ವಿಜಯಪುರ: ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದ ಧೂಳಖೇಡ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ ಪಿ. ಅನಿತಾ ಹದ್ದನವರ ನೇತೃತ್ವದಲ್ಲಿ ಲೋಕಾಯುಕ್ತ ಡಿಎಸ್ ಪಿ ಅರುಣ ನಾಯಕ, ಪುಷ್ಪ ಲತಾ, ಸಿಪಿಐ ಮಹೇಂದ್ರ ನಾಯಕ, ಆನಂದ ದೋಣಿ, ಆನಂದ ಕಕ್ಕನವರ ಸೇರಿದಂತೆ 20 ಕ್ಕೂ ಹೆಚ್ಚು ಸಿಬ್ಬಂದಿ ಧೂಳಖೇಡ ಚೆಕ್ ಪೋಸ್ಟ್ ಮೇಲೆ ಬೆಳಿಗ್ಗೆ 5 ಗಂಟೆ ಸುಮಾರಿಗೆ ದಾಳಿ ನಡೆಸಿದರು.
ದಾಳಿ ವೇಳೆ 10 ಜನ ಹೋಮ್ ಗಾರ್ಡ್ ಸಿಬ್ಬಂದಿ, ಆರ್ ಟಿಒ ಅಧಿಕಾರಗಳನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ₹ 3 ಲಕ್ಷಕ್ಕೂ ಅಧಿಕ ಹಣ ವಶಪಡಿಸಿಕೊಂಡಿದ್ದಾರೆ. ತಪಾಸಣೆ ಮುಂದುವರಿದಿದೆ.