<p><strong>ಚಡಚಣ</strong>: ಸಾಮೂಹಿಕ ಧಾರ್ಮಿಕ ವಿಧಿ-ವಿಧಾನಗಳ ಆಚರಣೆ ಹಾಗೂ ಪೂಜೆ ಪುನಸ್ಕಾರಗಳಿಂದ ಮಾನಸಿಕ ನೆಮ್ಮದಿಯೊಂದಿಗೆ ಸಮಾಜದಲ್ಲಿ ಸಹಬಾಳ್ವೆ ಮೂಡಿಸಲು ಸಾಧ್ಯ ಎಂದು ತದ್ದೇವಾಡಿ ಹಿರೇಮಠದ ಮಹಾಂತೇಶ ಸ್ವಾಮೀಜಿ ಹೇಳಿದರು.</p>.<p>ಸಮೀಪದ ಬರಡೋಲ ಗ್ರಾಮದಲ್ಲಿ ಮಂಗಳವಾರ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಆಯೋಜಿಸಲಾದ ಸಾಮೂಹಿಕ ಅಷ್ಟಲಕ್ಷ್ಮೀ ಪೂಜೆ ಮತ್ತು ಧರ್ಮ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.</p>.<p>ರೇಣುಕಾ ವಿ ಕಟಕದೊಂಡ ಕಾರ್ಯಕ್ರಮ ಉದ್ಘಾಟಿಸಿದರು. ಆರ್ಟಿಓ ರವಿ ಭೀಸೆ, ವಕೀಲ ಜಿ.ಎಸ್.ಪವಾರ ಮಾತನಾಡಿದರು. ತಾಲ್ಲೂಕು ಯೋಜನಾಧಿಕಾರಿ ನಟರಾಜ್ ಎಲ್. ಎಮ್ ಪ್ರಾಸ್ತವಿಕವಾಗಿ ಮಾತನಾಡಿದರು. ಬಾಪೂರಾಯಗೌಡ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು.</p>.<p>ಜಿಲ್ಲಾ ಪಂಚಾಯ್ತಿ ಮಾಜಿ ಉಪಾದ್ಯಕ್ಷ ಶ್ರೀಶೈಲಗೌಡ ಬಿರಾದಾರ, ಮುಖಂಡರಾದ ಶ್ರೀಶೈಲ್ ಕುಂಬಾರ ಬಸವರಾಜ್ ತೊಡಕರ್, ಇನಾಂ ಸಾಬ್ ಹೊನಮೂರಗಿ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಒಕ್ಕೂಟ ಅಧ್ಯಕ್ಷರು, ವಲಯದ ಸೇವಾ ಪ್ರತಿನಿಧಿಗಳು ಇದ್ದರು.</p>.<p>ಈ ಸಂದರ್ಭದಲ್ಲಿ ಪತ್ರಿಕಾ ಪ್ರತಿನಿಧಿಗಳಿಗೆ ಸನ್ಮಾನಿಸಲಾಯಿತು ತಾಲ್ಲೂಕಿನ ಕೃಷಿ ಮೇಲ್ವಿಚಾರಕ ಸುದೀಪ್ ಎಸ್ ಕೆ ನಿರೂಪಿಸಿದರು. ವಲಯದ ಮೇಲ್ವಿಚಾರಕ ಮಾಂತೇಶ್ ವಂದಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಡಚಣ</strong>: ಸಾಮೂಹಿಕ ಧಾರ್ಮಿಕ ವಿಧಿ-ವಿಧಾನಗಳ ಆಚರಣೆ ಹಾಗೂ ಪೂಜೆ ಪುನಸ್ಕಾರಗಳಿಂದ ಮಾನಸಿಕ ನೆಮ್ಮದಿಯೊಂದಿಗೆ ಸಮಾಜದಲ್ಲಿ ಸಹಬಾಳ್ವೆ ಮೂಡಿಸಲು ಸಾಧ್ಯ ಎಂದು ತದ್ದೇವಾಡಿ ಹಿರೇಮಠದ ಮಹಾಂತೇಶ ಸ್ವಾಮೀಜಿ ಹೇಳಿದರು.</p>.<p>ಸಮೀಪದ ಬರಡೋಲ ಗ್ರಾಮದಲ್ಲಿ ಮಂಗಳವಾರ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಆಯೋಜಿಸಲಾದ ಸಾಮೂಹಿಕ ಅಷ್ಟಲಕ್ಷ್ಮೀ ಪೂಜೆ ಮತ್ತು ಧರ್ಮ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.</p>.<p>ರೇಣುಕಾ ವಿ ಕಟಕದೊಂಡ ಕಾರ್ಯಕ್ರಮ ಉದ್ಘಾಟಿಸಿದರು. ಆರ್ಟಿಓ ರವಿ ಭೀಸೆ, ವಕೀಲ ಜಿ.ಎಸ್.ಪವಾರ ಮಾತನಾಡಿದರು. ತಾಲ್ಲೂಕು ಯೋಜನಾಧಿಕಾರಿ ನಟರಾಜ್ ಎಲ್. ಎಮ್ ಪ್ರಾಸ್ತವಿಕವಾಗಿ ಮಾತನಾಡಿದರು. ಬಾಪೂರಾಯಗೌಡ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು.</p>.<p>ಜಿಲ್ಲಾ ಪಂಚಾಯ್ತಿ ಮಾಜಿ ಉಪಾದ್ಯಕ್ಷ ಶ್ರೀಶೈಲಗೌಡ ಬಿರಾದಾರ, ಮುಖಂಡರಾದ ಶ್ರೀಶೈಲ್ ಕುಂಬಾರ ಬಸವರಾಜ್ ತೊಡಕರ್, ಇನಾಂ ಸಾಬ್ ಹೊನಮೂರಗಿ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಒಕ್ಕೂಟ ಅಧ್ಯಕ್ಷರು, ವಲಯದ ಸೇವಾ ಪ್ರತಿನಿಧಿಗಳು ಇದ್ದರು.</p>.<p>ಈ ಸಂದರ್ಭದಲ್ಲಿ ಪತ್ರಿಕಾ ಪ್ರತಿನಿಧಿಗಳಿಗೆ ಸನ್ಮಾನಿಸಲಾಯಿತು ತಾಲ್ಲೂಕಿನ ಕೃಷಿ ಮೇಲ್ವಿಚಾರಕ ಸುದೀಪ್ ಎಸ್ ಕೆ ನಿರೂಪಿಸಿದರು. ವಲಯದ ಮೇಲ್ವಿಚಾರಕ ಮಾಂತೇಶ್ ವಂದಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>