ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧೂಳಖೇಡ ಚೆಕ್ ಪೊಸ್ಟ್ ಮೇಲೆ ಲೋಕಾಯುಕ್ತ ದಾಳಿ

Last Updated 30 ಸೆಪ್ಟೆಂಬರ್ 2022, 5:44 IST
ಅಕ್ಷರ ಗಾತ್ರ

ವಿಜಯಪುರ: ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದ ಧೂಳಖೇಡ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ
ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್ ಪಿ. ಅನಿತಾ ಹದ್ದನವರ ನೇತೃತ್ವದಲ್ಲಿ ಲೋಕಾಯುಕ್ತ ಡಿಎಸ್ ಪಿ ಅರುಣ ನಾಯಕ, ಪುಷ್ಪ ಲತಾ, ಸಿಪಿಐ ಮಹೇಂದ್ರ ನಾಯಕ, ಆನಂದ ದೋಣಿ, ಆನಂದ ಕಕ್ಕನವರ ಸೇರಿದಂತೆ 20 ಕ್ಕೂ ಹೆಚ್ಚು ಸಿಬ್ಬಂದಿ ಧೂಳಖೇಡ ಚೆಕ್ ಪೋಸ್ಟ್ ಮೇಲೆ ಬೆಳಿಗ್ಗೆ 5 ಗಂಟೆ ಸುಮಾರಿಗೆ ದಾಳಿ ನಡೆಸಿದರು.

ದಾಳಿ ವೇಳೆ 10 ಜನ ಹೋಮ್ ಗಾರ್ಡ್ ಸಿಬ್ಬಂದಿ, ಆರ್ ಟಿಒ ಅಧಿಕಾರಗಳನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ₹ 3 ಲಕ್ಷಕ್ಕೂ ಅಧಿಕ ಹಣ ವಶಪಡಿಸಿಕೊಂಡಿದ್ದಾರೆ. ತಪಾಸಣೆ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT