ಬಂಜಾರ ಸಮುದಾಯಕ್ಕೆ ಸೇರಿರುವ ಕಾಂತಾ ನಾಯಕ ಅವರು ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ನಾಗಠಾಣ ಮೀಸಲು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಟಿಕೆಟ್ ಅವರ ಕೈತಪ್ಪಿತ್ತು. ಇದೀಗ ಅವರು ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಚುನಾವಣೆಗೆ ಅಗತ್ಯ ಸಿದ್ಧತೆಯಲ್ಲೂ ತೊಡಗಿದ್ದರು.