<p><strong>ಮುದ್ದೇಬಿಹಾಳ: </strong>ಸಾಮಾನ್ಯ ಕಾನೂನಿನ ಅರಿವು ವ್ಯಾಪಕವಾಗಿ ಹದಿಹರೆಯದ ಮಕ್ಕಳ ಪಠ್ಯಕ್ರಮದಲ್ಲಿ ಅಳವಡಿಕೆಯಾದಾಗ ಮಾತ್ರವೇ ದೇಶದ ಬದಲಾವಣೆ ಸಾಧ್ಯ ಎಂದು ಕರ್ನಾಟಕ ಸರ್ಕಾರ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ್ವರ ಬಬಲೇಶ್ವರ ಹೇಳಿದರು.</p>.<p>ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಭಾನುವಾರ ನಡೆದ ವಿದ್ಯಾ ಭಾರತಿ ಕರ್ನಾಟಕ ವಿಜಯಪುರ ಜಿಲ್ಲಾ ಸಂಕುಲಗಳ ಶಾಲೆಗಳ 2025-26ನೇ ಸಾಲಿನ ಶೈಕ್ಷಣಿಕ ಸಹಮಿಲನದಲ್ಲಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು.</p>.<p>ಸಂಸ್ಕಾರದ ಆಯ್ಕೆಯಲ್ಲಿ ಬದುಕಿನ ಉಸಿರು ಅಡಗಿರುತ್ತದೆ. ತಾಯಿ, ರೈತ, ಶಿಕ್ಷಕ ರುಗಳಿಗೆ ಯಾವುದೇ ಜಾತಿ, ಭೇದ-ಭಾವ ಸಂಕೋಲೆಗಳ ಬಂಧನವಿಲ್ಲ. ಸಮಾಜದ ಅನಿಷ್ಟ ಪದ್ಧತಿ ದೂರವಾಗಬೇಕಾದರೆ ವಿದ್ಯಾರ್ಥಿ ದೆಸೆಯಲ್ಲಿಯೆ ವ್ಯಾಸಂಗಮಾಡಿರಬೇಕು ಎಂದು ಹೇಳಿದರು. </p>.<p>ಕೇತ್ರ ಶಿಕ್ಷಣಾಧಿಕಾರಿಗಳಾದ ಬಿ.ಎಸ್.ಸಾವಳಗಿ ಮಾತನಾಡಿ, ವಿದ್ಯಾ ಭಾರತಿ ಸಂಕುಲಗಳು ಭಾರತೀಯ ಚಿಂತನೆಗಳನ್ನು ಎತ್ತರಿಸುವ ಪ್ರಯತ್ನ ಮಾಡುತ್ತಿದೆ. ನಮ್ಮೆಲ್ಲರಲ್ಲಿ ನಾವೆಲ್ಲ ಒಂದು ಎನ್ನುವ ಭಾವೆನೆ ಸದಾ ಇರಬೇಕು. ಶಿಕ್ಷಕರು ತಮ್ಮಲ್ಲಿ ವಿದ್ಯಾರ್ಥಿಗಳನ್ನ ವಿವಿಧ ಕ್ಷೇತ್ರದ ಬೆಳವಣಿಗೆಗೆ ಬೇಕಾದ ತ್ಯಾಗಕ್ಕೆ ಸಿದ್ದರಾಗುವ , ರೈತರನ್ನು ಹಾಗೂ ಶಿಕ್ಷಕರನ್ನು ತಯಾರುಮಾಡಬೇಕಾಗಿದೆ. ಮಕ್ಕಳನ್ನು ದೇಶದ ರತ್ನವನ್ನಾಗಿ ತಯಾರುಮಾಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದು ಹೇಳಿದರು.</p>.<p>ಆರ್.ಎಸ್.ಎಸ್ ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ನಾಗೇಶ ಚಿನ್ನಾರೆಡ್ಡಿ ಉಪನ್ಯಾಸ ನೀಡಿದರು. <br /> ವಿದ್ಯಾ ಭಾರತಿ ಜಿಲ್ಲಾ ಅಧ್ಯಕ್ಷರಾದ ಪ್ರಭು ಕಡಿ, ಪ್ರಾಂತ ವಿದ್ಯಾ ಭಾರತಿ ಕಾರ್ಯದರ್ಶಿ ವಸಂತ ಮಾಧವ, ಜ್ಞಾನ ಭಾರತಿ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಬಿ.ಪಿ.