ಭಾನುವಾರ, ಮಾರ್ಚ್ 26, 2023
23 °C

ಚಡಚಣ | ಲೋಕಾಯುಕ್ತ ದಾಳಿ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಡಚಣ: ಪಟ್ಟಣದ ಪಟ್ಟಣ ಪಂಚಾಯ್ತಿ ಕಚೇರಿ ಮೇಲೆ ಶನಿವಾರ ಲೋಕಾಯುಕ್ತರು ದಾಳಿ ಮಾಡಿ ₹ 7 ಸಾವಿರ ನಗದು ಹಣ ಪಡೆಯುತ್ತಿರುವ ಇಬ್ಬರು ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಮನೆ ಕಟ್ಟಡ ಕಟ್ಟಲು ಕಟ್ಟಡ ರಚನಾ ಪ್ರಮಾಣ ಪಾತ್ರ ನೀಡಲು ವ್ಯಕ್ತಿಯೊಬ್ಬರಿಂದ ₹7 ಸಾವಿರ ನಗದು ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಕಂಪ್ಯೂಟರ್ ಪ್ರೋಗ್ರಾಮರ್ ನಾಗರಾಜ ಕುಲಕರ್ಣಿ ಹಾಗೂ ಎಸ್ ಡಿ ಎ ಶಿವಾನಂದ ಜಂಗಲಗಿ ಇಬ್ಬರು  ಸಿಕ್ಕಿಬಿದ್ದಿದ್ದಾರೆ. ಅವರನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ₹ 20 ಸಾವಿರ ಪಡೆದಿದ್ದರು. ಇನ್ನೂ₹ 7 ಏಳು ಸಾವಿರ ಹಣದ ಬೇಡಿಕೆ ಇಟ್ಟಿದ್ದರಿಂದ ದೂರಾದಾರ ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರಿನನ್ವಯ ಈ ದಾಳಿ ಮಾಡಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಅರುಣ ನಾಯಕ, ಪೊಲೀಸ್ ಇನ್‌ಸ್ಪೆಕ್ಟರ್ ಆನಂದ ತಕ್ಕಣ್ಣವರ ಹಾಗೂ ಆನಂದ ಡೋಣಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು