಭಿಯಾನ ಆರಂಭಿಸಿರುವುದಾಗಿ ತಿಳಿಸಿದರು.

ಜ್ಞಾನಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ಮಾತನಾಡಿ, ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕಲ್ಪನೆ ನನಸಾಗಬೇಕಾದರೆ, ನಿಸರ್ಗದ ಸಂರಕ್ಷಣೆ ಮಾಡಬೇಕು. ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡಬೇಕು. ಕೇವಲ ವೃತ್ತಿಪರ ಉದ್ಯೋಗಗಳ ಕಡೆ ಗಮನ ಹರಿಸದೇ, ಸಮಾಜ ಮತ್ತು ಪರಿಸರಕ್ಕೆ ಪೂರಕವಾಗಿರುವ ಕೃಷಿ ಚಟುವಟಿಕೆಗಳಿಗೂಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.

ಕೇಂದ್ರದ ನಿರ್ದೇಶಕ ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ ಮಾತನಾಡಿದರು. ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಡಾ.ಎಂ.ಎಸ್.ಮದಭಾವಿ, ಚಿಂತನ ಬಳಗದ ಕಾರ್ಯದರ್ಶಿ ಡಾ.ಮಹಾಂತೇಶ ಬಿರಾದಾರ, ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷ ವಿ.ಸಿ.ನಾಗಠಾಣ, ಶರಣ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಂ.ಜಿ.ಯಾದವಾಡ, ಪ್ರೊ.ಎಸ್.ಬಿ.ದೊಡಮನಿ, ಎನ್.ಎಸ್.ಹಳ್ಳಿ, ಆಡಳಿತಾಧಿಕಾರಿ ಐ.ಎಸ್.ಕಾಳಪ್ಪನವರ, ಜಗದೀಶ ಗಲಗಲಿ, ಪ್ರೊ.ಬಿ.ಎಚ್.ಹಿರೇಮಠ, ಪ್ರೊ.ಡಿ.ಬಿ.ಭಜಂತ್ರಿ, ಗಂಗಾಧರ ಸಾಲಕ್ಕಿ ಇದ್ದರು.

ಪ್ರಾಚಾರ್ಯ ಜಿ.ಡಿ.ಅಕಮಂಚಿ ಸ್ವಾಗತಿಸಿದರು. ಡಾ.ವಿ.ಡಿ.ಐಹೊಳ್ಳಿ ನಿರೂಪಿಸಿದರು. ಪ್ರೊ.ಎ.ಬಿ.ಬೂದಿಹಾಳ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT