<p><strong>ವಿಜಯಪುರ:</strong>ಉನ್ನತ ಶಿಕ್ಷಣ ಕಲಿಯುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪೌರ ಕಾರ್ಮಿಕರ ಮಕ್ಕಳಿಗೆಮಹಾನಗರ ಪಾಲಿಕೆಯ ಎಸ್.ಎಫ್.ಸಿ ಅನುದಾನದಲ್ಲಿ ಉಚಿತ ಲ್ಯಾಪ್ಟಾಪ್ ಅನ್ನುಶಾಸಕ ಬಸನಗೌಡ ಪಾಟೀಲ ಯತ್ನಾಳ ಸೋಮವಾರ ವಿತರಿಸಿದರು.</p>.<p>ವಿದ್ಯಾರ್ಥಿಗಳು ತಂತ್ರಜ್ಞಾನದ ಯುಗದಲ್ಲಿ ಹೊಸದನ್ನು ಸಂಶೋಧಿಸಲು ಹಾಗೂ ಹೆಚ್ಚಿನ ಕಲಿಕೆಗೆ ಮತ್ತು ಉನ್ನತ ವ್ಯಾಸಂಗಕ್ಕೆ ಲ್ಯಾಪ್ಟಾಪ್ ಸಹಕಾರಿಯಾಗಲಿದೆ ಎಂದು ಹೇಳಿದರು.</p>.<p>ಎಲ್ಲ ವರ್ಗಗಳಲ್ಲೂ ಸಮಾನತೆ ತರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂಲ ಆಶಯವಾಗಿತ್ತು, ಅದರಂತೆ ಸರ್ಕಾರದ ಎಲ್ಲ ಯೋಜನೆಗಳನ್ನು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ತಲುಪಿಸಲಾಗುತ್ತಿದೆ ಎಂದರು.</p>.<p>ವಿಜಯಪುರವನ್ನು ರಾಜ್ಯದಲ್ಲೇ ಮಾದರಿಮತಕ್ಷೇತ್ರ ಮಾಡಲು ಸಂಕಲ್ಪ ಮಾಡಿದ್ದು, ಈ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.</p>.<p>ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ ವಿಜಯಪುರದ ಸುನೀತಾ ಗೋಟ್ಯಾಳ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ನೀವು ಸಹ ಯುಪಿಎಸ್ಸಿ ಪರೀಕ್ಷೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿ ಜಿಲ್ಲೆಗೆ ಮತ್ತು ನಾಡಿಗೆ ಕೀರ್ತಿ ತರಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ಸರ್ಕಾರ ನೀಡುತ್ತಿರುವ ಎಲ್ಲ ಯೋಜನೆಗಳನ್ನು ಸಮಾಜದ ಎಲ್ಲ ಸಮುದಾಯದ ವಿದ್ಯಾರ್ಥಿಗಳು ಪಡೆದುಕೊಂಡು, ಉತ್ತಮ ಜ್ಞಾನಾರ್ಜನೆ ಪಡೆದುಕೊಳ್ಳುವ ಮೂಲಕ ಈ ದೇಶದ ಸಂಪತ್ತಾಗಿ ರೂಪಗೊಳ್ಳಬೇಕು ಎಂದರು.</p>.<p>ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಪ್ರಭು ದೇಸಾಯಿ, ಸಾಯಿಬಣ್ಣ ಭೂವಿ, ಬಿ.ಡಿ.ಎ ಅಧ್ಯಕ್ಷ ಶ್ರೀಹರಿ ಗೊಳಸಂಗಿ,ಸ್ವಾಮಿ ವಿವೇಕಾನಂದ ಸೇನೆ ಅಧ್ಯಕ್ಷ ರಾಘವ ಅಣ್ಣಿಗೇರಿ, ಸಿದ್ಧೇಶ್ವರ ಸಂಸ್ಥೆ ಚೆರಮನ್ ಬಸಯ್ಯ ಹಿರೇಮಠ, ಉಪಾಧ್ಯಕ್ಷ ಸಂಗು ಸಜ್ಜನ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong>ಉನ್ನತ ಶಿಕ್ಷಣ ಕಲಿಯುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪೌರ ಕಾರ್ಮಿಕರ ಮಕ್ಕಳಿಗೆಮಹಾನಗರ ಪಾಲಿಕೆಯ ಎಸ್.ಎಫ್.ಸಿ ಅನುದಾನದಲ್ಲಿ ಉಚಿತ ಲ್ಯಾಪ್ಟಾಪ್ ಅನ್ನುಶಾಸಕ ಬಸನಗೌಡ ಪಾಟೀಲ ಯತ್ನಾಳ ಸೋಮವಾರ ವಿತರಿಸಿದರು.</p>.<p>ವಿದ್ಯಾರ್ಥಿಗಳು ತಂತ್ರಜ್ಞಾನದ ಯುಗದಲ್ಲಿ ಹೊಸದನ್ನು ಸಂಶೋಧಿಸಲು ಹಾಗೂ ಹೆಚ್ಚಿನ ಕಲಿಕೆಗೆ ಮತ್ತು ಉನ್ನತ ವ್ಯಾಸಂಗಕ್ಕೆ ಲ್ಯಾಪ್ಟಾಪ್ ಸಹಕಾರಿಯಾಗಲಿದೆ ಎಂದು ಹೇಳಿದರು.</p>.<p>ಎಲ್ಲ ವರ್ಗಗಳಲ್ಲೂ ಸಮಾನತೆ ತರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂಲ ಆಶಯವಾಗಿತ್ತು, ಅದರಂತೆ ಸರ್ಕಾರದ ಎಲ್ಲ ಯೋಜನೆಗಳನ್ನು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ತಲುಪಿಸಲಾಗುತ್ತಿದೆ ಎಂದರು.</p>.<p>ವಿಜಯಪುರವನ್ನು ರಾಜ್ಯದಲ್ಲೇ ಮಾದರಿಮತಕ್ಷೇತ್ರ ಮಾಡಲು ಸಂಕಲ್ಪ ಮಾಡಿದ್ದು, ಈ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.</p>.<p>ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ ವಿಜಯಪುರದ ಸುನೀತಾ ಗೋಟ್ಯಾಳ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ನೀವು ಸಹ ಯುಪಿಎಸ್ಸಿ ಪರೀಕ್ಷೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿ ಜಿಲ್ಲೆಗೆ ಮತ್ತು ನಾಡಿಗೆ ಕೀರ್ತಿ ತರಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ಸರ್ಕಾರ ನೀಡುತ್ತಿರುವ ಎಲ್ಲ ಯೋಜನೆಗಳನ್ನು ಸಮಾಜದ ಎಲ್ಲ ಸಮುದಾಯದ ವಿದ್ಯಾರ್ಥಿಗಳು ಪಡೆದುಕೊಂಡು, ಉತ್ತಮ ಜ್ಞಾನಾರ್ಜನೆ ಪಡೆದುಕೊಳ್ಳುವ ಮೂಲಕ ಈ ದೇಶದ ಸಂಪತ್ತಾಗಿ ರೂಪಗೊಳ್ಳಬೇಕು ಎಂದರು.</p>.<p>ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಪ್ರಭು ದೇಸಾಯಿ, ಸಾಯಿಬಣ್ಣ ಭೂವಿ, ಬಿ.ಡಿ.ಎ ಅಧ್ಯಕ್ಷ ಶ್ರೀಹರಿ ಗೊಳಸಂಗಿ,ಸ್ವಾಮಿ ವಿವೇಕಾನಂದ ಸೇನೆ ಅಧ್ಯಕ್ಷ ರಾಘವ ಅಣ್ಣಿಗೇರಿ, ಸಿದ್ಧೇಶ್ವರ ಸಂಸ್ಥೆ ಚೆರಮನ್ ಬಸಯ್ಯ ಹಿರೇಮಠ, ಉಪಾಧ್ಯಕ್ಷ ಸಂಗು ಸಜ್ಜನ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>