<p><strong>ತಾಳಿಕೋಟೆ:</strong> ‘ಮನುಷ್ಯನ ಬದುಕು ಇಂದು ಯಾಂತ್ರಿಕೃತ ಗೊಂಡಿರುವುದರಿಂದ ಒತ್ತಡದಿಂದಾಗಿ ಮಾನಸಿಕ ನೆಮ್ಮದಿ ಇಲ್ಲದಂತಾಗಿದೆ. ಮಹಾಪುರುಷರ, ಸಂತ, ಶರಣರ ಜೀವನದ ಕುರಿತು ಪ್ರವಚನಗಳನ್ನು ಆಲಿಸುವುದರಿಂದ ಮಾನಸಿಕ ನೆಮ್ಮದಿ ಪ್ರಾಪ್ತಿಯಾಗಿತ್ತದೆ’ ಎಂದು ದೇವರಹಿಪ್ಪರಗಿ ಪರದೇಶಿ ಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ನಾವದಗಿ ಗ್ರಾಮದ ಪರ್ವತೇಶ್ವರ ಬ್ರಹನ್ಮಠದ ರಾಜ ಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯರ ಗುರು ಪಟ್ಟಾಧಿಕಾರದ ದ್ವಿತೀಯ ವಾರ್ಷಿಕೋತ್ಸವದ ಅಂಗವಾಗಿ ನಡೆಯುತ್ತಿರುವ ‘ಗುಡ್ಡಾಪುರದ ದಾನಮ್ಮ ದೇವಿ ಪುರಾಣ’ ಆರಂಭೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕಲಕೇರಿ ಹಿರೇಮಠದ ಸಿದ್ದರಾಮ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ರಾಜೇಂದ್ರ ಶ್ರೀಗಳ ಗುರು ಪಟ್ಟಾಧಿಕಾರದ ಕಾರ್ಯಕ್ರಮವನ್ನು ಇಡೀ ನಾಡಿನಲ್ಲಿಯೇ ಹೆಸರುವಾಸಿಯಾಗಿ ಮಾಡಿದ್ದೀರಿ, ಪೂಜ್ಯರ ಹಾಗೂ ಮಠದ ಕುರಿತು ಹೊಂದಿರುವ ಅಪಾರ ಕಾಳಜಿ ತೋರಿಸುತ್ತದೆ. ಪುರಾಣ ಕಾರ್ಯಕ್ರಮ ಮಾರ್ಚ್ 2ರ ವರೆಗೆ ನಡೆಯಲಿದೆ ಎಂದರು.</p>.<p>ಸಾಸನೂರ ತುಂಬಗಿ ಹಿರೇಮಠದ ಮಹಾಂತಲಿಂಗ ಶಿವಾಚಾರ್ಯರು, ರಾಜ ಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯ ಸ್ವಾಮೀಜಿ, ಗುರುಲಿಂಗಯ್ಯ ಹಿರೇಮಠ(ಶಹಾಪುರ) ಇದ್ದರು.</p>.<p>ಗ್ರಾಮ ದೇವಿಗೆ ಉಡಿತುಂಬಿ ಪರ್ವತೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಮೆರವಣಿಗೆಯೊಂದಿಗೆ ವೇದಿಕೆಗೆ ಆಗಮಿಸಲಾಯಿತು. ಪ್ರವಚನಕಾರ ರಾಚಯ್ಯ ಶಾಸ್ತ್ರಿ ಹಿರೇಮಠ, ಸಂಗೀತಗಾರ ಸೋಮಯ್ಯ ಸ್ವಾಮಿ, ತಬಲವಾದಕ ಮಹಾಂತೇಶ ಹರನಾಳ, ಸಾಹಿತಿ ಬಸವರಾಜ ಗೊರಜಿ(ಕೊಡಗಾನೂರ) ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾಳಿಕೋಟೆ:</strong> ‘ಮನುಷ್ಯನ ಬದುಕು ಇಂದು ಯಾಂತ್ರಿಕೃತ ಗೊಂಡಿರುವುದರಿಂದ ಒತ್ತಡದಿಂದಾಗಿ ಮಾನಸಿಕ ನೆಮ್ಮದಿ ಇಲ್ಲದಂತಾಗಿದೆ. ಮಹಾಪುರುಷರ, ಸಂತ, ಶರಣರ ಜೀವನದ ಕುರಿತು ಪ್ರವಚನಗಳನ್ನು ಆಲಿಸುವುದರಿಂದ ಮಾನಸಿಕ ನೆಮ್ಮದಿ ಪ್ರಾಪ್ತಿಯಾಗಿತ್ತದೆ’ ಎಂದು ದೇವರಹಿಪ್ಪರಗಿ ಪರದೇಶಿ ಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ನಾವದಗಿ ಗ್ರಾಮದ ಪರ್ವತೇಶ್ವರ ಬ್ರಹನ್ಮಠದ ರಾಜ ಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯರ ಗುರು ಪಟ್ಟಾಧಿಕಾರದ ದ್ವಿತೀಯ ವಾರ್ಷಿಕೋತ್ಸವದ ಅಂಗವಾಗಿ ನಡೆಯುತ್ತಿರುವ ‘ಗುಡ್ಡಾಪುರದ ದಾನಮ್ಮ ದೇವಿ ಪುರಾಣ’ ಆರಂಭೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕಲಕೇರಿ ಹಿರೇಮಠದ ಸಿದ್ದರಾಮ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ರಾಜೇಂದ್ರ ಶ್ರೀಗಳ ಗುರು ಪಟ್ಟಾಧಿಕಾರದ ಕಾರ್ಯಕ್ರಮವನ್ನು ಇಡೀ ನಾಡಿನಲ್ಲಿಯೇ ಹೆಸರುವಾಸಿಯಾಗಿ ಮಾಡಿದ್ದೀರಿ, ಪೂಜ್ಯರ ಹಾಗೂ ಮಠದ ಕುರಿತು ಹೊಂದಿರುವ ಅಪಾರ ಕಾಳಜಿ ತೋರಿಸುತ್ತದೆ. ಪುರಾಣ ಕಾರ್ಯಕ್ರಮ ಮಾರ್ಚ್ 2ರ ವರೆಗೆ ನಡೆಯಲಿದೆ ಎಂದರು.</p>.<p>ಸಾಸನೂರ ತುಂಬಗಿ ಹಿರೇಮಠದ ಮಹಾಂತಲಿಂಗ ಶಿವಾಚಾರ್ಯರು, ರಾಜ ಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯ ಸ್ವಾಮೀಜಿ, ಗುರುಲಿಂಗಯ್ಯ ಹಿರೇಮಠ(ಶಹಾಪುರ) ಇದ್ದರು.</p>.<p>ಗ್ರಾಮ ದೇವಿಗೆ ಉಡಿತುಂಬಿ ಪರ್ವತೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಮೆರವಣಿಗೆಯೊಂದಿಗೆ ವೇದಿಕೆಗೆ ಆಗಮಿಸಲಾಯಿತು. ಪ್ರವಚನಕಾರ ರಾಚಯ್ಯ ಶಾಸ್ತ್ರಿ ಹಿರೇಮಠ, ಸಂಗೀತಗಾರ ಸೋಮಯ್ಯ ಸ್ವಾಮಿ, ತಬಲವಾದಕ ಮಹಾಂತೇಶ ಹರನಾಳ, ಸಾಹಿತಿ ಬಸವರಾಜ ಗೊರಜಿ(ಕೊಡಗಾನೂರ) ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>