ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆನ್ನಮ್ಮರ ಹೋರಾಟ ಎಲ್ಲರಿಗೂ ಸ್ಪೂರ್ತಿ: ಮಹಾದೇವ ಮುರಗಿ

Published 18 ಅಕ್ಟೋಬರ್ 2023, 13:41 IST
Last Updated 18 ಅಕ್ಟೋಬರ್ 2023, 13:41 IST
ಅಕ್ಷರ ಗಾತ್ರ

ವಿಜಯಪುರ: ‘ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಹೋರಾಟ ನಮ್ಮೆಲ್ಲರಿಗೂ ಸ್ಪೂರ್ತಿಯಾಗಿದೆ. ಕಿತ್ತೂರು ಚೆನ್ನಮ್ಮ ಅವರ ಹೋರಾಟ, ತ್ಯಾಗ, ಬಲಿದಾನ ಸ್ಮರಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸೋಣ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಭಾನುವಾರ ಕಿತ್ತೂರು ಚೆನ್ನಮ್ಮ ಅವರ ವಿಜಯ ವೀರಜ್ಯೋತಿ ಯಾತ್ರೆಯ ರಥಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ‘ತಿಹಾಸಿಕ ಕಿತ್ತೂರು ಉತ್ಸವವು ಇದೇ ಅ.23 ರಿಂದ 25 ವರೆಗೆ ಕಿತ್ತೂರಿನಲ್ಲಿ ನಡೆಯಲಿದೆ. ಉತ್ಸವದ ಅಂಗವಾಗಿ ಅ.13 ರಂದು ವಿಜಯ ವೀರಜ್ಯೋತಿ ಯಾತ್ರೆಯು ಬೆಂಗಳೂರಿನಿಂದ ಪ್ರಾರಂಭವಾಗಿದೆ’ ಎಂದರು.

ವಿಜಯಪುರ ನಗರಕ್ಕೆ ಆಗಮಿಸಿದ ವಿಜಯ ವೀರಜ್ಯೋತಿಯನ್ನು ಬರಮಾಡಿಕೊಂಡು ವೀರ ಜ್ಯೋತಿಯ ಪೂಜಾ ಕಾರ್ಯಕ್ರಮ ಕೈಗೊಂಡು, ಕಲಾತಂಡಗಳೊಂದಿಗೆ ಮೆರವಣಿಗೆ ಮೂಲಕ ವೀರಜ್ಯೋತಿಯನ್ನು ಜಿಲ್ಲೆಯಿಂದ ಬೆಳಗಾವಿ ಜಿಲ್ಲೆಗೆ ಬೀಳ್ಕೊಡಲಾಯಿತು.

ವಿಜಯಪುರ ಉಪ ವಿಭಾಗಾಧಿಕಾರಿ ಬಸಣೆಪ್ಪ ಕಲಶೆಟ್ಟಿ, ತಹಶೀಲ್ದಾರ್ ಕವಿತಾ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಮುಖಂಡರಾದ ಶ್ರೀಶೈಲ್ ಬುಕ್ಕಣ್ಣಿ, ವಿಜಯ್ ಹಿರೊಳ್ಳಿ, ನಿಂಗನಗೌಡ ಸೋಲಾಪೂರ, ಸಿದ್ದು ಅವಟಿ, ಸಂದೀಪ ಇಂಡಿ, ಸದಾಶಿವ ಹಳ್ಳಿಗಿಡದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT