<p>ಬಸವನಬಾಗೇವಾಡಿ: ‘ಭಗವಂತನಲ್ಲಿ ಅಚಲವಾದ ಭಕ್ತಿಯಿಟ್ಟು ನಿಷ್ಠೆ, ಪ್ರಾಮಾಣಿಕತೆಯಿಂದ ಜೀವನ ನಡೆಸಬೇಕು’ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.</p>.<p>ಪಟ್ಟಣದ ತೆಲಗಿ ರಸ್ತೆಯಲ್ಲಿನ ಮಲ್ಲಿಕಾರ್ಜುನ ದೇವಸ್ಥಾನದ ಜಾತ್ರೆ ಅಂಗವಾಗಿ ಈಚೆಗೆ ನಡೆದ ಶಿವಯೋಗಿ ಸಿದ್ಧರಾಮೇಶ್ವರ ಮಹಾತ್ಮೆ ನಾಟಕ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಈ ದೇವಸ್ಥಾನವು ಸರ್ಕಾರದ ಯಾವುದೇ ಅನುದಾನ ಪಡೆಯದೇ ಭಕ್ತರೇ ನಿರ್ಮಾಣ ಮಾಡಿರುವುದು ಶ್ಲಾಘನೀಯ. ಮುಂಬರುವ ದಿನಗಳಲ್ಲಿ ಈ ದೇವಸ್ಥಾನಕ್ಕೆ ಬರಲು ಸುಸಜ್ಜಿತ ರಸ್ತೆ, ಬೀದಿದೀಪ, ದೇವಸ್ಥಾನದ ಪ್ರಾಂಗಣ ಉತ್ತಮವಾಗಿ ನಿರ್ಮಾಣ ಮಾಡಲು ಸಹಕಾರ ನೀಡುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಸಾನ್ನಿಧ್ಯ ವಹಿಸಿದ್ದ ಸಿದ್ಧಲಿಂಗ ಸ್ವಾಮೀಜಿ, ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ <a>ಐ.ಸಿ.ಪಟ್ಟಣಶೆಟ್ಟಿ</a>, ವಿಪಿಕೆಎಸ್ ಬ್ಯಾಂಕ್ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ ಮಾತನಾಡಿದರು.</p>.<p>ಪುರಸಭೆ ಸದಸ್ಯ ನೀಲು ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಜಾತ್ರಾ ಕಮಿಟಿ ಅಧ್ಯಕ್ಷ ಶರಣು ಮನಗೂಳಿ, ಮುಖಂಡರಾದ ಶ್ರೀಶೈಲ ಕೂಡಗಿ, ಪರಶುರಾಮ ಅಡಗಿಮನಿ, ವಿಠ್ಠಲ ಮಾಲಗಾರ ಇದ್ದರು.</p>.<p>ಚಂದ್ರಶೇಖರ ಹದಿಮೂರ ಸ್ವಾಗತಿಸಿದರು. ಕೊಟ್ರೇಶ ಹೆಗಡ್ಯಾಳ ನಿರೂಪಿಸಿದರು. <a>ಪಿ.ಎಸ್.ಬಾಗೇವಾಡಿ</a> ವಂದಿಸಿದರು .</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವನಬಾಗೇವಾಡಿ: ‘ಭಗವಂತನಲ್ಲಿ ಅಚಲವಾದ ಭಕ್ತಿಯಿಟ್ಟು ನಿಷ್ಠೆ, ಪ್ರಾಮಾಣಿಕತೆಯಿಂದ ಜೀವನ ನಡೆಸಬೇಕು’ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.</p>.<p>ಪಟ್ಟಣದ ತೆಲಗಿ ರಸ್ತೆಯಲ್ಲಿನ ಮಲ್ಲಿಕಾರ್ಜುನ ದೇವಸ್ಥಾನದ ಜಾತ್ರೆ ಅಂಗವಾಗಿ ಈಚೆಗೆ ನಡೆದ ಶಿವಯೋಗಿ ಸಿದ್ಧರಾಮೇಶ್ವರ ಮಹಾತ್ಮೆ ನಾಟಕ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಈ ದೇವಸ್ಥಾನವು ಸರ್ಕಾರದ ಯಾವುದೇ ಅನುದಾನ ಪಡೆಯದೇ ಭಕ್ತರೇ ನಿರ್ಮಾಣ ಮಾಡಿರುವುದು ಶ್ಲಾಘನೀಯ. ಮುಂಬರುವ ದಿನಗಳಲ್ಲಿ ಈ ದೇವಸ್ಥಾನಕ್ಕೆ ಬರಲು ಸುಸಜ್ಜಿತ ರಸ್ತೆ, ಬೀದಿದೀಪ, ದೇವಸ್ಥಾನದ ಪ್ರಾಂಗಣ ಉತ್ತಮವಾಗಿ ನಿರ್ಮಾಣ ಮಾಡಲು ಸಹಕಾರ ನೀಡುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಸಾನ್ನಿಧ್ಯ ವಹಿಸಿದ್ದ ಸಿದ್ಧಲಿಂಗ ಸ್ವಾಮೀಜಿ, ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ <a>ಐ.ಸಿ.ಪಟ್ಟಣಶೆಟ್ಟಿ</a>, ವಿಪಿಕೆಎಸ್ ಬ್ಯಾಂಕ್ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ ಮಾತನಾಡಿದರು.</p>.<p>ಪುರಸಭೆ ಸದಸ್ಯ ನೀಲು ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಜಾತ್ರಾ ಕಮಿಟಿ ಅಧ್ಯಕ್ಷ ಶರಣು ಮನಗೂಳಿ, ಮುಖಂಡರಾದ ಶ್ರೀಶೈಲ ಕೂಡಗಿ, ಪರಶುರಾಮ ಅಡಗಿಮನಿ, ವಿಠ್ಠಲ ಮಾಲಗಾರ ಇದ್ದರು.</p>.<p>ಚಂದ್ರಶೇಖರ ಹದಿಮೂರ ಸ್ವಾಗತಿಸಿದರು. ಕೊಟ್ರೇಶ ಹೆಗಡ್ಯಾಳ ನಿರೂಪಿಸಿದರು. <a>ಪಿ.ಎಸ್.ಬಾಗೇವಾಡಿ</a> ವಂದಿಸಿದರು .</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>