ಸೊಲ್ಲಾಪುರ: ‘ಲಿಂಗಾಯತ ಸ್ವತಂತ್ರ ಧರ್ಮ. ಸ್ವತಂತ್ರ ಪೂರ್ವದಲ್ಲಿ ಸೊಲ್ಲಾಪುರದ ಸಿದ್ಧರಾಮನ ನೆಲದಲ್ಲಿ ಮೊದಲ ಬಾರಿಗೆ ಪ್ರತ್ಯೇಕ ಲಿಂಗಾಯತ ಧರ್ಮದ ಧ್ವನಿ ಎದ್ದಿತ್ತು’ ಎಂದು ನಿವೃತ್ತ ಐಎಎಸ್ ಅಧಿಕಾರಿ ಡಾ.ಎಸ್.ಎಂ.ಜಾಮದಾರ ಹೇಳಿದರು.
ತಾಲ್ಲೂಕಿನ ಕಂದಲಗಾವದ ಯಶರಾಜಫಾರ್ಮ್ ಹೌಸ್ನಲ್ಲಿ ಈಚೆಗೆ ಲಿಂಗಾಯತ ಸೇವಾ ಸಂಘ ಏರ್ಪಡಿಸಿದ್ದ ಲಿಂಗಾಯತ ಸ್ವತಂತ್ರ ಧರ್ಮ ಕುರಿತ ರಾಜ್ಯ ಮಟ್ಟದ ಚರ್ಚಾಕೂಟದಲ್ಲಿ ಅವರು ಮಾತನಾಡಿದರು.
‘1942ರಲ್ಲಿ ಸೊಲ್ಲಾಪುರದಲ್ಲಿ ಸ್ಥಾಪನೆಗೊಂಡ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿದ್ದ ಮಲ್ಲಪ್ಪ ವಾರದ ಮತ್ತು ಸರದಾರ ಮಡಿವಾಳೇಶ್ವರರ ನೇತೃತ್ವದಲ್ಲಿ ಪ್ರತ್ಯೇಕಲಿಂಗಾಯತ ಧರ್ಮದ ಹೋರಾಟ ಆರಂಭಗೊಂಡಿತು. ಅಂದಿನ ಬ್ರಿಟಿಷ್ ಪಾರ್ಲಿಮೆಂಟ್ನ ಪ್ರತಿನಿಧಿಯಾಗಿ ಭಾರತಕ್ಕೆ ಬಂದಿದ್ದ ಸೈಫ್ನ್ಕ್ರಿಸ್ಗೆ ಹಾಗೂ ಸಂವಿಧಾನ ರಚನಾ ಸಮಿತಿಗೆ ಈ ಕುರಿತಂತೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಸಂಬಂಧಿಸಿದ ದಾಖಲೆಗಳಿವೆ ಎಂದ ಅವರು, ಲಿಂಗಾಯತ ಅಸ್ಮಿತೆಗಾಗಿ ಹೋರಾಟ ಅನಿವಾರ್ಯ ಆಗಿರುವುದರಿಂದ ಸಮಾಜದವರು ಟೊಂಕ ಕಟ್ಟಿ ನಿಲ್ಲಬೇಕು’ ಎಂದರು.
ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ‘ಮಹಾರಾಷ್ಟ್ರದ ಲಿಂಗಾಯತರಿಂದಲೇ ಕರ್ನಾಟಕದ ಲಿಂಗಾಯತರು ಎಚ್ಚೆತ್ತುಗೊಂಡಿದ್ದು, ಅದಕ್ಕಾಗಿಯೇ ಸೊಲ್ಲಾಪುರದಲ್ಲಿ ಚರ್ಚಾಕೂಟ ಆಯೋಜಿಸಲಾಗಿದೆ. ಸ್ವತಂತ್ರ ಧರ್ಮಕ್ಕಾಗಿ ಎಲ್ಲರೂ ಹೋರಾಟ ಮಾಡಬೇಕಿದೆ’ ಎಂದು ತಿಳಿಸಿದರು.