<p><strong>ವಿಜಯಪುರ:</strong> ‘ರಾಜ್ಯದಲ್ಲಿ 1999ರಲ್ಲಿ ವಿರೋಧ ಪಕ್ಷದ ನಾಯಕನಾಗಿ ಹೋರಾಟ ಮಾಡಿದೆ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದೆ. ಆದರೆ, ನಾಲ್ಕು ತಿಂಗಳಲ್ಲಿ ಪಕ್ಷ ಸೇರಿದ ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾದರು. ರಾಜಕೀಯವಾಗಿ ಅವಕಾಶ ತಪ್ಪಿರುವ ಬಗ್ಗೆ ಬೇಸರವಿಲ್ಲ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p>.<p>ನಗರದ ಬಿಎಲ್ಡಿಇ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಫ.ಗು.ಹಳಕಟ್ಟಿ, ಬಂಥನಾಳ ಸಂಗನಬಸವ ಶಿವಯೋಗಿಗಳು, ಬಿ.ಎಂ.ಪಾಟೀಲ ಮತ್ತು ಬಂಗಾರಮ್ಮ ಸಜ್ಜನ ಸ್ಮರಣೆ ಕಾರ್ಯಕ್ರಮದಲ್ಲಿ ಭಾನುವಾರ ಅವರು ಮಾತನಾಡಿದರು.</p>.<p>‘ನಾನು ಎಂದೂ ಅಧಿಕಾರದ ಹಿಂದೆ ಹೋಗಿಲ್ಲ, ನನ್ನ ಪ್ರಯತ್ನಗಳ ಫಲವಾಗಿ ಅಧಿಕಾರ ಪಡೆದುಕೊಂಡಿದ್ದೇನೆ. ಕಾಂಗ್ರೆಸ್ ಅಧ್ಯಕ್ಷ ಹುದ್ದೆಯಿಂದ ಎಐಸಿಸಿ ಹುದ್ದೆವರೆಗೂ ಬಂದಿರುವೆ, ಮನಸ್ಸಿನಲ್ಲಿ ದುರಾಸೆ ಇಟ್ಟುಕೊಂಡು ಮಾಡುವ ಕೆಲಸಗಳಿಂದ ಏನೂ ಮಾಡಲು ಸಾಧ್ಯವಿಲ್ಲ’ ಎಂದರು.</p>.<p>‘ಆರು ವರ್ಷದ ಬಾಲಕನಾಗಿದ್ದಾಗ ರಜಾಕರ ಹಾವಳಿಯಲ್ಲಿ ನನ್ನ ತಾಯಿ, ಸಹೋದರಿಯನ್ನು ಕಳೆದುಕೊಂಡೆ, ತಂದೆಯ ಆಸರೆಯಲ್ಲಿ ಬೆಳೆದೆ’ ಎಂದು ಖರ್ಗೆ ಅವರು ತಮ್ಮ ಜೀವನದ ಅನೇಕ ಘಟನೆಗಳನ್ನು ನೆನಪಿಸಿಕೊಂಡು ಕ್ಷಣಹೊತ್ತು ಭಾವುಕರಾದರು.</p>.<p><span class="bold"><strong>ರಾಜೀನಾಮೆಗೆ ಕಾರಣ ಧನಕರ್ ಹೇಳಬೇಕು: </strong></span> ‘ಉಪ ರಾಷ್ಟ್ರಪತಿ ಹುದ್ದೆಗೆ ದಿಢೀರನೆ ರಾಜೀನಾಮೆ ನೀಡಲು ಕಾರಣವೇನು ಎಂಬುದನ್ನು ಧನಕರ್ ಅವರೇ ಹೇಳಬೇಕು’ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. </p>.<p>‘ಉಪರಾಷ್ಟ್ರಪತಿ ಹುದ್ದೆಗೆ ಏಕೆ ರಾಜೀನಾಮೆ ನೀಡಿದ್ದಾರೆ ಎಂಬುದು ಮೋದಿ ಮತ್ತು ಧನಕರ್ ಅವರಿಗೇ ಗೊತ್ತು. ಅವರ ನಡುವೆ ಏನಾಗಿದೆ ಎಂಬುದು ಗೊತ್ತಿಲ್ಲ’ ಎಂದರು.</p>.<p>‘ಧನಕರ್ ಅವರು ಯಾವಾಗಲೂ ಕೇಂದ್ರ ಸರ್ಕಾರದ ಪರವಾಗಿಯೇ ಇದ್ದರು. ನಮಗೆ ರೈತರ ಸಮಸ್ಯೆಗಳ ಬಗ್ಗೆ, ಬಡವರ ಸಂಕಷ್ಟಗಳ ಬಗ್ಗೆ, ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ಮಾತನಾಡಲು ಅವಕಾಶವನ್ನೇ ನೀಡುತ್ತಿರಲಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ‘ರಾಜ್ಯದಲ್ಲಿ 1999ರಲ್ಲಿ ವಿರೋಧ ಪಕ್ಷದ ನಾಯಕನಾಗಿ ಹೋರಾಟ ಮಾಡಿದೆ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದೆ. ಆದರೆ, ನಾಲ್ಕು ತಿಂಗಳಲ್ಲಿ ಪಕ್ಷ ಸೇರಿದ ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾದರು. ರಾಜಕೀಯವಾಗಿ ಅವಕಾಶ ತಪ್ಪಿರುವ ಬಗ್ಗೆ ಬೇಸರವಿಲ್ಲ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p>.<p>ನಗರದ ಬಿಎಲ್ಡಿಇ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಫ.ಗು.ಹಳಕಟ್ಟಿ, ಬಂಥನಾಳ ಸಂಗನಬಸವ ಶಿವಯೋಗಿಗಳು, ಬಿ.ಎಂ.ಪಾಟೀಲ ಮತ್ತು ಬಂಗಾರಮ್ಮ ಸಜ್ಜನ ಸ್ಮರಣೆ ಕಾರ್ಯಕ್ರಮದಲ್ಲಿ ಭಾನುವಾರ ಅವರು ಮಾತನಾಡಿದರು.</p>.<p>‘ನಾನು ಎಂದೂ ಅಧಿಕಾರದ ಹಿಂದೆ ಹೋಗಿಲ್ಲ, ನನ್ನ ಪ್ರಯತ್ನಗಳ ಫಲವಾಗಿ ಅಧಿಕಾರ ಪಡೆದುಕೊಂಡಿದ್ದೇನೆ. ಕಾಂಗ್ರೆಸ್ ಅಧ್ಯಕ್ಷ ಹುದ್ದೆಯಿಂದ ಎಐಸಿಸಿ ಹುದ್ದೆವರೆಗೂ ಬಂದಿರುವೆ, ಮನಸ್ಸಿನಲ್ಲಿ ದುರಾಸೆ ಇಟ್ಟುಕೊಂಡು ಮಾಡುವ ಕೆಲಸಗಳಿಂದ ಏನೂ ಮಾಡಲು ಸಾಧ್ಯವಿಲ್ಲ’ ಎಂದರು.</p>.<p>‘ಆರು ವರ್ಷದ ಬಾಲಕನಾಗಿದ್ದಾಗ ರಜಾಕರ ಹಾವಳಿಯಲ್ಲಿ ನನ್ನ ತಾಯಿ, ಸಹೋದರಿಯನ್ನು ಕಳೆದುಕೊಂಡೆ, ತಂದೆಯ ಆಸರೆಯಲ್ಲಿ ಬೆಳೆದೆ’ ಎಂದು ಖರ್ಗೆ ಅವರು ತಮ್ಮ ಜೀವನದ ಅನೇಕ ಘಟನೆಗಳನ್ನು ನೆನಪಿಸಿಕೊಂಡು ಕ್ಷಣಹೊತ್ತು ಭಾವುಕರಾದರು.</p>.<p><span class="bold"><strong>ರಾಜೀನಾಮೆಗೆ ಕಾರಣ ಧನಕರ್ ಹೇಳಬೇಕು: </strong></span> ‘ಉಪ ರಾಷ್ಟ್ರಪತಿ ಹುದ್ದೆಗೆ ದಿಢೀರನೆ ರಾಜೀನಾಮೆ ನೀಡಲು ಕಾರಣವೇನು ಎಂಬುದನ್ನು ಧನಕರ್ ಅವರೇ ಹೇಳಬೇಕು’ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. </p>.<p>‘ಉಪರಾಷ್ಟ್ರಪತಿ ಹುದ್ದೆಗೆ ಏಕೆ ರಾಜೀನಾಮೆ ನೀಡಿದ್ದಾರೆ ಎಂಬುದು ಮೋದಿ ಮತ್ತು ಧನಕರ್ ಅವರಿಗೇ ಗೊತ್ತು. ಅವರ ನಡುವೆ ಏನಾಗಿದೆ ಎಂಬುದು ಗೊತ್ತಿಲ್ಲ’ ಎಂದರು.</p>.<p>‘ಧನಕರ್ ಅವರು ಯಾವಾಗಲೂ ಕೇಂದ್ರ ಸರ್ಕಾರದ ಪರವಾಗಿಯೇ ಇದ್ದರು. ನಮಗೆ ರೈತರ ಸಮಸ್ಯೆಗಳ ಬಗ್ಗೆ, ಬಡವರ ಸಂಕಷ್ಟಗಳ ಬಗ್ಗೆ, ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ಮಾತನಾಡಲು ಅವಕಾಶವನ್ನೇ ನೀಡುತ್ತಿರಲಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>