ಕುಲಕರ್ಣಿ, ವಿದ್ಯಾ ಭಾರತಿ ಜಿಲ್ಲಾ ಉಪಾಧ್ಯಕ್ಷರಾದ ಚಂದ್ರಶೇಖರ ಕವಟಗಿ, ಕರ್ನಾಟಕ ಬ್ಯಾಂಕ್ ನಿರ್ದೇಶಕರಾದ ಸತೀಶ ಓಸ್ವಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದ್ದೇಬಿಹಾಳ: </strong>ಸಾಮಾನ್ಯ ಕಾನೂನಿನ ಅರಿವು ವ್ಯಾಪಕವಾಗಿ ಹದಿಹರೆಯದ ಮಕ್ಕಳ ಪಠ್ಯಕ್ರಮದಲ್ಲಿ ಅಳವಡಿಕೆಯಾದಾಗ ಮಾತ್ರವೇ ದೇಶದ ಬದಲಾವಣೆ ಸಾಧ್ಯ ಎಂದು ಕರ್ನಾಟಕ ಸರ್ಕಾರ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ್ವರ ಬಬಲೇಶ್ವರ ಹೇಳಿದರು.</p>.<p>ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಭಾನುವಾರ ನಡೆದ ವಿದ್ಯಾ ಭಾರತಿ ಕರ್ನಾಟಕ ವಿಜಯಪುರ ಜಿಲ್ಲಾ ಸಂಕುಲಗಳ ಶಾಲೆಗಳ 2025-26ನೇ ಸಾಲಿನ ಶೈಕ್ಷಣಿಕ ಸಹಮಿಲನದಲ್ಲಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು.</p>.<p>ಸಂಸ್ಕಾರದ ಆಯ್ಕೆಯಲ್ಲಿ ಬದುಕಿನ ಉಸಿರು ಅಡಗಿರುತ್ತದೆ. ತಾಯಿ, ರೈತ, ಶಿಕ್ಷಕ ರುಗಳಿಗೆ ಯಾವುದೇ ಜಾತಿ, ಭೇದ-ಭಾವ ಸಂಕೋಲೆಗಳ ಬಂಧನವಿಲ್ಲ. ಸಮಾಜದ ಅನಿಷ್ಟ ಪದ್ಧತಿ ದೂರವಾಗಬೇಕಾದರೆ ವಿದ್ಯಾರ್ಥಿ ದೆಸೆಯಲ್ಲಿಯೆ ವ್ಯಾಸಂಗಮಾಡಿರಬೇಕು ಎಂದು ಹೇಳಿದರು. </p>.<p>ಕೇತ್ರ ಶಿಕ್ಷಣಾಧಿಕಾರಿಗಳಾದ ಬಿ.ಎಸ್.ಸಾವಳಗಿ ಮಾತನಾಡಿ, ವಿದ್ಯಾ ಭಾರತಿ ಸಂಕುಲಗಳು ಭಾರತೀಯ ಚಿಂತನೆಗಳನ್ನು ಎತ್ತರಿಸುವ ಪ್ರಯತ್ನ ಮಾಡುತ್ತಿದೆ. ನಮ್ಮೆಲ್ಲರಲ್ಲಿ ನಾವೆಲ್ಲ ಒಂದು ಎನ್ನುವ ಭಾವೆನೆ ಸದಾ ಇರಬೇಕು. ಶಿಕ್ಷಕರು ತಮ್ಮಲ್ಲಿ ವಿದ್ಯಾರ್ಥಿಗಳನ್ನ ವಿವಿಧ ಕ್ಷೇತ್ರದ ಬೆಳವಣಿಗೆಗೆ ಬೇಕಾದ ತ್ಯಾಗಕ್ಕೆ ಸಿದ್ದರಾಗುವ , ರೈತರನ್ನು ಹಾಗೂ ಶಿಕ್ಷಕರನ್ನು ತಯಾರುಮಾಡಬೇಕಾಗಿದೆ. ಮಕ್ಕಳನ್ನು ದೇಶದ ರತ್ನವನ್ನಾಗಿ ತಯಾರುಮಾಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದು ಹೇಳಿದರು.</p>.<p>ಆರ್.ಎಸ್.ಎಸ್ ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ನಾಗೇಶ ಚಿನ್ನಾರೆಡ್ಡಿ ಉಪನ್ಯಾಸ ನೀಡಿದರು. <br /> ವಿದ್ಯಾ ಭಾರತಿ ಜಿಲ್ಲಾ ಅಧ್ಯಕ್ಷರಾದ ಪ್ರಭು ಕಡಿ, ಪ್ರಾಂತ ವಿದ್ಯಾ ಭಾರತಿ ಕಾರ್ಯದರ್ಶಿ ವಸಂತ ಮಾಧವ, ಜ್ಞಾನ ಭಾರತಿ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಬಿ.ಪಿ.ಕುಲಕರ್ಣಿ, ವಿದ್ಯಾ ಭಾರತಿ ಜಿಲ್ಲಾ ಉಪಾಧ್ಯಕ್ಷರಾದ ಚಂದ್ರಶೇಖರ ಕವಟಗಿ, ಕರ್ನಾಟಕ ಬ್ಯಾಂಕ್ ನಿರ್ದೇಶಕರಾದ ಸತೀಶ ಓಸ್ವಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>