ವಿಜಯಪುರ: ಪತ್ನಿಯ ಶೀಲ ಶಂಕಿಸಿ ಕೊಲೆಗೈದಿದ್ದ ಆರೋಪಿ ಪತಿಗೆ ಜಿಲ್ಲಾ ಸೆಷನ್ಸ್ ಮೂರನೇ ಹೆಚ್ಚುವರಿ ನ್ಯಾಯಾಲಯವು ₹ 25 ಸಾವಿರ ದಂಡ ಹಾಗೂ ಜೀವಾವಧಿ ಶಿಕ್ಷೆ ವಿಧಿಸಿದೆ.
ಕಲಕೇರಿಯ ಅಬ್ದುಲ್ ರೆಹಮಾನ್ ಅಂಗಡಿ ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. ಈತ ತನ್ನ ಪತ್ನಿ ಯಾಸ್ಮಿನ್ ಅವರನ್ನು 2017 ಜನವರಿ 27ರಂದು ಮನೆಯಲ್ಲಿ ಜಗಳವಾಡಿ, ಕೈಯಿಂದ ಹೊಡೆದು ಬಳಿಕ ಹಗ್ಗದಿಂದ ನೇಣುಹಾಕಿ ಕೊಲೆಗೈದಿದ್ದ. ಈ ಬಗ್ಗೆ ಕಲಕೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಸಾಕ್ಷಾಧಾರಗಳನ್ನು ಪರಿಶೀಲಿಸಿದ ನ್ಯಾಯಾಧೀಶ ರವೀಂದ್ರ ಕಾರಬರಿ ಬುಧವಾರ ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದ್ದಾರೆ ಎಂದು ಸರ್ಕಾರಿ ಅಭಿಯೋಜಕ ಎಸ್.ಆರ್.ಹೊಸಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.