<p><strong>ಇಂಡಿ</strong>: ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ವೀರಭದ್ರದೇವರ ಜಾತ್ರೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಮೇ 18 ಹಾಗೂ 19 ರಂದು ಆಯೋಜಿಸಲಾಗಿದೆ.</p>.<p>ಮೇ 18 ರಂದು ಬೆಳ್ಳಿಗೆ 5 ಗಂಟೆಗೆ ದೇವಸ್ಥಾನದಲ್ಲಿ ವೀರಭದ್ರ ದೇವರ ಶಿಲಾಮೂರ್ತಿಗೆ ಭಕ್ತರಿಂದ ಅಭಿಷೇಕ, ವಿಶೇಷ ಪೂಜೆ ನೆರವೇರಲಿದೆ. ಬಳಿಕ ಇದೇ ದಿನ ರಾತ್ರಿ 8 ಗಂಟೆಗೆ ದೇವಸ್ಥಾನದ ಎದುರು ಅಗ್ನಿ ಪ್ರಜ್ವಲನ ಕಾರ್ಯಕ್ರಮ ಶ್ರದ್ದಾ ಭಕ್ತಿಯಿಂದ ನಡೆಯಲಿದೆ. ನಂತರ ರಂಗು ರಂಗಿನ ಮದ್ದು ಸುಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ಮೇ 19 ರಂದು ಬೆಳಿಗ್ಗೆ 5 ಗಂಟೆಗೆ ಶ್ರೀ ವೀರಭದ್ರ ದೇವರ ಶೀಲಾಮೂರ್ತಿಗೆ ಭಕ್ತರಿಂದ ರುದ್ರಾಭಿಷೇಕ ನೆರವೇರಲಿದೆ. ಬಳಿಕ 8 ಗಂಟೆಗೆ ದೇವಸ್ಥಾನದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ ವೀರಭದ್ರ ದೇವರ ಉತ್ಸವ ಮೂತರ್ಿಯ ಭವ್ಯ ಮೆರವಣಿಗೆ ಸಂಬಾಳ ವಾದ್ಯ ಮೇಳದೊಂದಿಗೆ ಜರುಗಲಿದೆ.</p>.<p>ಬಳಿಕ ಈ ಮೆರವಣಿಗೆಯೂ ಊರ ಹೊರಗಿನ ಪಾದಗಟ್ಟಿ ತಲುಪಿದ ಬಳಿಕ ಪಾದಗಟ್ಟಿ ಪೂಜೆ ಮಹಾ ಮಂಗಳಾರತಿ ನೆರವೇರಿದ ಬಳಿಕ ಈ ಮೆರವಣಿಗೆಯು ಭಕ್ತರ ಜೈಕಾರದೊಂದಿಗೆ ಮರಳಿ ಮೂಲ ದೇವಸ್ಥಾನ ತಲುಪಿದ ಕೂಡಲೇ ಅಗ್ನಿ ಪ್ರವೇಶ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಲಿದೆ. ಬಳಿಕ ಭಕ್ತರಿಗೆ ಅನ್ನ ಪ್ರಸಾದ ವಿತರಣೆ ನಡೆಯಲಿದೆ.</p>.<p>ಇದಕ್ಕೂ ಮುನ್ನ ಮೇ 15 ರಂದು ಸಂಜೆ 6 ಗಂಟೆಗೆ ಶ್ರೀ ವೀರಭದ್ರ ದೇವರ ಕರ್ತೃ ಗದ್ದುಗೆಗೆ ಮಹಾ ರುದ್ರಾಭಿಷೇಕ ಹಾಗೂ ಕಾಶಿ ಕಟ್ಟುವ ಕಾರ್ಯಕ್ರಮ ಗ್ರಾಮದ ಸಂಪ್ರದಾಯದಂತೆ ನೆರವೇರಲಿದೆ ಎಂದು ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-26-726525287</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಡಿ</strong>: ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ವೀರಭದ್ರದೇವರ ಜಾತ್ರೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಮೇ 18 ಹಾಗೂ 19 ರಂದು ಆಯೋಜಿಸಲಾಗಿದೆ.</p>.<p>ಮೇ 18 ರಂದು ಬೆಳ್ಳಿಗೆ 5 ಗಂಟೆಗೆ ದೇವಸ್ಥಾನದಲ್ಲಿ ವೀರಭದ್ರ ದೇವರ ಶಿಲಾಮೂರ್ತಿಗೆ ಭಕ್ತರಿಂದ ಅಭಿಷೇಕ, ವಿಶೇಷ ಪೂಜೆ ನೆರವೇರಲಿದೆ. ಬಳಿಕ ಇದೇ ದಿನ ರಾತ್ರಿ 8 ಗಂಟೆಗೆ ದೇವಸ್ಥಾನದ ಎದುರು ಅಗ್ನಿ ಪ್ರಜ್ವಲನ ಕಾರ್ಯಕ್ರಮ ಶ್ರದ್ದಾ ಭಕ್ತಿಯಿಂದ ನಡೆಯಲಿದೆ. ನಂತರ ರಂಗು ರಂಗಿನ ಮದ್ದು ಸುಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ಮೇ 19 ರಂದು ಬೆಳಿಗ್ಗೆ 5 ಗಂಟೆಗೆ ಶ್ರೀ ವೀರಭದ್ರ ದೇವರ ಶೀಲಾಮೂರ್ತಿಗೆ ಭಕ್ತರಿಂದ ರುದ್ರಾಭಿಷೇಕ ನೆರವೇರಲಿದೆ. ಬಳಿಕ 8 ಗಂಟೆಗೆ ದೇವಸ್ಥಾನದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ ವೀರಭದ್ರ ದೇವರ ಉತ್ಸವ ಮೂತರ್ಿಯ ಭವ್ಯ ಮೆರವಣಿಗೆ ಸಂಬಾಳ ವಾದ್ಯ ಮೇಳದೊಂದಿಗೆ ಜರುಗಲಿದೆ.</p>.<p>ಬಳಿಕ ಈ ಮೆರವಣಿಗೆಯೂ ಊರ ಹೊರಗಿನ ಪಾದಗಟ್ಟಿ ತಲುಪಿದ ಬಳಿಕ ಪಾದಗಟ್ಟಿ ಪೂಜೆ ಮಹಾ ಮಂಗಳಾರತಿ ನೆರವೇರಿದ ಬಳಿಕ ಈ ಮೆರವಣಿಗೆಯು ಭಕ್ತರ ಜೈಕಾರದೊಂದಿಗೆ ಮರಳಿ ಮೂಲ ದೇವಸ್ಥಾನ ತಲುಪಿದ ಕೂಡಲೇ ಅಗ್ನಿ ಪ್ರವೇಶ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಲಿದೆ. ಬಳಿಕ ಭಕ್ತರಿಗೆ ಅನ್ನ ಪ್ರಸಾದ ವಿತರಣೆ ನಡೆಯಲಿದೆ.</p>.<p>ಇದಕ್ಕೂ ಮುನ್ನ ಮೇ 15 ರಂದು ಸಂಜೆ 6 ಗಂಟೆಗೆ ಶ್ರೀ ವೀರಭದ್ರ ದೇವರ ಕರ್ತೃ ಗದ್ದುಗೆಗೆ ಮಹಾ ರುದ್ರಾಭಿಷೇಕ ಹಾಗೂ ಕಾಶಿ ಕಟ್ಟುವ ಕಾರ್ಯಕ್ರಮ ಗ್ರಾಮದ ಸಂಪ್ರದಾಯದಂತೆ ನೆರವೇರಲಿದೆ ಎಂದು ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-26-726525287</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>