<p><strong>ಸಿಂದಗಿ:</strong> ‘2013-2018ರ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕೊಟ್ಟ 158 ಭರವಸೆಗಳಲ್ಲಿ ‘ಇಂದಿರಾ ಕ್ಯಾಂಟಿನ್’ ಕೂಡ ಒಂದಾಗಿತ್ತು. ಇದು ಅವರ ಕನಸಿನ ಯೋಜನೆಯಾಗಿದೆ. ಇಂದು ಆರಂಭಗೊಂಡಿರುವ ಕ್ಯಾಂಟಿನ್ ನಿರಂತರವಾಗಿ ನಡೆಯಲಿ’ ಎಂದು ಶಾಸಕ ಅಶೋಕ ಮನಗೂಳಿ ಪುರಸಭೆ ಆಡಳಿತಕ್ಕೆ ಸೂಚನೆ ನೀಡಿದರು.</p>.<p>ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಮಂಗಳವಾರ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿ ಮಾತನಾಡಿದರು.</p>.<p>‘ಸಾರ್ವಜನಿಕರು ಇಲ್ಲಿ ಕಡಿಮೆ ದರದಲ್ಲಿ ನೀಡಲಾಗುವ ಉಪಾಹಾರ, ಊಟದ ಸದುಪಯೋಗ ಪಡೆದುಕೊಳ್ಳಬೇಕು. ಪುರಸಭೆ ಆಡಳಿತದ ಸದಸ್ಯರು, ಕಾರ್ಯಾಲಯದ ಸಿಬ್ಬಂದಿ ಕ್ಯಾಂಟಿನ್ ವ್ಯವಸ್ಥಿತವಾಗಿ ನಡೆಯುವಂತೆ ಎಚ್ಚರಿಕೆ ವಹಿಸಬೇಕು’ ಎಂದು ಸೂಚಿಸಿದರು.</p>.<p>‘ಸರ್ಕಾರ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಪಬ್ಲಿಕ್ ಸ್ಕೂಲ್ ಪ್ರಾರಂಭಿಸುವ ಉತ್ತಮ ಕಾರ್ಯ ಕೈಗೆತ್ತಿಕೊಂಡಿದೆ. ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸಿಕೊಡಲಾಗುವುದು’ ಎಂದು ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಮಾತನಾಡಿ, ‘ಇಂದಿರಾ ಕ್ಯಾಂಟಿನ್ ಅನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು. ಪುರಸಭೆ ಅಧಿಕಾರಿ ವರ್ಗ ನಿತ್ಯ ಕ್ಯಾಂಟಿನ್ಗೆ ಭೇಟಿ ನೀಡಿ ಗುಣಮಟ್ಟ ಕಾಪಾಡಿಕೊಳ್ಳಬೇಕು’ ಎಂದು ಸೂಚನೆ ನೀಡಿದರು.</p>.<p>ಜಿಲ್ಲಾ ನಗರಾಭಿವೃದ್ಧಿಕೋಶ ಯೋಜನಾ ನಿರ್ದೇಶಕ ಬದ್ರುದ್ದೀನ ಸೌದಾಗರ ಪ್ರಾಸ್ತಾವಿಕವಾಗಿ ಮಾತನಾಡಿ, ₹87 ಲಕ್ಷ ವೆಚ್ಚದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣಗೊಂಡಿದೆ’ ಎಂದು ತಿಳಿಸಿದರು.</p>.<p>ಶಾಸಕರು, ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಾರ್ವಜನಿಕರೊಂದಿಗೆ ಚೌಚೌ ಬಾತ್ ಉಪಾಹಾರ ಸೇವಿಸಿದರು.</p>.