ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾದೇವ ಭೈರಗೊಂಡ ಶರಣಾಗತಿ ಸಾಧ್ಯತೆ

ಭೀಮಾತೀರದ ರೌಡಿ ಗಂಗಾಧರ ಚಡಚಣ ಕೊಲೆ ಪ್ರಕರಣ
Last Updated 26 ಜೂನ್ 2018, 15:48 IST
ಅಕ್ಷರ ಗಾತ್ರ

ವಿಜಯಪುರ: ಭೀಮಾ ತೀರದ ರೌಡಿ ಗಂಗಾಧರ ಚಡಚಣ ಕೊಲೆ ಪ್ರಕರಣದಲ್ಲಿ ಒಂದನೇ ಆರೋಪಿಯಾಗಿರುವ, ಕಾಂಗ್ರೆಸ್‌ ಮುಖಂಡ ಮಹಾದೇವ ಭೈರಗೊಂಡ ನ್ಯಾಯಾಲಯಕ್ಕೆ ಶರಣಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ತನ್ನ ವಿರುದ್ಧ ದೂರು ದಾಖಲಾದ (ಜೂನ್‌ 9) ನಂತರ ನಾಪತ್ತೆಯಾಗಿರುವ ಭೈರಗೊಂಡ, ಪೊಲೀಸರ ಶೋಧ ಕಾರ್ಯಾಚರಣೆ ಬಿರುಸುಗೊಂಡಿದ್ದರಿಂದ ನೇರವಾಗಿ ನ್ಯಾಯಾಲಯಕ್ಕೆ ಶರಣಾಗುವ ಚಿಂತನೆ ನಡೆಸಿದ್ದಾಗಿ ಭೈರಗೊಂಡ ಆಪ್ತವಲಯ ‘ಪ್ರಜಾವಾಣಿ’ಗೆ ತಿಳಿಸಿದೆ.

ಜಾಮೀನಿಗೆ ಸಿದ್ಧತೆ ಮಾಡಿಕೊಂಡೇ ಆರೋಪಿಯು ಈ ತಂತ್ರಗಾರಿಕೆ ನಡೆಸಿದ್ದಾಗಿ ಹೇಳಲಾಗುತ್ತಿದ್ದು, ಯಾವುದೇ ವೇಳೆ ಶರಣಾಗುವ ಸಾಧ್ಯತೆ ಇದೆ ಎಂದು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT