ವಿಜಯಪುರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಅವರು ಜಿಲ್ಲೆಯ ವಿವಿಧ ಚೆಕ್ ಪೋಸ್ಟ್ಗಳಿಗೆ ದಿಡೀರ್ ಭೇಟಿ ನೀಡಿ, ಕಾರ್ಯವೈಖರಿ ಪರಿಶೀಲಿಸಿದರು.
ಕೊಂಕಣಗಾವ, ಶಿರಡೋಣ, ಕನಕನಾಳ ಹಾಗೂ ಧೂಳಖೇಡ ಚೆಕ್ಪೋಸ್ಟ್ಗಳಿಗೆ ಜಿಲ್ಲಾಧಿಕಾರಿ ಅವರು ಅಧಿಕಾರಿಗಳೊಂದಿಗೆ ತೆರಳಿ ಕಾರು, ಟ್ರಕ್ ಸೇರಿದಂತೆ ವಿವಿಧ ವಾಹನಗಳನ್ನು ತಪಾಸಣೆ ಮಾಡಿದರು.