<p>ವಿಜಯಪುರ: ‘ಪತ್ರಕರ್ತರು ಕೇವಲ ಸಮಸ್ಯೆಗಳನ್ನೇ ವರದಿ ಮಾಡಬಾರದು, ಅದಕ್ಕೆ ಪರಿಹಾರಗಳನ್ನು ಹುಡುಕುವುದೂ ಅವರ ಜವಾಬ್ದಾರಿಯಾಗಿದೆ’ ಎಂದು ಮೈಸೂರು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥೆ ಪ್ರೊ.ಸಪ್ನಾ.ಎಸ್.ಎಂ ಹೇಳಿದರು.</p>.<p>ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗ, ಮೈಸೂರು ವಿವಿಯ ಪತ್ರಿಕೋದ್ಯಮ ವಿಭಾಗ, ಯುನಿಸೆಫ್ ಸಹಯೋಗದಲ್ಲಿ ಗುರುವಾರ ನಡೆದ ‘ಮಕ್ಕಳ ಹಕ್ಕುಗಳು, ರಕ್ಷಣೆ ಮತ್ತು ಆರೋಗ್ಯ’ ವಿಷಯದ ಕುರಿತ ಮಾಧ್ಯಮ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಅಭಿವೃದ್ಧಿ ಮತ್ತು ಸಕಾರಾತ್ಮಕ ವಿಷಯಗಳ ಬಗ್ಗೆ ಹೆಚ್ಚಿನ ಸುದ್ಧಿಗಳನ್ನು ಮಾಡಬೇಕು. ಸಮಾಜದಲ್ಲಿ ಬದಲಾವಣೆ ತರುವ ಅಭಿಯಾನಗಳ ಮೂಲಕ ವರದಿ ಮಾಡಬೇಕು. ವಿಶೇಷವಾಗಿ, ಪತ್ರಕರ್ತರು ಮಕ್ಕಳ ಧ್ವನಿಯಾಗಿ, ಅವರ ಸಮಸ್ಯೆಗಳನ್ನು, ಅಭಿರುಚಿಗಳನ್ನು, ಸಾಧನೆಗಳನ್ನು ಜನರ ಮುಂದೆ ತರುವುದರಲ್ಲಿ ಪ್ರಮುಖ ಪಾತ್ರ ವಹಿಸಬೇಕು’ ಎಂದರು.</p>.<p>ಮಹಿಳಾ ವಿವಿಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಮಾತನಾಡಿ, ‘ಇತ್ತೀಚಿಗೆ ಅಭಿವೃದ್ಧಿ ವರದಿಗಾರಿಕೆಗೆ ಗಮನ ಕೊಡುವ ಪ್ರಮಾಣವು ಕಡಿಮೆಯಾಗಿದೆ. ಅಭಿವೃದ್ಧಿ ಪತ್ರಿಕೋದ್ಯಮವೇ ನಿಜವಾದ ಪ್ರಗತಿ ಮತ್ತು ಯಶಸ್ಸು ತಂದುಕೊಡುವ ಮಾರ್ಗವಾಗಿದೆ. ಈ ಕ್ಷೇತ್ರದಲ್ಲಿ ಸಾಧನೆ ಮಾಡುವುದಕ್ಕೆ, ಪತ್ರಕರ್ತರು ನಿಸ್ಸಂದೇಹವಾಗಿ ಸಮಾಜದ ಒಳಿತಿಗಾಗಿ ಬದ್ಧರಾಗಿರಬೇಕು’ ಎಂದು ಹೇಳಿದರು.</p>.<p>ಪತ್ರಕರ್ತರು ಮಕ್ಕಳ ಹಕ್ಕುಗಳು, ಶಿಕ್ಷಣ, ಆರೋಗ್ಯ, ಹಾಗೂ ಅವುಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಹೆಚ್ಚು ಆಳವಾದ, ಸಮಗ್ರ ವರದಿಗಳನ್ನು ಮಾಡಬೇಕು. ಇದರಿಂದಾಗಿ ಸಮಾಜದಲ್ಲಿ ಮಕ್ಕಳ ಅಭಿವೃದ್ದಿಗೆ ಮತ್ತು ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಪ್ರೋತ್ಸಾಹ ನೀಡಬಹುದು ಎಂದರು.</p>.<p>ಯುನಿಸೆಫ್ನ ಪ್ರಸೂನ್ ಸೇನ್, ಪತ್ರಕರ್ತ ಡಿ.ಬಿ.ವಡವಡಗಿ, ಬಸವರಾಜ ಉಳ್ಳಾಗಡ್ಡಿ, ಜಗದೀಶ್, ಸಹಾಯಕ ಪ್ರಾಧ್ಯಾಪಕಿ ತಮೀನಾ ಕೋಲಾರ, ಸಂದೀಪ್ ನಾಯಕ್ ಸೇರಿದಂತೆ ಅನೇಕರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ‘ಪತ್ರಕರ್ತರು ಕೇವಲ ಸಮಸ್ಯೆಗಳನ್ನೇ ವರದಿ ಮಾಡಬಾರದು, ಅದಕ್ಕೆ ಪರಿಹಾರಗಳನ್ನು ಹುಡುಕುವುದೂ ಅವರ ಜವಾಬ್ದಾರಿಯಾಗಿದೆ’ ಎಂದು ಮೈಸೂರು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥೆ ಪ್ರೊ.ಸಪ್ನಾ.ಎಸ್.ಎಂ ಹೇಳಿದರು.</p>.<p>ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗ, ಮೈಸೂರು ವಿವಿಯ ಪತ್ರಿಕೋದ್ಯಮ ವಿಭಾಗ, ಯುನಿಸೆಫ್ ಸಹಯೋಗದಲ್ಲಿ ಗುರುವಾರ ನಡೆದ ‘ಮಕ್ಕಳ ಹಕ್ಕುಗಳು, ರಕ್ಷಣೆ ಮತ್ತು ಆರೋಗ್ಯ’ ವಿಷಯದ ಕುರಿತ ಮಾಧ್ಯಮ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಅಭಿವೃದ್ಧಿ ಮತ್ತು ಸಕಾರಾತ್ಮಕ ವಿಷಯಗಳ ಬಗ್ಗೆ ಹೆಚ್ಚಿನ ಸುದ್ಧಿಗಳನ್ನು ಮಾಡಬೇಕು. ಸಮಾಜದಲ್ಲಿ ಬದಲಾವಣೆ ತರುವ ಅಭಿಯಾನಗಳ ಮೂಲಕ ವರದಿ ಮಾಡಬೇಕು. ವಿಶೇಷವಾಗಿ, ಪತ್ರಕರ್ತರು ಮಕ್ಕಳ ಧ್ವನಿಯಾಗಿ, ಅವರ ಸಮಸ್ಯೆಗಳನ್ನು, ಅಭಿರುಚಿಗಳನ್ನು, ಸಾಧನೆಗಳನ್ನು ಜನರ ಮುಂದೆ ತರುವುದರಲ್ಲಿ ಪ್ರಮುಖ ಪಾತ್ರ ವಹಿಸಬೇಕು’ ಎಂದರು.</p>.<p>ಮಹಿಳಾ ವಿವಿಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಮಾತನಾಡಿ, ‘ಇತ್ತೀಚಿಗೆ ಅಭಿವೃದ್ಧಿ ವರದಿಗಾರಿಕೆಗೆ ಗಮನ ಕೊಡುವ ಪ್ರಮಾಣವು ಕಡಿಮೆಯಾಗಿದೆ. ಅಭಿವೃದ್ಧಿ ಪತ್ರಿಕೋದ್ಯಮವೇ ನಿಜವಾದ ಪ್ರಗತಿ ಮತ್ತು ಯಶಸ್ಸು ತಂದುಕೊಡುವ ಮಾರ್ಗವಾಗಿದೆ. ಈ ಕ್ಷೇತ್ರದಲ್ಲಿ ಸಾಧನೆ ಮಾಡುವುದಕ್ಕೆ, ಪತ್ರಕರ್ತರು ನಿಸ್ಸಂದೇಹವಾಗಿ ಸಮಾಜದ ಒಳಿತಿಗಾಗಿ ಬದ್ಧರಾಗಿರಬೇಕು’ ಎಂದು ಹೇಳಿದರು.</p>.<p>ಪತ್ರಕರ್ತರು ಮಕ್ಕಳ ಹಕ್ಕುಗಳು, ಶಿಕ್ಷಣ, ಆರೋಗ್ಯ, ಹಾಗೂ ಅವುಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಹೆಚ್ಚು ಆಳವಾದ, ಸಮಗ್ರ ವರದಿಗಳನ್ನು ಮಾಡಬೇಕು. ಇದರಿಂದಾಗಿ ಸಮಾಜದಲ್ಲಿ ಮಕ್ಕಳ ಅಭಿವೃದ್ದಿಗೆ ಮತ್ತು ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಪ್ರೋತ್ಸಾಹ ನೀಡಬಹುದು ಎಂದರು.</p>.<p>ಯುನಿಸೆಫ್ನ ಪ್ರಸೂನ್ ಸೇನ್, ಪತ್ರಕರ್ತ ಡಿ.ಬಿ.ವಡವಡಗಿ, ಬಸವರಾಜ ಉಳ್ಳಾಗಡ್ಡಿ, ಜಗದೀಶ್, ಸಹಾಯಕ ಪ್ರಾಧ್ಯಾಪಕಿ ತಮೀನಾ ಕೋಲಾರ, ಸಂದೀಪ್ ನಾಯಕ್ ಸೇರಿದಂತೆ ಅನೇಕರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>