<p><strong>ವಿಜಯಪುರ:</strong> ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಉಲ್ಭಣಗೊಳ್ಳತೊಡಗಿದೆ. ಶುಕ್ರವಾರ ಒಂದೇ ದಿನ 53 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಆತಂಕ ಮೂಡಿಸಿದೆ.</p>.<p>ಕಂಟೈನ್ಮೆಂಟ್ ಪ್ರದೇಶದ ಸಂಪರ್ಕದಿಂದ 14 ಜನರಿಗೆ, ದೆಹಲಿ ಸಂಪರ್ಕದಿಂದ ಮೂವರಿಗೆ ಹಾಗೂ ಇನ್ನುಳಿದ 36 ಜನರಿಗೆ ಮಹಾರಾಷ್ಟ್ರದ ಮುಂಬೈ ಸಂಪರ್ಕದಿಂದ ಸೋಂಕು ತಗುಲಿದೆ. ಇದರಲ್ಲಿ ನಾಲ್ವರು ಬಾಲಕಿಯರು ಮತ್ತು ಇಬ್ಬರು ಬಾಲಕರು ಸೇರಿದ್ದಾರೆ.</p>.<p><strong>ಕೊರೊನಾ ವಾರಿಯರ್ಸ್ಗೆ ಸೋಂಕು: </strong>ಕಂಟೈನ್ಮೆಂಟ್ ಜೋನ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಆಶಾ ಕಾರ್ಯಕರ್ತೆಯರಿಗೆ ಸೋಂಕು ತಗುಲಿದೆ. ಅಲ್ಲದೇ, ಕಂಟೈನ್ಮೆಂಟ್ ಜೋನ್ ನಿವಾಸಿ ಅಂಗನವಾಡಿ ಕಾರ್ಯಕರ್ತೆಯೊಬ್ಬರಿಗೂ ಸೋಂಕು ತಗುಲಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.</p>.<p>ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 187ಕ್ಕೆ ಏರಿಕೆಯಾಗಿದೆ. ಈಗಾಗಲೇ 5 ಜನ ಕೋವಿಡ್ ಸೋಂಕಿನಿಂದ ಸಾವಿಗೀಡಾಗಿದ್ದಾರೆ. 65 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.</p>.<p>ದಿನದಿಂದ ದಿನಕ್ಕೆ ಸೋಂಕು ವ್ಯಾಪಿಸುತ್ತಿರುವುದು ಜಿಲ್ಲೆಯ ಜನರನ್ನು ಆತಂಕಕ್ಕೆ ದೂಡಿದೆ. ಮಹಾರಾಷ್ಟ್ರದಿಂದ ಬಂದವರಲ್ಲೇ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಕಂಡುಬಂದಿರುವುದು ಜಿಲ್ಲೆಯ ಜನರನ್ನು ಅಲ್ಪ ನಿರಾಳವಾಗಿಸಿದೆ.</p>.<p><strong>ಮಾಹಿತಿ ನೀಡಲು ಮನವಿ: </strong>ಜಿಲ್ಲೆಯಲ್ಲಿ ಯಾರಿಗಾದರೂ ಶೀತ, ಜ್ವರ, ಕೆಮ್ಮು, ಉಸಿರಾಟ ತೊಂದರೆ ಸೇರಿದಂತೆ ಕೊರೊನಾ ಲಕ್ಷಣಗಳು ಕಂಡುಬಂದರೆ ತಕ್ಷಣ ಜಿಲ್ಲಾಡಳಿತವನ್ನು ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.</p>.<p>ಕಂಟೈನ್ಮೆಂಟ್ ಪ್ರದೇಶಗಳಿಗೆ ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ಭೇಟಿ ನೀಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೊಂದಿಗೆ ಚರ್ಚಿಸುತ್ತಿದ್ದೇವೆ. ಅವರ ಮತ್ತು ಅಲ್ಲಿಯ ಜನರ ಕುಂದುಕೊರತೆ ಆಲಿಸಿ, ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಉಲ್ಭಣಗೊಳ್ಳತೊಡಗಿದೆ. ಶುಕ್ರವಾರ ಒಂದೇ ದಿನ 53 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಆತಂಕ ಮೂಡಿಸಿದೆ.