<p><strong>ವಿಜಯಪುರ:</strong>ಸ್ವಾತಂತ್ರ್ಯದ ಅಮೃತ ಮಹೋತ್ಸವವು ಕೇವಲ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮವಾಗದೇ, ಅದರಲ್ಲಿ ಪ್ರತಿಯೊಬ್ಬ ಭಾರತೀಯರೂ ದೇಶಪ್ರೇಮದೊಂದಿಗೆ ಭಾಗವಹಿಸುವ ಮೂಲಕ ಜನೋತ್ಸವವಾಗಬೇಕು ಎಂದುಮುಜರಾಯಿ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.</p>.<p>ತೊರವಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಭಾನುವಾರ ಆಯೋಜಿಸಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>ವಿಶ್ವದ ಅತ್ಯಂತ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದು. ಜಾತ್ಯತೀತ ನೆಲೆಗಟ್ಟಿನ ಮೇಲೆ ರೂಪುಗೊಂಡಿರುವ ನಮ್ಮ ದೇಶದ ಸಾಮಾಜಿಕ, ಆರ್ಥಿಕ, ರಾಜಕೀಯ, ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ ಹಾಗೂ ರಕ್ಷಣಾ ವಲಯಗಳ ನೀತಿ-ಸಿದ್ಧಾಂತಗಳು ಇಡೀ ವಿಶ್ವಕ್ಕೇ ಮಾದರಿಯಾಗಿವೆ ಎಂದು ಹೇಳಿದರು.</p>.<p>ಬಸವಾದಿ ಶರಣರು ಕಂಡ ಸಮಾನತೆಯ ಸಮಾಜ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಆಶಿಸಿದ ತಾರತಮ್ಯ ರಹಿತ, ಧರ್ಮ ನಿರಪೇಕ್ಷಿತ ಮಾದರಿ ಸಮಾಜದ ಕನಸುಗಳೊಂದಿಗೆ ಭಾರತೀಯರೂ ಸ್ವಾವಲಂಬಿ, ಆತ್ಮನಿರ್ಭರ ರಾಷ್ಟ್ರ ನಿರ್ಮಾಣಕ್ಕಾಗಿ ಕಂಕಣಬದ್ಧರಾಗಬೇಕು ಎಂದರು.</p>.<p>ಕೆಚ್ಚೆದೆಯ ಸ್ವಾತಂತ್ರ್ಯ ಸೇನಾನಿಗಳ ಧೈರ್ಯ, ದೇಶಪ್ರೇಮ, ತ್ಯಾಗ, ಹೋರಾಟ ಮತ್ತು ಬಲಿದಾನಗಳ ಫಲವನ್ನು ಇಂದು ನಾವೆಲ್ಲ ಅನುಭವಿಸುತ್ತಿದ್ದೇವೆ ಎಂದು ಸ್ಮರಿಸಿದರು.</p>.<p>ಕೋವಿಡ್ ಸಾಂಕ್ರಾಮಿಕ ರೋಗವು ಮನಕುಲದ ಸುಖ-ಶಾಂತಿ-ನೆಮ್ಮದಿಯನ್ನು ಕಿತ್ತುಕೊಂಡು, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರಗಳ ಮೇಲೆ ಗಂಭೀರ ಪ್ರಮಾಣದಲ್ಲಿ ದುಷ್ಪರಿಣಾಮವನ್ನುಂಟುಮಾಡಿದೆ ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ ಇದುವರೆಗೆ 7 ಲಕ್ಷ ಜನರಿಗೆ ಒಂದನೇ ಡೋಸ್ ಹಾಗೂ 1.72 ಲಕ್ಷ ಜನರಿಗೆ ಎರಡನೇ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ ಎಂದರು.</p>.<p>ಅತಿವೃಷ್ಠಿಯಿಂದಾಗಿ ಅಂದಾಜು ₹92.79 ಕೋಟಿ ಮೊತ್ತದ ಮೂಲ ಸೌಕರ್ಯಗಳು ಹಾನಿಗೀಡಾಗಿದ್ದು, ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಹೇಳಿದರು.</p>.<p>ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದ ಬಳಿಕ ಪಥ ಸಂಚಲನ ವೀಕ್ಷಿಸಿದರು. ಕೋವಿಡ್ ಸಂದರ್ಭದಲ್ಲಿ ಅನುಪಮ ಸೇವೆಗೈದ ವಿವಿಧ ಕ್ಷೇತ್ರಗಳ ಪ್ರಮುಖರನ್ನು ಸಚಿವರು ಸನ್ಮಾನಿಸಿದರು.ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.</p>.<p>ಸಂಸದ ರಮೇಶ ಜಿಗಜಿಣಗಿ,ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಇದ್ದರು.</p>.<p class="Briefhead"><strong>‘ಜಿಲ್ಲೆಗೆ ಕೊರೊನಾ ರೂಪಾಂತರಿ ಪತ್ತೆ ಪ್ರಯೋಗಾಲಯ’</strong></p>.<p><strong>ವಿಜಯಪುರ: </strong>ರೂಪಾಂತರಗೊಳ್ಳುತ್ತಿರುವ ಕೊರೊನಾ ಡೆಲ್ಟಾ, ಡೆಲ್ಟಾ ಪ್ಲಸ್ ವೈರಾಣು ಪತ್ತೆ ಪ್ರಯೋಗಾಲಯ (ಜೀನೋಮಿಕ್ ಸೀಕ್ವೆನ್ಸಿಂಗ್) ಜಿಲ್ಲೆಗೆ ಮಂಜೂರಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.</p>.<p>ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯಾಗಿರುವುದರಿಂದ ಹಾಗೂ ಬೆಂಗಳೂರಿನಲ್ಲಿರುವ ಈ ಪ್ರಯೋಗಾಲಯ ಜಿಲ್ಲೆಗೆ ದೂರವಾಗುವುದರಿಂದ ಜಿಲ್ಲೆಯಲ್ಲೇ ಪ್ರಯೋಗಾಲ ಆರಂಭಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ ಎಂದರು.</p>.<p>ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ವ್ಯಕ್ತಿತ್ವ ಏನು ಎಂಬುದು ಎಲ್ಲಿರಿಗೂ ಗೊತ್ತು. ಅವರೊಬ್ಬ ಅಜಾತ ಶತ್ರುವಾಗಿದ್ದರು. ಅವರನ್ನು ಇಂದಿನ ರಾಜಕೀಯಕ್ಕೆ ಎಳೆದುತಂದು ಅವಮಾನ ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong>ಸ್ವಾತಂತ್ರ್ಯದ ಅಮೃತ ಮಹೋತ್ಸವವು ಕೇವಲ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮವಾಗದೇ, ಅದರಲ್ಲಿ ಪ್ರತಿಯೊಬ್ಬ ಭಾರತೀಯರೂ ದೇಶಪ್ರೇಮದೊಂದಿಗೆ ಭಾಗವಹಿಸುವ ಮೂಲಕ ಜನೋತ್ಸವವಾಗಬೇಕು ಎಂದುಮುಜರಾಯಿ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.</p>.<p>ತೊರವಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಭಾನುವಾರ ಆಯೋಜಿಸಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>ವಿಶ್ವದ ಅತ್ಯಂತ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದು. ಜಾತ್ಯತೀತ ನೆಲೆಗಟ್ಟಿನ ಮೇಲೆ ರೂಪುಗೊಂಡಿರುವ ನಮ್ಮ ದೇಶದ ಸಾಮಾಜಿಕ, ಆರ್ಥಿಕ, ರಾಜಕೀಯ, ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ ಹಾಗೂ ರಕ್ಷಣಾ ವಲಯಗಳ ನೀತಿ-ಸಿದ್ಧಾಂತಗಳು ಇಡೀ ವಿಶ್ವಕ್ಕೇ ಮಾದರಿಯಾಗಿವೆ ಎಂದು ಹೇಳಿದರು.</p>.<p>ಬಸವಾದಿ ಶರಣರು ಕಂಡ ಸಮಾನತೆಯ ಸಮಾಜ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಆಶಿಸಿದ ತಾರತಮ್ಯ ರಹಿತ, ಧರ್ಮ ನಿರಪೇಕ್ಷಿತ ಮಾದರಿ ಸಮಾಜದ ಕನಸುಗಳೊಂದಿಗೆ ಭಾರತೀಯರೂ ಸ್ವಾವಲಂಬಿ, ಆತ್ಮನಿರ್ಭರ ರಾಷ್ಟ್ರ ನಿರ್ಮಾಣಕ್ಕಾಗಿ ಕಂಕಣಬದ್ಧರಾಗಬೇಕು ಎಂದರು.