<p><strong>ಆಲಮೇಲ</strong>: ಸರ್ಕಾರದ ಮಹತ್ವದ ಯೋಜನೆಗಳಾದ ಪಂಚ ಗ್ಯಾರಂಟಿಗಳು ದುರ್ಬಲರನ್ನು ಆರ್ಥಿಕ ಸಬಲರನ್ನಾಗಿ ಮಾಡುತ್ತಿವೆ’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಆಲಮೇಲ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕಗೌಡ ಕೊಳಾರಿ ಹೇಳಿದರು.</p>.<p>ಪಟ್ಟಣದ ಯುಕೆಪಿ ಕಾಲೊನಿಯಲ್ಲಿನ ಯೋಜನೆ ಅನುಷ್ಠಾನ ಸಮಿತಿಯ ಕಾರ್ಯಾಲಯದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮು ಜಿ.ಅಗ್ನಿ ಮಾತನಾಡಿ, ‘ಅನುಷ್ಠಾನದ ಐದು ಇಲಾಖೆಗಳು ಸರ್ಕಾರದ ಯೋಜನೆಗಳನ್ನು ಸರಿಯಾಗಿ ಜನರಿಗೆ ತಲುಪಿಸುವ ಕೆಲಸ ಮಾಡಬೇಕಿದೆ’ ಎಂದರು.</p>.<p>‘ಫಲಾನುಭವಿಗಳ ಯಶಸ್ವಿ ಕತೆಗಳಿದ್ದರೆ ಮಾಹಿತಿ ಸಂಗ್ರಹಿಸಿ’ ಎಂದೂ ತಿಳಿಸಿದರು.</p>.<p>ಉದ್ಯೋಗ ಮತ್ತು ಕಾರ್ಮಿಕ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಮಹೇಶ ಮಾಳವಾಡೇಕರ ಮಾತನಾಡಿ, ‘ಈವರೆಗೆ ತಾಲ್ಲೂಕಿನಲ್ಲಿ 527 ನೋಂದಾಯಿತ ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ. ಇನ್ನೂ ಹೆಚ್ಚು ನೋಂದಣಿ ಮಾಡಲು ಎಲ್ಲರ ಸಹಭಾಗಿತ್ವ ಅಗತ್ಯ’ ಎಂದರು.</p>.<p>ಆಹಾರ ಇಲಾಖೆಯ ರಮೇಶ ತಳವಾರ, ಸಾರಿಗೆ ಇಲಾಖೆಯ ಕೆ.ಎಸ್. ಬಿರಾದಾರ, ಹೆಸ್ಕಾಂ ಸೆಕ್ಷನ್ ಅಧಿಕಾರಿ ಚಂದ್ರಕಾಂತ ನಾಯಕ, ತಮ್ಮ ಇಲಾಖೆಗಳ ಮೇ ತಿಂಗಳವರೆಗಿನ ಮಾಹಿತಿಯನ್ನು ನೀಡಿದರು.</p>.<p>‘ನ್ಯಾಯಬೆಲೆ ಅಂಗಡಿಗಳಲ್ಲಿ ಸರಿಯಾಗಿ ಪಡಿತರ ವಿತರಣೆ ಆಗುತ್ತಿಲ್ಲ, ಪಡಿತರ ಅಂಗಡಿಗಳ ಮುಂದೆ ಕಡ್ಡಾಯವಾಗಿ ತಿಂಗಳ ನೀಡುವ ಆಹಾರ ಧಾನ್ಯಗಳ ಫಲಕ ಎದ್ದು ಕಾಣುವಂತೆ ಹಾಕಬೇಕು’ ಎಂದು ಸಮಿತಿಯ ಸದಸ್ಯರು ಒತ್ತಾಯಿಸಿದರು.</p>.<p>ಅನುಷ್ಠಾನ ಸಮಿತಿಯ ಸದಸ್ಯರಾದ ವಾಹಬ್ ಸುಂಬಡ, ಪ್ರಶಾಂತ ನಾಶಿ, ಮಲ್ಲು ಪ್ಯಾಟಿ, ಬಸವರಾಜ ನಂದೂರ, ರವೀಂದ್ರ ಹೊಳ್ಳಿ ಇದ್ದರು.</p>.<p>Quote - ಗೃಹಲಕ್ಷ್ಮಿ ಯೋಜನೆ ಶೇ 98ರಷ್ಟು ಗುರಿ ಸಾಧಿಸಲಾಗಿದೆ. ನೋಂದಾಯಿಸಿದ ಇನ್ನೂ ಶೇ2 ರಷ್ಟು ಕಾರ್ಯವು ಪ್ರಗತಿಯಲ್ಲಿದೆ ಜಯಶ್ರೀ ದೊಡಮನಿ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ </p>.