</p>.<p>ಕಂಟೈನ್ಮೆಂಟ್ ಪ್ರದೇಶದ ಸಂಪರ್ಕದಿಂದ 14 ಜನರಿಗೆ, ದೆಹಲಿ ಸಂಪರ್ಕದಿಂದ ಮೂವರಿಗೆ ಹಾಗೂ ಇನ್ನುಳಿದ 36 ಜನರಿಗೆ ಮಹಾರಾಷ್ಟ್ರದ ಮುಂಬೈ ಸಂಪರ್ಕದಿಂದ ಸೋಂಕು ತಗುಲಿದೆ. ಇದರಲ್ಲಿ ನಾಲ್ವರು ಬಾಲಕಿಯರು ಮತ್ತು ಇಬ್ಬರು ಬಾಲಕರು ಸೇರಿದ್ದಾರೆ.</p>.<p><strong>ಕೊರೊನಾ ವಾರಿಯರ್ಸ್ಗೆ ಸೋಂಕು: </strong>ಕಂಟೈನ್ಮೆಂಟ್ ಜೋನ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಆಶಾ ಕಾರ್ಯಕರ್ತೆಯರಿಗೆ ಸೋಂಕು ತಗುಲಿದೆ. ಅಲ್ಲದೇ, ಕಂಟೈನ್ಮೆಂಟ್ ಜೋನ್ ನಿವಾಸಿ ಅಂಗನವಾಡಿ ಕಾರ್ಯಕರ್ತೆಯೊಬ್ಬರಿಗೂ ಸೋಂಕು ತಗುಲಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.</p>.<p>ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 187ಕ್ಕೆ ಏರಿಕೆಯಾಗಿದೆ. ಈಗಾಗಲೇ 5 ಜನ ಕೋವಿಡ್ ಸೋಂಕಿನಿಂದ ಸಾವಿಗೀಡಾಗಿದ್ದಾರೆ. 65 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.</p>.<p>ದಿನದಿಂದ ದಿನಕ್ಕೆ ಸೋಂಕು ವ್ಯಾಪಿಸುತ್ತಿರುವುದು ಜಿಲ್ಲೆಯ ಜನರನ್ನು ಆತಂಕಕ್ಕೆ ದೂಡಿದೆ. ಮಹಾರಾಷ್ಟ್ರದಿಂದ ಬಂದವರಲ್ಲೇ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಕಂಡುಬಂದಿರುವುದು ಜಿಲ್ಲೆಯ ಜನರನ್ನು ಅಲ್ಪ ನಿರಾಳವಾಗಿಸಿದೆ.</p>.<p><strong>ಮಾಹಿತಿ ನೀಡಲು ಮನವಿ: </strong>ಜಿಲ್ಲೆಯಲ್ಲಿ ಯಾರಿಗಾದರೂ ಶೀತ, ಜ್ವರ, ಕೆಮ್ಮು, ಉಸಿರಾಟ ತೊಂದರೆ ಸೇರಿದಂತೆ ಕೊರೊನಾ ಲಕ್ಷಣಗಳು ಕಂಡುಬಂದರೆ ತಕ್ಷಣ ಜಿಲ್ಲಾಡಳಿತವನ್ನು ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.</p>.<p>ಕಂಟೈನ್ಮೆಂಟ್ ಪ್ರದೇಶಗಳಿಗೆ ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ಭೇಟಿ ನೀಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೊಂದಿಗೆ ಚರ್ಚಿಸುತ್ತಿದ್ದೇವೆ. ಅವರ ಮತ್ತು ಅಲ್ಲಿಯ ಜನರ ಕುಂದುಕೊರತೆ ಆಲಿಸಿ, ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>