ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿದ್ದ ನಾರಾಯಣಪ್ಪ ಕುರುಬರ ಅವರನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಮಗದ ಹುಬ್ಬಳ್ಳಿ ಕೇಂದ್ರ ಕಚೇರಿಯ ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
‘ಕೋವಿಡ್ ಅವಧಿಯಲ್ಲೂವಿಜಯಪುರ ವಿಭಾಗ ಉತ್ತಮ ಕಾರ್ಯ ನಿರ್ವಹಿಸಿ, ಹೆಚ್ಚು ಆದಾಯ ಗಳಿಸುವ ಮೂಲಕ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಪ್ರಶಂಸೆಗೆ ಮಾತ್ರವಾಗಿತ್ತು. ಇದಕ್ಕೆ ಸಹಕಾರ ನೀಡಿದ ಎಲ್ಲಚಾಲಕರು, ನಿರ್ವಾಹಕರಿಗೆ ಅಭಿನಂದನೆ ಸಲ್ಲಿಸುವುದಾಗಿ’ ಅವರು ತಿಳಿಸಿದ್ದಾರೆ.