<p><strong>ವಿಜಯಪುರ: </strong>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಮೇ 9ರಂದು ನಡೆಯಲಿರುವ ಚುನಾವಣಾ ಕಣದಲ್ಲಿ ಅಂತಿಮವಾಗಿ ಆರು ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ.</p>.<p>ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದ ಸೋಮವಾರ ಬಸವರಾಜ ಸುಕಾಲಿ, ಮಹಾದೇವಪ್ಪ ರೆಬಿನಾಳ, ಬಸವರಾಜ ಕುಂಬಾರ, ಶಿವಾನಂದ ಮಂಗಾನವರ, ಜಂಬುನಾಥ ಕಂಚ್ಯಾಣಿ ನಾಮಪತ್ರ ಹಿಂಪಡೆಯುವ ಮೂಲಕ ಕಣದಿಂದ ಹಿಂದೆ ಸರಿದರು.</p>.<p>ಅಂತಿಮ ಕಣದಲ್ಲಿ ಹಾಸಿಂಪೀರ ವಾಲಿಕಾರ, ಮಲ್ಲಿಕಾರ್ಜುನ ಯಂಡಿಗೇರಿ, ಮಲ್ಲಿಕಾರ್ಜುನ ಭೃಂಗೀಮಠ, ಬಂಡೆಪ್ಪ ತೇಲಿ, ಕಲ್ಲಪ್ಪ ಶಿವಶರಣ ಮತ್ತು ಶ್ರೀಶೈಲ ಆಳೂರ ಉಳಿದುಕೊಂಡಿದ್ದಾರೆ.</p>.<p>ಹಾಸಿಂಪೀರ ವಾಲಿಕಾರ, ಮಲ್ಲಿಕಾರ್ಜುನ ಭೃಂಗೀಮಠ, ಬಂಡೆಪ್ಪ ತೇಲಿ ಹಾಗೂ ಮಲ್ಲಿಕಾರ್ಜುನ ಯಂಡಿಗೇರಿ ನಡುವೆ ಚತುಷ್ಕೋನ ಸ್ಪರ್ಧೆ ಏರ್ಪಡುವ ಲಕ್ಷಣ ಇದೆ.</p>.<p>ಜಿಲ್ಲೆಯಲ್ಲಿ 9 ಸಾವಿರಕ್ಕೂ ಅಧಿಕ ಮತಗಳು ಇದ್ದು, ಈಗಾಗಲೇ ಕೆಲ ಅಭ್ಯರ್ಥಿಗಳು ತುರುಸಿನ ಪ್ರಚಾರ ಕೈಗೊಂಡಿದ್ದು,ಯುಗಾದಿ ಹಬ್ಬದ ಬಳಿಕ ಪ್ರಚಾರ ಇನ್ನಷ್ಟು ಚುರುಕುಗೊಳ್ಳಲಿದೆ.</p>.<p>‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಪ್ರಮುಖ ಅಭ್ಯರ್ಥಿ ಹಾಸಿಂಪೀರ ವಾಲಿಕಾರ,ಮತದಾರರು ನನಗೆ ಅವಕಾಶ ನೀಡಿದರೆ ಮೌಲ್ಯಯುತ ಕಾರ್ಯಕ್ರಮಗಳ ಮೂಲಕ ಹಾಗೂ ಸಾಹಿತ್ಯ ಕ್ಷೇತ್ರದ ಎಲ್ಲರಿಗೂ ಸಮಾನ ಅವಕಾಶ ನೀಡುವ ಮೂಲಕ ರಾಜ್ಯದಲ್ಲೇ ವಿಜಯಪುರ ಕಸಾಪ ಘಟಕವನ್ನು ಮಾದರಿಯನ್ನಾಗಿ ರೂಪಿಸುತ್ತೇನೆ ಎಂದರು.</p>.<p>ಜಿಲ್ಲೆಯ ಪ್ರತಿಭಾನ್ವಿತ ಸಾಹಿತಿಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶವಿದೆ. ಎಲ್ಲ ವರ್ಗದವರನ್ನು ಒಳಗೊಳ್ಳುವ ಮೂಲಕ ಕನ್ನಡ ಪರ ಕೆಲಸಗಳನ್ನು ಮಾಡಲಾಗುವುದು ಎಂದದು ಹೇಳಿದರು.</p>.<p><strong>****</strong></p>.<p>ಈಗಾಗಲೇ ಎರಡು ಬಾರಿ ಜಿಲ್ಲೆಯ ಮತದಾರರನ್ನು ಭೇಟಿಯಾಗಿ ಮತಯಾಚಿಸಿದ್ದೇನೆ. ಉತ್ತಮ ಬೆಂಬಲ ವ್ಯಕ್ತವಾಗಿದೆ.ಜಿಲ್ಲೆಯಲ್ಲಿ ಈ ಬಾರಿ ಹೊಸಬರಿಗೆ ಅವಕಾಶ ಮಾಡಿಕೊಡಬೇಕು ಎಂಬ ಚರ್ಚೆ ಚುರುಕುಪಡೆದಿದೆ</p>.