ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ನಾಮಪತ್ರ ಸಲ್ಲಿಕೆ ವೇಳೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಸಿ.ಟಿ.ರವಿ, ಕಲಬುರ್ಗಿ ಸಂಸದ ಉಮೇಶ ಜಾಧವ, ನಾರಾಯಣಸಾ ಭಾಂಡಗೆ, ಹಾಲಪ್ಪ ಆಚಾರ, ಜಗದೀಶ ಹಿರೇಮನಿ ಭಾಗಿಯಾಗಲಿದ್ದಾರೆ. ಜೊತೆಗೆ ಜಿಲ್ಲೆಯ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಾಯಕರು, ಪ್ರಮುಖರು, ಕಾರ್ಯಕರ್ತರು ಶೋಭಾಯಾತ್ರೆ ಮತ್ತು ಸಮಾವೇಶದಲ್ಲಿ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಶಕ್ತಿ ತುಂಬಲಿದ್ದಾರೆ ಎಂದು ಹೇಳಿದ್ದಾರೆ.