ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣ ಮತ್ತು ತಾಲ್ಲೂಕಿನ ವಿವಿಧೆಡೆ ಶನಿವಾರ ಮಧ್ಯಾಹ್ನ ಗುಡುಗು, ಸಿಡಿಲು ಮತ್ತು ಗಾಳಿಯ ಆರ್ಭಟದೊಂದಿಗೆ ಆಲಿಕಲ್ಲು ಮಳೆಯಾಗಿದೆ.
ಸುಮಾರು ಒಂದು ತಾಸು ಆಲಿಕಲ್ಲು ಮಳೆ ಸುರಿದಿದೆ. ಚರಂಡಿ ಉಕ್ಕಿ ರಸ್ತೆ ಮೇಲೆ ನೀರು ಹರಿದ ಪರಿಣಾಮ ಜನ, ವಾಹನ ಸಂಚಾರಕ್ಕೆ ಅಡಚಣೆಯಾಯಿತು. ತಗ್ಗು ಪ್ರದೇಶದ ಮನೆ, ಅಂಗಡಿ, ಮಳಿಗೆಗಳಿಗೆ ನೀರು ನುಗ್ಗಿ, ತೊಂದರೆಯಾಗಿದೆ.
ತಾಳಿಕೋಟೆ ಮತ್ತು ನಾಲತವಾಡ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಗಾಳಿ ಮಳೆಯಾಗಿದೆ. ಆಲಿಕಲ್ಲು ಮಳೆಯಾಗಿರುವುದರಿಂದ ಕೊಯ್ಲಿಗೆ ಬಂದಿರುವ ದ್ರಾಕ್ಷಿ, ಜೋಳ, ಗೋಧಿ ಮತ್ತಿತರರ ಬೆಳೆಗೆ ಹಾನಿಯಾಗಲಿದೆ ಎಂದು ರೈತರು ತಿಳಿಸಿದ್ದಾರೆ.