‘ಗಣರಾಜ್ಯೋತ್ಸವದ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವ ಸಂಪ್ರದಾಯ ಗ್ರಾಮದಲ್ಲಿ ಮೊದಲಿನಿಂದಲೂ ಇದೆ. ಆಕಸ್ಮಿಕವಾಗಿ ಗುಂಡು ಹಾರಿ ನನ್ನ ಕಾಲಿಗೆ ಬಿದ್ದಿದೆ. ಇದರ ಹಿಂದೆ ಯಾವುದೇ ದುರುದ್ದೇಶವಿಲ್ಲ, ಇದನ್ನು ವಿವಾದ ಮಾಡುವ ಅಗತ್ಯವಿಲ್ಲ, ಊರಿನಲ್ಲಿ ನಾವೆಲ್ಲರೂ ಒಂದೇ ತಾಯಿ ಮಕ್ಕಳಂತೆ ಇದ್ದೇವೆ. ನಮ್ಮ ನಡುವೆ ಯಾವುದೇ ದ್ವೇಷವಿಲ್ಲ, ಗುಂಡು ಹಾರಿಸಿದವ ನನ್ನ ಮಗನಿದ್ದಂತೆ’ ಎಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸೋಮವ್ವ ಹೊಸಮನಿ ಸ್ಪಷ್ಟನೆ ನೀಡುವ ಮೂಲಕ ಘಟನೆಗೆ ತೆರೆ ಎಳೆದಿದ್ದಾರೆ.
ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪಿಎಸ್ಐ ಸೋಮೇಶ ಗೆಜ್ಜಿ ತಿಳಿಸಿದ್ದಾರೆ.