<p>ಪುರಸಭೆ ಉಪಾಧ್ಯಕ್ಷ ಸಂದೀಪ ಚೌರ, ಮುಖ್ಯಾಧಿಕಾರಿ ರಾಜಶೇಖರ ಎಸ್. ಪುರಸಭೆ ಸದಸ್ಯರು ಹಾಗೂ ಜನಪ್ರತಿನಿಧಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ:</strong> ‘2013-2018ರ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕೊಟ್ಟ 158 ಭರವಸೆಗಳಲ್ಲಿ ‘ಇಂದಿರಾ ಕ್ಯಾಂಟಿನ್’ ಕೂಡ ಒಂದಾಗಿತ್ತು. ಇದು ಅವರ ಕನಸಿನ ಯೋಜನೆಯಾಗಿದೆ. ಇಂದು ಆರಂಭಗೊಂಡಿರುವ ಕ್ಯಾಂಟಿನ್ ನಿರಂತರವಾಗಿ ನಡೆಯಲಿ’ ಎಂದು ಶಾಸಕ ಅಶೋಕ ಮನಗೂಳಿ ಪುರಸಭೆ ಆಡಳಿತಕ್ಕೆ ಸೂಚನೆ ನೀಡಿದರು.</p>.<p>ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಮಂಗಳವಾರ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿ ಮಾತನಾಡಿದರು.</p>.<p>‘ಸಾರ್ವಜನಿಕರು ಇಲ್ಲಿ ಕಡಿಮೆ ದರದಲ್ಲಿ ನೀಡಲಾಗುವ ಉಪಾಹಾರ, ಊಟದ ಸದುಪಯೋಗ ಪಡೆದುಕೊಳ್ಳಬೇಕು. ಪುರಸಭೆ ಆಡಳಿತದ ಸದಸ್ಯರು, ಕಾರ್ಯಾಲಯದ ಸಿಬ್ಬಂದಿ ಕ್ಯಾಂಟಿನ್ ವ್ಯವಸ್ಥಿತವಾಗಿ ನಡೆಯುವಂತೆ ಎಚ್ಚರಿಕೆ ವಹಿಸಬೇಕು’ ಎಂದು ಸೂಚಿಸಿದರು.</p>.<p>‘ಸರ್ಕಾರ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಪಬ್ಲಿಕ್ ಸ್ಕೂಲ್ ಪ್ರಾರಂಭಿಸುವ ಉತ್ತಮ ಕಾರ್ಯ ಕೈಗೆತ್ತಿಕೊಂಡಿದೆ. ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸಿಕೊಡಲಾಗುವುದು’ ಎಂದು ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಮಾತನಾಡಿ, ‘ಇಂದಿರಾ ಕ್ಯಾಂಟಿನ್ ಅನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು. ಪುರಸಭೆ ಅಧಿಕಾರಿ ವರ್ಗ ನಿತ್ಯ ಕ್ಯಾಂಟಿನ್ಗೆ ಭೇಟಿ ನೀಡಿ ಗುಣಮಟ್ಟ ಕಾಪಾಡಿಕೊಳ್ಳಬೇಕು’ ಎಂದು ಸೂಚನೆ ನೀಡಿದರು.</p>.<p>ಜಿಲ್ಲಾ ನಗರಾಭಿವೃದ್ಧಿಕೋಶ ಯೋಜನಾ ನಿರ್ದೇಶಕ ಬದ್ರುದ್ದೀನ ಸೌದಾಗರ ಪ್ರಾಸ್ತಾವಿಕವಾಗಿ ಮಾತನಾಡಿ, ₹87 ಲಕ್ಷ ವೆಚ್ಚದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣಗೊಂಡಿದೆ’ ಎಂದು ತಿಳಿಸಿದರು.</p>.<p>ಶಾಸಕರು, ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಾರ್ವಜನಿಕರೊಂದಿಗೆ ಚೌಚೌ ಬಾತ್ ಉಪಾಹಾರ ಸೇವಿಸಿದರು.</p>.<p>ಪುರಸಭೆ ಉಪಾಧ್ಯಕ್ಷ ಸಂದೀಪ ಚೌರ, ಮುಖ್ಯಾಧಿಕಾರಿ ರಾಜಶೇಖರ ಎಸ್. ಪುರಸಭೆ ಸದಸ್ಯರು ಹಾಗೂ ಜನಪ್ರತಿನಿಧಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>