‘ನಗರದ ಜನತೆಗೆ ಅಮೃತ್ ಯೋಜನೆಯಡಿ ದಿನದ 24 ಗಂಟೆ ಕುಡಿಯುವ ನೀರಿನ ಸೌಲಭ್ಯ ನೀಡುವ ಯೋಜನೆ ಇದಾಗಿದ್ದು, ಮಳೆಯ ಅಭಾವದಿಂದ ಜುಲೈ 20ರ ಹೊತ್ತಿಗೆ ಬತ್ತಿ ಹೋಗಿದ್ದ ಭೂತನಾಳ ಕೆರೆಯಲ್ಲಿ ನೀರು ಡೆಡ್ ಸ್ಟೋರೆಜ್ಗಿಂತಲೂ ಕಡಿಮೆಯಾಗಿತ್ತು. ಇದರಿಂದ ನಗರದ ಭೂತನಾಳ ಗ್ರಾಮ, ಎಂ.ಬಿ.ಪಾಟೀಲ್ ನಗರ, ಆದರ್ಶನಗರ, ಆಶ್ರಮ, ಬಿ.ಎಂ.ಪಾಟೀಲ್ ನಗರ, ವಿಜಯ ಕಾಲೇಜು, ಕೆ.ಎಚ್.ಬಿ ಕಾಲೊನಿ, ಚಾಲುಕ್ಯನಗರದ ಸುಮಾರು 13 ಸಾವಿರ ಮನೆಗಳಿಗೆ ನಳದ ಸಂಪರ್ಕ ಹೊಂದಿದೆ. 75 ಸಾವಿರಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರು ಪೂರೈಸಲು ಸಾಧ್ಯವಾಗುವುದಿಲ್ಲ ಎಂದು ಅಧಿಕಾರಿಗಳು 10-15 ದಿನಗಳಿಗೊಮ್ಮೆ ಸಹಿತ ನೀರು ಸರಬರಾಜು ಮಾಡಲು ಹರಸಾಹಸ ಪಡುವಂತಾಗಿತ್ತು’ ಎಂದು ಹೇಳಿದ್ದಾರೆ.