<p><strong>ಮುದ್ದೇಬಿಹಾಳ: </strong>ಬಡವರಿಗೆ ಪಂಚ ಗ್ಯಾರಂಟಿ ಯೋಜನೆಗಳು ತಲುಪಿದ್ದು, ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿ ರಾಜು ಆಲಗೂರ ಜಯಗಳಿಸುವುದು ಗ್ಯಾರಂಟಿ ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.</p>.<p>ತಾಲ್ಲೂಕಿನ ಶಿರೋಳದಲ್ಲಿ ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಒಮ್ಮೆಯೂ ಕ್ಷೇತ್ರದಲ್ಲಿ ಕಾಣಿಸಿಕೊಂಡಿಲ್ಲ. ಅವರ ಕೊಡುಗೆ ಶೂನ್ಯವಾಗಿದ್ದು ಕೋಮುವಾದಿಗಳಿಗೆ ಮತ ನೀಡಬೇಡಿ ಎಂದು ಹೇಳಿದರು.</p>.<p>ಯುವ ಮುಖಂಡ ಬುಡ್ಡೇಸಾಬ ಚಪ್ಪರಬಂದ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಈ ದೇಶಕ್ಕೆ ಸುಳ್ಳುಗಳನ್ನು ಕೊಟ್ಟಿರುವ ನಾಯಕ. ಅವರಿಂದ ದೊಡ್ಡ ದೊಡ್ಡ ಉದ್ಯಮಿಗಳ ಉದ್ಧಾರವಾಗಿದೆಯೇ ಹೊರತು ಬಡವರ ಉದ್ಧಾರವಾಗಿಲ್ಲ. ಬಡವರ ಖಾತೆಗೆ ₹15 ಲಕ್ಷ ಹತ್ತು ವರ್ಷವಾದರೂ ಬರಲೇ ಇಲ್ಲ ಎಂದು ಹೇಳಿದರು.</p>.<p>ಗ್ಯಾರಂಟಿ ಯೋಜನೆ ಸಮೀತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ,ಕಾಂಗ್ರೆಸ್ ಮುಖಂಡರಾದ ಗ್ರಾಪಂ ಮಾಜಿ ಸದಸ್ಯ ಶಂಕರಗೌಡ ಪಾಟೀಲ್,ಚೆನ್ನಪ್ಪ ವಿಜಯಕರ್,ವಾಲ್ಮೀಕಿ ಸಮಾಜದ ಮುಖಂಡ ಹುಲಗಪ್ಪ ನಾಯ್ಕಮಕ್ಕಳ,ರಾಮಣ್ಣ ರಾಜನಾಳ,ತಿಪ್ಪಣ್ಣ ದೊಡಮನಿ ಇದ್ದರು. ಗ್ರಾಮದ ಮತದಾರರಿಗೆ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದ್ದೇಬಿಹಾಳ: </strong>ಬಡವರಿಗೆ ಪಂಚ ಗ್ಯಾರಂಟಿ ಯೋಜನೆಗಳು ತಲುಪಿದ್ದು, ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿ ರಾಜು ಆಲಗೂರ ಜಯಗಳಿಸುವುದು ಗ್ಯಾರಂಟಿ ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.</p>.<p>ತಾಲ್ಲೂಕಿನ ಶಿರೋಳದಲ್ಲಿ ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಒಮ್ಮೆಯೂ ಕ್ಷೇತ್ರದಲ್ಲಿ ಕಾಣಿಸಿಕೊಂಡಿಲ್ಲ. ಅವರ ಕೊಡುಗೆ ಶೂನ್ಯವಾಗಿದ್ದು ಕೋಮುವಾದಿಗಳಿಗೆ ಮತ ನೀಡಬೇಡಿ ಎಂದು ಹೇಳಿದರು.</p>.<p>ಯುವ ಮುಖಂಡ ಬುಡ್ಡೇಸಾಬ ಚಪ್ಪರಬಂದ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಈ ದೇಶಕ್ಕೆ ಸುಳ್ಳುಗಳನ್ನು ಕೊಟ್ಟಿರುವ ನಾಯಕ. ಅವರಿಂದ ದೊಡ್ಡ ದೊಡ್ಡ ಉದ್ಯಮಿಗಳ ಉದ್ಧಾರವಾಗಿದೆಯೇ ಹೊರತು ಬಡವರ ಉದ್ಧಾರವಾಗಿಲ್ಲ. ಬಡವರ ಖಾತೆಗೆ ₹15 ಲಕ್ಷ ಹತ್ತು ವರ್ಷವಾದರೂ ಬರಲೇ ಇಲ್ಲ ಎಂದು ಹೇಳಿದರು.</p>.<p>ಗ್ಯಾರಂಟಿ ಯೋಜನೆ ಸಮೀತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ,ಕಾಂಗ್ರೆಸ್ ಮುಖಂಡರಾದ ಗ್ರಾಪಂ ಮಾಜಿ ಸದಸ್ಯ ಶಂಕರಗೌಡ ಪಾಟೀಲ್,ಚೆನ್ನಪ್ಪ ವಿಜಯಕರ್,ವಾಲ್ಮೀಕಿ ಸಮಾಜದ ಮುಖಂಡ ಹುಲಗಪ್ಪ ನಾಯ್ಕಮಕ್ಕಳ,ರಾಮಣ್ಣ ರಾಜನಾಳ,ತಿಪ್ಪಣ್ಣ ದೊಡಮನಿ ಇದ್ದರು. ಗ್ರಾಮದ ಮತದಾರರಿಗೆ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>