<p><strong>ಹಾಸಿಂಪೀರ ವಾಲಿಕಾರ, ಅಭ್ಯರ್ಥಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಮೇ 9ರಂದು ನಡೆಯಲಿರುವ ಚುನಾವಣಾ ಕಣದಲ್ಲಿ ಅಂತಿಮವಾಗಿ ಆರು ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ.</p>.<p>ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದ ಸೋಮವಾರ ಬಸವರಾಜ ಸುಕಾಲಿ, ಮಹಾದೇವಪ್ಪ ರೆಬಿನಾಳ, ಬಸವರಾಜ ಕುಂಬಾರ, ಶಿವಾನಂದ ಮಂಗಾನವರ, ಜಂಬುನಾಥ ಕಂಚ್ಯಾಣಿ ನಾಮಪತ್ರ ಹಿಂಪಡೆಯುವ ಮೂಲಕ ಕಣದಿಂದ ಹಿಂದೆ ಸರಿದರು.</p>.<p>ಅಂತಿಮ ಕಣದಲ್ಲಿ ಹಾಸಿಂಪೀರ ವಾಲಿಕಾರ, ಮಲ್ಲಿಕಾರ್ಜುನ ಯಂಡಿಗೇರಿ, ಮಲ್ಲಿಕಾರ್ಜುನ ಭೃಂಗೀಮಠ, ಬಂಡೆಪ್ಪ ತೇಲಿ, ಕಲ್ಲಪ್ಪ ಶಿವಶರಣ ಮತ್ತು ಶ್ರೀಶೈಲ ಆಳೂರ ಉಳಿದುಕೊಂಡಿದ್ದಾರೆ.</p>.<p>ಹಾಸಿಂಪೀರ ವಾಲಿಕಾರ, ಮಲ್ಲಿಕಾರ್ಜುನ ಭೃಂಗೀಮಠ, ಬಂಡೆಪ್ಪ ತೇಲಿ ಹಾಗೂ ಮಲ್ಲಿಕಾರ್ಜುನ ಯಂಡಿಗೇರಿ ನಡುವೆ ಚತುಷ್ಕೋನ ಸ್ಪರ್ಧೆ ಏರ್ಪಡುವ ಲಕ್ಷಣ ಇದೆ.</p>.<p>ಜಿಲ್ಲೆಯಲ್ಲಿ 9 ಸಾವಿರಕ್ಕೂ ಅಧಿಕ ಮತಗಳು ಇದ್ದು, ಈಗಾಗಲೇ ಕೆಲ ಅಭ್ಯರ್ಥಿಗಳು ತುರುಸಿನ ಪ್ರಚಾರ ಕೈಗೊಂಡಿದ್ದು,ಯುಗಾದಿ ಹಬ್ಬದ ಬಳಿಕ ಪ್ರಚಾರ ಇನ್ನಷ್ಟು ಚುರುಕುಗೊಳ್ಳಲಿದೆ.</p>.<p>‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಪ್ರಮುಖ ಅಭ್ಯರ್ಥಿ ಹಾಸಿಂಪೀರ ವಾಲಿಕಾರ,ಮತದಾರರು ನನಗೆ ಅವಕಾಶ ನೀಡಿದರೆ ಮೌಲ್ಯಯುತ ಕಾರ್ಯಕ್ರಮಗಳ ಮೂಲಕ ಹಾಗೂ ಸಾಹಿತ್ಯ ಕ್ಷೇತ್ರದ ಎಲ್ಲರಿಗೂ ಸಮಾನ ಅವಕಾಶ ನೀಡುವ ಮೂಲಕ ರಾಜ್ಯದಲ್ಲೇ ವಿಜಯಪುರ ಕಸಾಪ ಘಟಕವನ್ನು ಮಾದರಿಯನ್ನಾಗಿ ರೂಪಿಸುತ್ತೇನೆ ಎಂದರು.</p>.<p>ಜಿಲ್ಲೆಯ ಪ್ರತಿಭಾನ್ವಿತ ಸಾಹಿತಿಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶವಿದೆ. ಎಲ್ಲ ವರ್ಗದವರನ್ನು ಒಳಗೊಳ್ಳುವ ಮೂಲಕ ಕನ್ನಡ ಪರ ಕೆಲಸಗಳನ್ನು ಮಾಡಲಾಗುವುದು ಎಂದದು ಹೇಳಿದರು.</p>.<p><strong>****</strong></p>.<p>ಈಗಾಗಲೇ ಎರಡು ಬಾರಿ ಜಿಲ್ಲೆಯ ಮತದಾರರನ್ನು ಭೇಟಿಯಾಗಿ ಮತಯಾಚಿಸಿದ್ದೇನೆ. ಉತ್ತಮ ಬೆಂಬಲ ವ್ಯಕ್ತವಾಗಿದೆ.ಜಿಲ್ಲೆಯಲ್ಲಿ ಈ ಬಾರಿ ಹೊಸಬರಿಗೆ ಅವಕಾಶ ಮಾಡಿಕೊಡಬೇಕು ಎಂಬ ಚರ್ಚೆ ಚುರುಕುಪಡೆದಿದೆ</p>.<p><strong>ಹಾಸಿಂಪೀರ ವಾಲಿಕಾರ, ಅಭ್ಯರ್ಥಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>