</p>.<p>ಕೆಚ್ಚೆದೆಯ ಸ್ವಾತಂತ್ರ್ಯ ಸೇನಾನಿಗಳ ಧೈರ್ಯ, ದೇಶಪ್ರೇಮ, ತ್ಯಾಗ, ಹೋರಾಟ ಮತ್ತು ಬಲಿದಾನಗಳ ಫಲವನ್ನು ಇಂದು ನಾವೆಲ್ಲ ಅನುಭವಿಸುತ್ತಿದ್ದೇವೆ ಎಂದು ಸ್ಮರಿಸಿದರು.</p>.<p>ಕೋವಿಡ್ ಸಾಂಕ್ರಾಮಿಕ ರೋಗವು ಮನಕುಲದ ಸುಖ-ಶಾಂತಿ-ನೆಮ್ಮದಿಯನ್ನು ಕಿತ್ತುಕೊಂಡು, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರಗಳ ಮೇಲೆ ಗಂಭೀರ ಪ್ರಮಾಣದಲ್ಲಿ ದುಷ್ಪರಿಣಾಮವನ್ನುಂಟುಮಾಡಿದೆ ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ ಇದುವರೆಗೆ 7 ಲಕ್ಷ ಜನರಿಗೆ ಒಂದನೇ ಡೋಸ್ ಹಾಗೂ 1.72 ಲಕ್ಷ ಜನರಿಗೆ ಎರಡನೇ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ ಎಂದರು.</p>.<p>ಅತಿವೃಷ್ಠಿಯಿಂದಾಗಿ ಅಂದಾಜು ₹92.79 ಕೋಟಿ ಮೊತ್ತದ ಮೂಲ ಸೌಕರ್ಯಗಳು ಹಾನಿಗೀಡಾಗಿದ್ದು, ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಹೇಳಿದರು.</p>.<p>ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದ ಬಳಿಕ ಪಥ ಸಂಚಲನ ವೀಕ್ಷಿಸಿದರು. ಕೋವಿಡ್ ಸಂದರ್ಭದಲ್ಲಿ ಅನುಪಮ ಸೇವೆಗೈದ ವಿವಿಧ ಕ್ಷೇತ್ರಗಳ ಪ್ರಮುಖರನ್ನು ಸಚಿವರು ಸನ್ಮಾನಿಸಿದರು.ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.</p>.<p>ಸಂಸದ ರಮೇಶ ಜಿಗಜಿಣಗಿ,ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಇದ್ದರು.</p>.<p class="Briefhead"><strong>‘ಜಿಲ್ಲೆಗೆ ಕೊರೊನಾ ರೂಪಾಂತರಿ ಪತ್ತೆ ಪ್ರಯೋಗಾಲಯ’</strong></p>.<p><strong>ವಿಜಯಪುರ: </strong>ರೂಪಾಂತರಗೊಳ್ಳುತ್ತಿರುವ ಕೊರೊನಾ ಡೆಲ್ಟಾ, ಡೆಲ್ಟಾ ಪ್ಲಸ್ ವೈರಾಣು ಪತ್ತೆ ಪ್ರಯೋಗಾಲಯ (ಜೀನೋಮಿಕ್ ಸೀಕ್ವೆನ್ಸಿಂಗ್) ಜಿಲ್ಲೆಗೆ ಮಂಜೂರಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.</p>.<p>ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯಾಗಿರುವುದರಿಂದ ಹಾಗೂ ಬೆಂಗಳೂರಿನಲ್ಲಿರುವ ಈ ಪ್ರಯೋಗಾಲಯ ಜಿಲ್ಲೆಗೆ ದೂರವಾಗುವುದರಿಂದ ಜಿಲ್ಲೆಯಲ್ಲೇ ಪ್ರಯೋಗಾಲ ಆರಂಭಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ ಎಂದರು.</p>.<p>ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ವ್ಯಕ್ತಿತ್ವ ಏನು ಎಂಬುದು ಎಲ್ಲಿರಿಗೂ ಗೊತ್ತು. ಅವರೊಬ್ಬ ಅಜಾತ ಶತ್ರುವಾಗಿದ್ದರು. ಅವರನ್ನು ಇಂದಿನ ರಾಜಕೀಯಕ್ಕೆ ಎಳೆದುತಂದು ಅವಮಾನ ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>