<p><strong>ವಿಜಯಪುರ:</strong> ‘ಬೆಳಗಾವಿಯ ಸುವರ್ಣಸೌಧದ ಬಳಿ ಕಳೆದ ವರ್ಷ ಪಂಚಮಸಾಲಿ ಮೀಸಲಾತಿ ಹೋರಾಟಗಾರ ಮೇಲೆ ನಡೆದ ಲಾಠಿ ಚಾರ್ಜ್ ಪ್ರಕರಣ ಖಂಡಿಸಿ ಡಿ.10ರಂದು ಲಿಂಗಾಯತರ ಮೇಲಿನ ದೌರ್ಜನ್ಯ ದಿನವನ್ನು ಆಚರಿಸಲಾ ಗುವುದು’ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.</p><p>ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಳೆದ ವರ್ಷ ಬೆಳಗಾವಿಯ ಅಧಿವೇಶನ ಸಂದರ್ಭದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟಗಾರ ಮೇಲೆ ಸರ್ಕಾರ ಪೊಲೀಸರ ಮೂಲಕ ಲಾಠಿ ಚಾರ್ಜ್ ಮಾಡಿಸಿತ್ತು. ಇದರಿಂದ ನಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದು, ನೋವುಂಟಾಗಿದೆ. ಈ ಘಟನೆ ನಡೆದು ಡಿ.10ಕ್ಕೆ ಒಂದು ವರ್ಷವಾಗಲಿದೆ’ ಎಂದರು.</p><p>‘ಹೀಗಾಗಿ ಹಲ್ಲೆ ಘಟನೆ ಖಂಡಿಸಿ ಬೆಳಗಾವಿಯಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ಲಿಂಗಾಯತರ ಮೇಲಿನ ದೌರ್ಜನ್ಯ ದಿನ ಆಚರಿಸುತ್ತೇವೆ. ಅಂದು ಕೈ ಹಾಗೂ ಬಾಯಿಗೆ ಕಪ್ಪುಬಟ್ಟೆ ಕಟ್ಟಿಕೊಂಡು ಬೆಳಗಾವಿಯ ಗಾಂಧಿ ಭವನದಿಂದ ಸುವರ್ಣಸೌಧದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತೇವೆ’ ಎಂದರು.</p><p>‘ಜಿಲ್ಲಾಡಳಿತ ಅವಕಾಶ ಕೊಡುವ ಸ್ಥಳದವರೆಗೆ ತೆರಳಿ, ಅಲ್ಲಿಯೇ ಸಂಜೆಯವರೆಗೂ ಮೌನ ಸತ್ಯಾಗ್ರಹ ಮಾಡುತ್ತೇವೆ. ಇದರಲ್ಲಿ ಸಾವಿರಾರು ಜನರು ಸೇರಲಿದ್ದಾರೆ. ಈ ಮೂಲಕ ನ್ಯಾಯಯುತವಾಗಿ ನಮ್ಮ ಹಕ್ಕು ಪಡೆಯುವ ಸಂದೇಶವನ್ನು ರವಾನಿಸುತ್ತೇವೆ. ಅಲ್ಲದೇ, ಎಲ್ಲ ಲಿಂಗಾಯತ ಶಾಸಕರು ಸಹ ಅಂದು ಕಪ್ಪುಬಟ್ಟೆ ಕಟ್ಟಿಕೊಂಡರೆ, ಸಮುದಾಯದ ನಂಬಿಕೆ ಉಳಿಸಿಕೊಂಡಂ ತಾಗುತ್ತದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ‘ಬೆಳಗಾವಿಯ ಸುವರ್ಣಸೌಧದ ಬಳಿ ಕಳೆದ ವರ್ಷ ಪಂಚಮಸಾಲಿ ಮೀಸಲಾತಿ ಹೋರಾಟಗಾರ ಮೇಲೆ ನಡೆದ ಲಾಠಿ ಚಾರ್ಜ್ ಪ್ರಕರಣ ಖಂಡಿಸಿ ಡಿ.10ರಂದು ಲಿಂಗಾಯತರ ಮೇಲಿನ ದೌರ್ಜನ್ಯ ದಿನವನ್ನು ಆಚರಿಸಲಾ ಗುವುದು’ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.</p><p>ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಳೆದ ವರ್ಷ ಬೆಳಗಾವಿಯ ಅಧಿವೇಶನ ಸಂದರ್ಭದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟಗಾರ ಮೇಲೆ ಸರ್ಕಾರ ಪೊಲೀಸರ ಮೂಲಕ ಲಾಠಿ ಚಾರ್ಜ್ ಮಾಡಿಸಿತ್ತು. ಇದರಿಂದ ನಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದು, ನೋವುಂಟಾಗಿದೆ. ಈ ಘಟನೆ ನಡೆದು ಡಿ.10ಕ್ಕೆ ಒಂದು ವರ್ಷವಾಗಲಿದೆ’ ಎಂದರು.</p><p>‘ಹೀಗಾಗಿ ಹಲ್ಲೆ ಘಟನೆ ಖಂಡಿಸಿ ಬೆಳಗಾವಿಯಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ಲಿಂಗಾಯತರ ಮೇಲಿನ ದೌರ್ಜನ್ಯ ದಿನ ಆಚರಿಸುತ್ತೇವೆ. ಅಂದು ಕೈ ಹಾಗೂ ಬಾಯಿಗೆ ಕಪ್ಪುಬಟ್ಟೆ ಕಟ್ಟಿಕೊಂಡು ಬೆಳಗಾವಿಯ ಗಾಂಧಿ ಭವನದಿಂದ ಸುವರ್ಣಸೌಧದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತೇವೆ’ ಎಂದರು.</p><p>‘ಜಿಲ್ಲಾಡಳಿತ ಅವಕಾಶ ಕೊಡುವ ಸ್ಥಳದವರೆಗೆ ತೆರಳಿ, ಅಲ್ಲಿಯೇ ಸಂಜೆಯವರೆಗೂ ಮೌನ ಸತ್ಯಾಗ್ರಹ ಮಾಡುತ್ತೇವೆ. ಇದರಲ್ಲಿ ಸಾವಿರಾರು ಜನರು ಸೇರಲಿದ್ದಾರೆ. ಈ ಮೂಲಕ ನ್ಯಾಯಯುತವಾಗಿ ನಮ್ಮ ಹಕ್ಕು ಪಡೆಯುವ ಸಂದೇಶವನ್ನು ರವಾನಿಸುತ್ತೇವೆ. ಅಲ್ಲದೇ, ಎಲ್ಲ ಲಿಂಗಾಯತ ಶಾಸಕರು ಸಹ ಅಂದು ಕಪ್ಪುಬಟ್ಟೆ ಕಟ್ಟಿಕೊಂಡರೆ, ಸಮುದಾಯದ ನಂಬಿಕೆ ಉಳಿಸಿಕೊಂಡಂ ತಾಗುತ್ತದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>