ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಬೇಸಿಗೆಯಲ್ಲೂ ತೆಲಂಗಾಣಕ್ಕೆ ಸದ್ದಿಲ್ಲದೇ ಹರಿದ ಕೃಷ್ಣೆ; ರೈತರಿಂದ ವ್ಯಾಪಕ ವಿರೋಧ

ಪ್ರತಿಭಟನೆಗೆ ಸಜ್ಜು
Published : 27 ಫೆಬ್ರುವರಿ 2025, 0:31 IST
Last Updated : 27 ಫೆಬ್ರುವರಿ 2025, 0:31 IST
ಫಾಲೋ ಮಾಡಿ
Comments
ತೆಲಂಗಾಣ ಸರ್ಕಾರದ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಿ ನೀರು ಬಿಟ್ಟಿದೆ. ಎರಡೂ ಕಡೆ ಕಾಂಗ್ರೆಸ್‌ ಪಕ್ಷದ ಸರ್ಕಾರವಿದ್ದು ಅದಕ್ಕಾಗಿ ಅಲ್ಲಿಯ ರೈತರ ಅನುಕೂಲಕ್ಕಾಗಿ ನೀರು ಬಿಡಲಾಗಿದೆ.
–ರಾಘವೇಂದ್ರ ಕಾಮನಟಗಿ, ಕಾರ್ಯದರ್ಶಿ ಭಾರತೀಯ ಕಿಸಾನ್ ಸಂಘ 
ತೆಲಂಗಾಣಕ್ಕೆ ನೀರು ಬಿಟ್ಟಿರುವುದನ್ನು ಖಂಡಿಸಿ ಫೆ.28 ರಂದು ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುವುದು.
–ಅರವಿಂದ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಅಖಂಡ ಕರ್ನಾಟಕ ರೈತ ಸಂಘ
ನಮ್ಮ ಜಲಾಶಯಗಳಲ್ಲಿ ಹೆಚ್ಚುವರಿ ನೀರಿದ್ದಾಗ ಕುಡಿಯಲು ಬೇರೆ ರಾಜ್ಯಗಳಿಗೆ ನೀರು ಕೊಡುವುದರಲ್ಲಿ ತಪ್ಪಿಲ್ಲ. ಈ ಹಿಂದೆ ಮಹಾರಾಷ್ಟ್ರದಿಂದ ಕುಡಿಯಲು ಕೃಷ್ಣಾ ಭೀಮಾ ನದಿಗೆ ನೀರು ಬಿಡಿಸಿಕೊಂಡಿದ್ದೇವೆ.
–ಶಿವಾನಂದ ಪಾಟೀಲ, ಸಚಿವ
ಆಲಮಟ್ಟಿ ಜಲಾಶಯದ ಬಲಭಾಗದ ವಿದ್ಯುತ್ ಉತ್ಪಾದನೆಯ ಮೂಲಕ ನೀರಾವರಿಗಾಗಿ ನಾರಾಯಣಪುರ ಜಲಾಶಯಕ್ಕೆ 9800 ಕ್ಯುಸೆಕ್‌ ನೀರು ಬಿಡಲಾಗುತ್ತಿದೆ.
–ಡಿ.ಬಸವರಾಜ, ಮುಖ್ಯ ಎಂಜಿನಿಯರ್ ಆಣೆಕಟ್ಟು ವಲಯ ಆಲಮಟ್ಟಿ
‘ತೆಲಂಗಾಣಕ್ಕೆ ನೀರು ಬಿಡಲು ಅನುಮತಿ: ಡಿ.ಕೆ. ಶಿವಕುಮಾರ್‌
‘ನಾರಾಯಣಪುರ ಅಣೆಕಟ್ಟಿನಿಂದ ತೆಲಂಗಾಣಕ್ಕೆ 1 ಟಿಎಂಸಿ ಅಡಿ ನೀರು ಬಿಡಲಾಗಿದೆ. ಈ ವಿಚಾರದಲ್ಲಿ ಮುಚ್ಚುಮರೆ ಇಲ್ಲ’ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ‘ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ನೆರೆ ರಾಜ್ಯಗಳ ಜತೆ ಪರಸ್ಪರ ಸಹಕಾರದ ಮಾದರಿಯನ್ನು ಅನುಸರಿಸಿಕೊಂಡು ಬರಲಾಗಿದೆ. ಆ ರಾಜ್ಯದವರು ಕೂಡ ಕೆಲವು ಸಂದರ್ಭದಲ್ಲಿ ನಮಗೆ ಸಹಾಯ ಮಾಡಿದ್ದಾರೆ. ತೆಲಂಗಾಣ ಸಚಿವರು ತಾವೇ ಬಂದು ನೀರು ಬಿಡುವಂತೆ ಮನವಿ ಮಾಡಿದ್ದರು. ನೀರು ಹರಿಸಲು ಅಧಿಕಾರಿಗಳಿಗೆ ನಾನು ಅನುಮತಿ ನೀಡಿದ್ದೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT