<p><strong>ಆಲಮೇಲ(ವಿಜಯಪುರ):</strong> ತಾಲ್ಲೂಕಿನ ಬಮ್ಮನಹಳ್ಳಿ, ದೇವರನಾವದಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಮಂಗಳವಾರ ತಡರಾತ್ರಿ ಚಿರತೆಯು ಆಕಳು ಮೇಲೆ ದಾಳಿ ಮಾಡಿ, ಕೊಂದುಹಾಕಿದೆ.</p>.<p>ಒಂದು ವಾರದಿಂದ ಈ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆ ಓಡಾಡುತ್ತಿರುವುದಾಗಿ ಪ್ರತ್ಯಕ್ಷದರ್ಶಿಗಳು ಹೇಳಿದರೂ ಯಾರು ಪರಿಗಣನೆ ಮಾಡಿರಲಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<p>ಎರಡು ದಿನಗಳ ಹಿಂದೆ ದೇವರನಾವದಗಿ ಗ್ರಾಮದ ವ್ಯಾಪ್ತಿಯಲ್ಲಿ ಎರಡು ಆಕಳ ಕರುಗಳ ಮೇಲೆ ದಾಳಿ ಮಾಡಿ ಕೊಂದುಹಾಕಿದೆ. ಆದರೆ, ಈ ಬಗ್ಗೆ ಯಾರು ದೂರು ನೀಡದೇ ಇರುವುದರಿಂದ ಮಾಹಿತಿ ಸ್ಪಸ್ಟವಾಗಿರಲಿಲ್ಲ.</p>.<p>ಮಂಗಳವಾರ ರಾತ್ರಿ ಬೂಮ್ಮನಹಳ್ಳಿ ಗ್ರಾಮದ ಪ್ರೇಮನಗೌಡ ಗೋಲ್ಲಾಳಗೌಡ ಬಿರಾದಾರ ಎಂಬುವವರ ಜಮೀನಿನಲ್ಲಿದ್ದ ಆಕಳ ಮೇಲೆ ದಾಳಿ ಮಾಡಿ ಕೊಂದಿರುವ ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಚಿರತೆಯೇಈ ದಾಳಿ ಮಾಡಿದೆ ಎಂದು ಖಚಿತಪಡಿಸಿದ್ದಾರೆ.</p>.<p class="Subhead">ಶೀಘ್ರ ಸೆರೆ:</p>.<p>ಚಿರತೆಯನ್ನು ಹಿಡಿಯಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದ್ದು, ಈ ಭಾಗದಲ್ಲಿ ಅಲ್ಲಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅರಣ್ಯ ಅಧಿಕಾರಿಗಳು ಸ್ಥಳದಲ್ಲೆ ಬೀಡುಬಿಟ್ಟು, ಅದರ ಚಲನವಲನ ಆಧರಿಸಿ ಆದಷ್ಟು ಬೇಗ ಸೆರೆ ಹಿಡಿಯಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ರಾತ್ರಿಹೊತ್ತು ರೈತರು ಜಾಗೃತೆಯಿಂದ ಇರಬೇಕು ಎಂದು ಎಚ್ಚರಿಗೆ ನೀಡಿದ್ದಾರೆ.</p>.<p>ಸಿಂದಗಿ ತಹಶೀಲ್ದಾರ್ ಸಂಜೀವಕುಮಾರ ದಾಸರ, ಕಂದಾಯ ಅಧಿಕಾರಿ ಎ.ಡಿ. ಅತ್ತಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p>ಚಿರತೆ ದಾಳಿ ಮಾಡಿರುವ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆಮಾಜಿ ಶಾಸಕ ರಮೇಶ ಭೂಸನೂರ ಭೇಟಿ ನೀಡಿದ್ದರು. ಚಿರತೆಯನ್ನು ಆದಷ್ಟು ಬೇಗ ಸೆರೆ ಹಿಡಿಯುವಂತೆ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲಮೇಲ(ವಿಜಯಪುರ):</strong> ತಾಲ್ಲೂಕಿನ ಬಮ್ಮನಹಳ್ಳಿ, ದೇವರನಾವದಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಮಂಗಳವಾರ ತಡರಾತ್ರಿ ಚಿರತೆಯು ಆಕಳು ಮೇಲೆ ದಾಳಿ ಮಾಡಿ, ಕೊಂದುಹಾಕಿದೆ.</p>.<p>ಒಂದು ವಾರದಿಂದ ಈ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆ ಓಡಾಡುತ್ತಿರುವುದಾಗಿ ಪ್ರತ್ಯಕ್ಷದರ್ಶಿಗಳು ಹೇಳಿದರೂ ಯಾರು ಪರಿಗಣನೆ ಮಾಡಿರಲಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<p>ಎರಡು ದಿನಗಳ ಹಿಂದೆ ದೇವರನಾವದಗಿ ಗ್ರಾಮದ ವ್ಯಾಪ್ತಿಯಲ್ಲಿ ಎರಡು ಆಕಳ ಕರುಗಳ ಮೇಲೆ ದಾಳಿ ಮಾಡಿ ಕೊಂದುಹಾಕಿದೆ. ಆದರೆ, ಈ ಬಗ್ಗೆ ಯಾರು ದೂರು ನೀಡದೇ ಇರುವುದರಿಂದ ಮಾಹಿತಿ ಸ್ಪಸ್ಟವಾಗಿರಲಿಲ್ಲ.</p>.<p>ಮಂಗಳವಾರ ರಾತ್ರಿ ಬೂಮ್ಮನಹಳ್ಳಿ ಗ್ರಾಮದ ಪ್ರೇಮನಗೌಡ ಗೋಲ್ಲಾಳಗೌಡ ಬಿರಾದಾರ ಎಂಬುವವರ ಜಮೀನಿನಲ್ಲಿದ್ದ ಆಕಳ ಮೇಲೆ ದಾಳಿ ಮಾಡಿ ಕೊಂದಿರುವ ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಚಿರತೆಯೇಈ ದಾಳಿ ಮಾಡಿದೆ ಎಂದು ಖಚಿತಪಡಿಸಿದ್ದಾರೆ.</p>.<p class="Subhead">ಶೀಘ್ರ ಸೆರೆ:</p>.<p>ಚಿರತೆಯನ್ನು ಹಿಡಿಯಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದ್ದು, ಈ ಭಾಗದಲ್ಲಿ ಅಲ್ಲಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅರಣ್ಯ ಅಧಿಕಾರಿಗಳು ಸ್ಥಳದಲ್ಲೆ ಬೀಡುಬಿಟ್ಟು, ಅದರ ಚಲನವಲನ ಆಧರಿಸಿ ಆದಷ್ಟು ಬೇಗ ಸೆರೆ ಹಿಡಿಯಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ರಾತ್ರಿಹೊತ್ತು ರೈತರು ಜಾಗೃತೆಯಿಂದ ಇರಬೇಕು ಎಂದು ಎಚ್ಚರಿಗೆ ನೀಡಿದ್ದಾರೆ.</p>.<p>ಸಿಂದಗಿ ತಹಶೀಲ್ದಾರ್ ಸಂಜೀವಕುಮಾರ ದಾಸರ, ಕಂದಾಯ ಅಧಿಕಾರಿ ಎ.ಡಿ. ಅತ್ತಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p>ಚಿರತೆ ದಾಳಿ ಮಾಡಿರುವ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆಮಾಜಿ ಶಾಸಕ ರಮೇಶ ಭೂಸನೂರ ಭೇಟಿ ನೀಡಿದ್ದರು. ಚಿರತೆಯನ್ನು ಆದಷ್ಟು ಬೇಗ ಸೆರೆ ಹಿಡಿಯುವಂತೆ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>