<p><strong>ವಿಜಯಪುರ</strong>: ಮಹಿಳೆಯೊಬ್ಬರನ್ನು ಅಪಹರಣಮಾಡಿ, ಹಣಕ್ಕೆ ಬೇಡಿಕೆಯಿಟ್ಟದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.</p>.<p>ವಿಜಯಪುರ ನಗರದ ಜುಲೈ ಗಲ್ಲಿಯ ಸಾಗರ ಜುಮ್ಮನಗೋಳ, ರಂಗಿನ ಮಜ್ಜಿದ್ನ ಶಿವಾಜಿ ಉಪ್ಪಾರ, ರಾಣಿ ಬಗೀಚದ ಆಕಾಶ ವೀರಕರ ಮತ್ತು ಆದರ್ಶ ಕೊಟ್ಯಾಳ ಬಂಧಿತ ಆರೋಪಿಗಳು.</p>.<p>ಇಂಡಿಯಲ್ಲಿ ಎಫ್ಡಿಎ ಆಗಿ ಕಾರ್ಯನಿರ್ವಹಿಸುತ್ತಿರುವಲಕ್ಷ್ಮಿ ಸೊನ್ನದ ಅವರು ಆಗಸ್ಟ್ 22ರಂದು ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಮರಳುವಾಗ ನಗರದಕನಕದಾಸ ವೃತ್ತದ ಬಳಿ ಆರೋಪಿಗಳು ಆಟೋದಲ್ಲಿ ಅಪಹರಣ ಮಾಡಿ, ₹ 5 ಲಕ್ಷಕ್ಕೆ ಹಣಕ್ಕೆ ಬೇಡಿಕೆ ಇಟ್ಟಿದರು.</p>.<p>ಸರ್ಕಾರಿ ಕೆಲಸದಲ್ಲಿದ್ದ ಪತಿ ಜಗದೀಶ ಸೊನ್ನಾದ ಅವರು ಆಕಸ್ಮಿಕವಾಗಿ ಸಾವಿಗೀಡಾದ ಬಳಿಕ ಅನುಕಂಪದ ಆಧಾರದ ಮೇಲೆ ಲಕ್ಷ್ಮಿ ಅವರಿಗೆ ಸರ್ಕಾರಿ ಕೆಲಸ ಲಭಿಸಿತ್ತು. ಕೆಲಸ ಸಿಕ್ಕಿದ ಹಿನ್ನೆಲೆಯಲ್ಲಿ ತಮಗೂ ಹಣ ನೀಡಬೇಕು ಎಂದುಸಂಬಂಧಿಕರೇ ಸೇರಿಕೊಂಡು ಅಪಹರಣ ಮಾಡಿದ್ದರು ಎನ್ನಲಾಗಿದೆ.</p>.<p>ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ವಿಜಯಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಮಹಿಳೆಯೊಬ್ಬರನ್ನು ಅಪಹರಣಮಾಡಿ, ಹಣಕ್ಕೆ ಬೇಡಿಕೆಯಿಟ್ಟದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.</p>.<p>ವಿಜಯಪುರ ನಗರದ ಜುಲೈ ಗಲ್ಲಿಯ ಸಾಗರ ಜುಮ್ಮನಗೋಳ, ರಂಗಿನ ಮಜ್ಜಿದ್ನ ಶಿವಾಜಿ ಉಪ್ಪಾರ, ರಾಣಿ ಬಗೀಚದ ಆಕಾಶ ವೀರಕರ ಮತ್ತು ಆದರ್ಶ ಕೊಟ್ಯಾಳ ಬಂಧಿತ ಆರೋಪಿಗಳು.</p>.<p>ಇಂಡಿಯಲ್ಲಿ ಎಫ್ಡಿಎ ಆಗಿ ಕಾರ್ಯನಿರ್ವಹಿಸುತ್ತಿರುವಲಕ್ಷ್ಮಿ ಸೊನ್ನದ ಅವರು ಆಗಸ್ಟ್ 22ರಂದು ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಮರಳುವಾಗ ನಗರದಕನಕದಾಸ ವೃತ್ತದ ಬಳಿ ಆರೋಪಿಗಳು ಆಟೋದಲ್ಲಿ ಅಪಹರಣ ಮಾಡಿ, ₹ 5 ಲಕ್ಷಕ್ಕೆ ಹಣಕ್ಕೆ ಬೇಡಿಕೆ ಇಟ್ಟಿದರು.</p>.<p>ಸರ್ಕಾರಿ ಕೆಲಸದಲ್ಲಿದ್ದ ಪತಿ ಜಗದೀಶ ಸೊನ್ನಾದ ಅವರು ಆಕಸ್ಮಿಕವಾಗಿ ಸಾವಿಗೀಡಾದ ಬಳಿಕ ಅನುಕಂಪದ ಆಧಾರದ ಮೇಲೆ ಲಕ್ಷ್ಮಿ ಅವರಿಗೆ ಸರ್ಕಾರಿ ಕೆಲಸ ಲಭಿಸಿತ್ತು. ಕೆಲಸ ಸಿಕ್ಕಿದ ಹಿನ್ನೆಲೆಯಲ್ಲಿ ತಮಗೂ ಹಣ ನೀಡಬೇಕು ಎಂದುಸಂಬಂಧಿಕರೇ ಸೇರಿಕೊಂಡು ಅಪಹರಣ ಮಾಡಿದ್ದರು ಎನ್ನಲಾಗಿದೆ.</p>.<p>ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ವಿಜಯಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>