<p>Cut-off box - </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲಮೇಲ</strong>: ಸರ್ಕಾರದ ಮಹತ್ವದ ಯೋಜನೆಗಳಾದ ಪಂಚ ಗ್ಯಾರಂಟಿಗಳು ದುರ್ಬಲರನ್ನು ಆರ್ಥಿಕ ಸಬಲರನ್ನಾಗಿ ಮಾಡುತ್ತಿವೆ’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಆಲಮೇಲ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕಗೌಡ ಕೊಳಾರಿ ಹೇಳಿದರು.</p>.<p>ಪಟ್ಟಣದ ಯುಕೆಪಿ ಕಾಲೊನಿಯಲ್ಲಿನ ಯೋಜನೆ ಅನುಷ್ಠಾನ ಸಮಿತಿಯ ಕಾರ್ಯಾಲಯದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮು ಜಿ.ಅಗ್ನಿ ಮಾತನಾಡಿ, ‘ಅನುಷ್ಠಾನದ ಐದು ಇಲಾಖೆಗಳು ಸರ್ಕಾರದ ಯೋಜನೆಗಳನ್ನು ಸರಿಯಾಗಿ ಜನರಿಗೆ ತಲುಪಿಸುವ ಕೆಲಸ ಮಾಡಬೇಕಿದೆ’ ಎಂದರು.</p>.<p>‘ಫಲಾನುಭವಿಗಳ ಯಶಸ್ವಿ ಕತೆಗಳಿದ್ದರೆ ಮಾಹಿತಿ ಸಂಗ್ರಹಿಸಿ’ ಎಂದೂ ತಿಳಿಸಿದರು.</p>.<p>ಉದ್ಯೋಗ ಮತ್ತು ಕಾರ್ಮಿಕ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಮಹೇಶ ಮಾಳವಾಡೇಕರ ಮಾತನಾಡಿ, ‘ಈವರೆಗೆ ತಾಲ್ಲೂಕಿನಲ್ಲಿ 527 ನೋಂದಾಯಿತ ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ. ಇನ್ನೂ ಹೆಚ್ಚು ನೋಂದಣಿ ಮಾಡಲು ಎಲ್ಲರ ಸಹಭಾಗಿತ್ವ ಅಗತ್ಯ’ ಎಂದರು.</p>.<p>ಆಹಾರ ಇಲಾಖೆಯ ರಮೇಶ ತಳವಾರ, ಸಾರಿಗೆ ಇಲಾಖೆಯ ಕೆ.ಎಸ್. ಬಿರಾದಾರ, ಹೆಸ್ಕಾಂ ಸೆಕ್ಷನ್ ಅಧಿಕಾರಿ ಚಂದ್ರಕಾಂತ ನಾಯಕ, ತಮ್ಮ ಇಲಾಖೆಗಳ ಮೇ ತಿಂಗಳವರೆಗಿನ ಮಾಹಿತಿಯನ್ನು ನೀಡಿದರು.</p>.<p>‘ನ್ಯಾಯಬೆಲೆ ಅಂಗಡಿಗಳಲ್ಲಿ ಸರಿಯಾಗಿ ಪಡಿತರ ವಿತರಣೆ ಆಗುತ್ತಿಲ್ಲ, ಪಡಿತರ ಅಂಗಡಿಗಳ ಮುಂದೆ ಕಡ್ಡಾಯವಾಗಿ ತಿಂಗಳ ನೀಡುವ ಆಹಾರ ಧಾನ್ಯಗಳ ಫಲಕ ಎದ್ದು ಕಾಣುವಂತೆ ಹಾಕಬೇಕು’ ಎಂದು ಸಮಿತಿಯ ಸದಸ್ಯರು ಒತ್ತಾಯಿಸಿದರು.</p>.<p>ಅನುಷ್ಠಾನ ಸಮಿತಿಯ ಸದಸ್ಯರಾದ ವಾಹಬ್ ಸುಂಬಡ, ಪ್ರಶಾಂತ ನಾಶಿ, ಮಲ್ಲು ಪ್ಯಾಟಿ, ಬಸವರಾಜ ನಂದೂರ, ರವೀಂದ್ರ ಹೊಳ್ಳಿ ಇದ್ದರು.</p>.<p>Quote - ಗೃಹಲಕ್ಷ್ಮಿ ಯೋಜನೆ ಶೇ 98ರಷ್ಟು ಗುರಿ ಸಾಧಿಸಲಾಗಿದೆ. ನೋಂದಾಯಿಸಿದ ಇನ್ನೂ ಶೇ2 ರಷ್ಟು ಕಾರ್ಯವು ಪ್ರಗತಿಯಲ್ಲಿದೆ ಜಯಶ್ರೀ ದೊಡಮನಿ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ </p>.<p>Cut-off box - </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>