ವಿಜಯಪುರ: ನಗರದ ಇಬ್ರಾಹಿಂಪುರ ಬಳಿ ಶುಕ್ರವಾರ ಮಧ್ಯಾಹ್ನ ಯುವಕನೊಬ್ಬ ರೈಲು ಬರುವ ವೇಳೆ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರೈಲಿನಡಿ ಸಿಲುಕಿದ ಯುವಕನ ದೇಹ ಛಿದ್ರ, ಛಿದ್ರವಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನ ಗುರುತು ಪತ್ತೆಯಾಗಿಲ್ಲ.
ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಯುವಕನ ದೇಹದ ಭಾಗಗಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ಹಾಕಿ, ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು.