<p><strong>ಸಿಂದಗಿ:</strong> ‘ಕ್ರೀಡೆಯಿಂದ ಶಾಲಾ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ. ವಿದ್ಯಾರ್ಥಿಗಳು ಸೋಲು– ಗೆಲುವನ್ನು ಸಮನಾಗಿ ಸ್ವೀಕರಿಸಬೇಕು’ ಎಂದು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಪ್ರಾಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ.ರವಿ ಗೋಲಾ ಹೇಳಿದರು.</p>.<p>ಇಲ್ಲಿಯ ಹೊರವಲಯದ ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್ನಲ್ಲಿ ಶನಿವಾರ ಪ್ರಾರಂಭಗೊಂಡ ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕ್ರೀಡಾಸಕ್ತಿಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕು. ಭವಿಷ್ಯದಲ್ಲಿ ಅವರು ರಾಷ್ಟ್ರ, ಅಂತರರಾಷ್ಟ್ರೀಯ ಮತ್ತು ಓಲಂಪಿಕ್ ಕ್ರೀಡೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯೆ ಶಾಹಿಮೋಲ್ ಶೇಖ್ ಮಾತನಾಡಿ, ‘ಕ್ರೀಡಾ ಚಟುವಟಿಕೆ ಮೂಲಕ ಮಕ್ಕಳಲ್ಲಿ ಸ್ನೇಹ ಸಂಬಂಧ ವೃದ್ಧಿಸುತ್ತದೆ. ಶಿಸ್ತು ಬೆಳೆಯುತ್ತದೆ’ ಎಂದರು.</p>.<p>ಶಾಲೆಯ ನಿರ್ದೇಶಕ ದತ್ತು ಮಾವೂರ, ದೈಹಿಕ ಶಿಕ್ಷಣ ನಿರ್ದೇಶಕ ಚನ್ನೂ ಪಡಶೆಟ್ಟಿ, ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ಶ್ರೀನಿವಾಸ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ:</strong> ‘ಕ್ರೀಡೆಯಿಂದ ಶಾಲಾ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ. ವಿದ್ಯಾರ್ಥಿಗಳು ಸೋಲು– ಗೆಲುವನ್ನು ಸಮನಾಗಿ ಸ್ವೀಕರಿಸಬೇಕು’ ಎಂದು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಪ್ರಾಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ.ರವಿ ಗೋಲಾ ಹೇಳಿದರು.</p>.<p>ಇಲ್ಲಿಯ ಹೊರವಲಯದ ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್ನಲ್ಲಿ ಶನಿವಾರ ಪ್ರಾರಂಭಗೊಂಡ ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕ್ರೀಡಾಸಕ್ತಿಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕು. ಭವಿಷ್ಯದಲ್ಲಿ ಅವರು ರಾಷ್ಟ್ರ, ಅಂತರರಾಷ್ಟ್ರೀಯ ಮತ್ತು ಓಲಂಪಿಕ್ ಕ್ರೀಡೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯೆ ಶಾಹಿಮೋಲ್ ಶೇಖ್ ಮಾತನಾಡಿ, ‘ಕ್ರೀಡಾ ಚಟುವಟಿಕೆ ಮೂಲಕ ಮಕ್ಕಳಲ್ಲಿ ಸ್ನೇಹ ಸಂಬಂಧ ವೃದ್ಧಿಸುತ್ತದೆ. ಶಿಸ್ತು ಬೆಳೆಯುತ್ತದೆ’ ಎಂದರು.</p>.<p>ಶಾಲೆಯ ನಿರ್ದೇಶಕ ದತ್ತು ಮಾವೂರ, ದೈಹಿಕ ಶಿಕ್ಷಣ ನಿರ್ದೇಶಕ ಚನ್ನೂ ಪಡಶೆಟ್ಟಿ, ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ಶ್ರೀನಿವಾಸ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>