ವಿಜಯಪುರ: ಸಾಹಿತಿ ಶಂಕರ ಬೈಚಬಾಳ ವಿರಚಿತ ‘ಕನ್ನಡದ ಮಠ ಪುಸ್ತಕ ಜಗದ್ಗುರು ಡಾ. ತೋಂಟದ ಸಿದ್ಧಲಿಂಗ ಶ್ರೀಗಳು’ ಕೃತಿಗೆ 2021ನೇ ಸಾಲಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಗಂಗಮ್ಮ ಶ್ರೀ ಟಿ.ಶಿವಣ್ಣ ದತ್ತಿ ಪ್ರಶಸ್ತಿ ಲಭಿಸಿದೆ.
ಪ್ರಶಸ್ತಿಯು ₹5 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿದ್ದು, ಮಾರ್ಚ್ 12 ರಂದು ಬೆಂಗಳೂರಿನಲ್ಲಿ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಕೇಂದ್ರ ಕಸಾಪ ರಾಜ್ಯ ಘಟಕದ ಅಧ್ಯಕ್ಷ ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.