ಜತ್(ಮಹಾರಾಷ್ಟ್ರ): ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕಾರಣಕ್ಕೆ ಮಹಾರಾಷ್ಟ್ರ ಸರ್ಕಾರ ರಾಜ್ಯದ ಗಡಿ ಭಾಗದಲ್ಲಿರುವ ಗ್ರಾಮಗಳಲ್ಲಿ ಅಭಿವೃದ್ದಿ ಕಡೆಗಣಿಸಿದೆ. ಶಿಕ್ಷಣ, ಆರೋಗ್ಯ, ರಸ್ತೆ, ಸಾರಿಗೆ, ನೀರಾವರಿ ಸೌಲಭ್ಯ ಸೇರಿದಂತೆ ಮೂಲಸೌಕರ್ಯ ನೀಡದೇ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಸಾಂಗ್ಲಿ ಜಿಲ್ಲೆ ಜತ್ ತಾಲ್ಲೂಕಿನ ಸಿದ್ದನಾಥ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿದರು.